Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:4 - ಕನ್ನಡ ಸತ್ಯವೇದವು J.V. (BSI)

4 ಯಾಕಂದರೆ ನೀವು ಐಗುಪ್ತದೇಶದಿಂದ ಬಂದಾಗ [ಅಮ್ಮೋನಿಯರು] ಅನ್ನ ಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; [ಮೋವಾಬ್ಯರು] ನಿಮ್ಮನ್ನು ಶಪಿಸುವದಕ್ಕಾಗಿ ಬೆಯೋರನ ಮಗನಾದ ಬಿಳಾಮನಿಗೆ ಹಣ ಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾವಿುನ ಪೆತೋರೂರಿನಿಂದ ಅವನನ್ನು ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾಕೆಂದರೆ ನೀವು ಐಗುಪ್ತದೇಶದಿಂದ ಬಂದಾಗ ಅಮ್ಮೋನಿಯರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ಮೋವಾಬ್ಯರು ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗನಾದ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರ್ ಊರಿನಿಂದ ಅವನನ್ನು ಕರೆಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಏಕೆಂದರೆ ನೀವು ಈಜಿಪ್ಟ್ ದೇಶದಿಂದ ಬಂದಾಗ ಅವರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರೂರಿನಿಂದ ಅವನನ್ನು ಕರೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯಾಕೆಂದರೆ ಇಸ್ರೇಲರು ಈಜಿಪ್ಟಿನಿಂದ ಹೊರಟುಬಂದು ಪ್ರಯಾಣದಲ್ಲಿದ್ದಾಗ ಅವರಿಗೆ ರೊಟ್ಟಿಯನ್ನಾಗಲಿ ನೀರನ್ನಾಗಲಿ ಕೊಡಲು ಅವರು ನಿರಾಕರಿಸಿದ್ದರು. ಅವರು ಮೆಸಪೊಟೋಮಿಯದಿಂದ ಬಿಳಾಮನನ್ನು ಕರೆಸಿ ಇಸ್ರೇಲರನ್ನು ಶಪಿಸುವಂತೆ ಬಲವಂತಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ನೀವು ಈಜಿಪ್ಟನ್ನು ಬಿಟ್ಟು ಬರುವಾಗ, ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವುದಕ್ಕೆ ಎದುರುಗೊಳ್ಳಲಿಲ್ಲ. ನಿಮ್ಮನ್ನು ಶಪಿಸುವುದಕ್ಕೆ ಮೆಸೊಪೊತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ಬಿಳಾಮನಿಗೆ ಕೂಲಿ ಕೊಟ್ಟು ನಿಮಗೆ ವಿರೋಧವಾಗಿ ಕರೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:4
19 ತಿಳಿವುಗಳ ಹೋಲಿಕೆ  

ಯಾಕಂದರೆ ಅವರು ಇಸ್ರಾಯೇಲ್ಯರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ; ಅವರನ್ನು ಶಪಿಸುವದಕ್ಕಾಗಿ ಬಿಳಾಮನಿಗೆ ಹಣಕೊಟ್ಟು ಅವನನ್ನು ಕರಿಸಿದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಅಶೀರ್ವಾದವನ್ನೇ ಹೇಳಿಸಿದನು ಎಂಬ ಮಾತು ಬರೆದಿರುವದಾಗಿ ಕಂಡು ಬಂತು.


ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅಧರ್ಮದಿಂದ ದೊರಕುವ ದ್ರವ್ಯವನ್ನು ಪ್ರೀತಿಸಿದನು;


ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ನಿಮ್ಮನ್ನು ತಾಕುವವನು ಯೆಹೋವನ ಕಣ್ಣುಗುಡ್ಡನ್ನು ತಾಕುವವನಾಗಿದ್ದಾನೆ. ಆದಕಾರಣ [ತನ್ನ] ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ -


(ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹುಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರುಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)


ಉಣ್ಣೆ ಕತ್ತರಿಸುವವರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನೂ ಆಹಾರಪಾನಗಳನ್ನೂ ಎತ್ತಿ ಎಲ್ಲಿಂದಲೋ ಬಂದವರಿಗೆ ಕೊಟ್ಟುಬಿಡಬೇಕೋ ಎಂದು ಉತ್ತರಕೊಟ್ಟನು.


ಆಗ ಬಿಳಾಮನು ಪದ್ಯರೂಪವಾಗಿ ನುಡಿದದ್ದೇನಂದರೆ - ಬಾಲಾಕನು ನನ್ನನ್ನು ಅರಾವಿುನಿಂದ ಕರಿಸಿದನು; ಮೋವಾಬ್ಯರ ಅರಸನು ಮೂಡಲಬೆಟ್ಟಗಳಿಂದ ನನ್ನನ್ನು ಬರಮಾಡಿದನು. ನೀನು ಬಂದು ಯಾಕೋಬವಂಶದವರನ್ನು ನನಗೋಸ್ಕರ ಶಪಿಸಬೇಕು; ಇಸ್ರಾಯೇಲ್ಯರಿಗೆ ದುರ್ಗತಿಯುಂಟಾಗಲಿ ಎಂದು ಆಕ್ರೋಶಿಸಬೇಕು ಎಂದು ನನಗೆ ಹೇಳಿದನು.


ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ಏನು ಹೇಳಿದರೂ ಅದನ್ನು ಮಾಡುತ್ತೇನೆ; ನೀನು ಅಗತ್ಯವಾಗಿ ಬಂದು ಈ ಜನವನ್ನು ನನಗೋಸ್ಕರ ಶಪಿಸಬೇಕೆಂದು ಚಿಪ್ಪೋರನ ಮಗನಾದ ಬಾಲಾಕನು ಹೇಳುತ್ತಾನೆಂದು ತಿಳಿಸಿದರು.


ಅವನು ನೆಲಕ್ಕೆ ಬಿದ್ದು - ಸೌಲನೇ, ಸೌಲನೇ, ನನ್ನನ್ನು ಯಾಕೆ ಹಿಂಸೆ ಪಡಿಸುತ್ತೀ ಎಂದು ಹೇಳುವ ವಾಣಿಯನ್ನು ಕೇಳಿದನು.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಅವರ ಗತಿಯನ್ನು ಏನು ಹೇಳಲಿ; ಇವರು ಕಾಯಿನನ ಮಾರ್ಗವನ್ನು ಹಿಡಿದವರೂ ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಣುಗಿದವರೂ ಕೋರಹನಂತೆ ಎದುರುಮಾತುಗಳನ್ನಾಡಿ ನಾಶವಾಗಿಹೋಗತಕ್ಕವರೂ ಆಗಿದ್ದಾರೆ.


ಅನಂತರ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರಾಯೇಲ್ಯರಾದ ನಿಮಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಎದ್ದು ನಿಮ್ಮನ್ನು ಶಪಿಸುವದಕ್ಕೋಸ್ಕರ ಬೆಯೋರನ ಮಗನಾದ ಬಿಳಾಮನನ್ನು ಕರೇಕಳುಹಿಸಿದನು.


ಅಮ್ಮೋನ್ಯರನ್ನು ಕುರಿತದ್ದು. ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನಮಾಡಿಕೊಂಡಿರುವದೇಕೆ, ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?


ಇದಾದನಂತರ ಪ್ರಧಾನಪುರುಷರು ನನ್ನ ಬಳಿಗೆ ಬಂದು - ಇಸ್ರಾಯೇಲ್ಯರಲ್ಲಿ ಸಾಧಾರಣಜನರೂ ಯಾಜಕರೂ ಲೇವಿಯರೂ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಎಂಬ ಅನ್ಯದೇಶಗಳವರ ಬಳಕೆಯನ್ನು ತೊರೆಯದೆ ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿ


ವಿರೋಧಿಯು ಕೈಚಾಚಿ ಅವಳ ಭೋಗ್ಯ ವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; ಮ್ಲೇಚ್ಫರು ನಿನ್ನ ಸಭೆಗೆ ಸೇರಬಾರದು ಎಂದು ನೀನು ಆಜ್ಞಾಪಿಸಿದರೂ ಅಂಥವರೇ ತನ್ನಲ್ಲಿನ ಪವಿತ್ರಾಲಯದೊಳಗೆ ಸೇರುವದನ್ನು ಆಕೆಯು ಕಾಣಬೇಕಾಯಿತು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ಯರಲ್ಲಿ ಸೇರಿಕೊಂಡಿರುವ ಮ್ಲೇಚ್ಫರೊಳಗೆ ತನುಮನಗಳಲ್ಲಿ ಸುನ್ನತಿಹೀನನಾದ ಯಾವನೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಕೂಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು