Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:5 - ಕನ್ನಡ ಸತ್ಯವೇದವು J.V. (BSI)

5 (ಆದರೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ ಅವನಿಂದ ಶಾಪವನ್ನು ನುಡಿಸದೆ ಆಶೀರ್ವಾದವನ್ನೇ ಹೇಳಿಸಿದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ ಅವನಿಂದ ಶಾಪವನ್ನು ನುಡಿಸದೆ ಆಶೀರ್ವಾದವನ್ನೇ ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೂ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ, ಅವನಿಂದ ಶಾಪವನ್ನು ನುಡಿಸದೆ, ಆಶೀರ್ವಾದವನ್ನೇ ಹೇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಯೆಹೋವನು ನಿಮ್ಮನ್ನು ಪ್ರೀತಿಸುತ್ತಿದ್ದುದರಿಂದ ಆ ಶಾಪವನ್ನು ನಿಮಗೆ ಆಶೀರ್ವಾದವಾಗಿ ಪರಿವರ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೂ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸಲಿಲ್ಲ. ನಿಮ್ಮ ದೇವರಾದ ಯೆಹೋವ ದೇವರು ಅವನಿಂದ ಶಾಪವನ್ನು ನುಡಿಸದೆ, ಆಶೀರ್ವಾದವನ್ನೇ ಹೇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:5
23 ತಿಳಿವುಗಳ ಹೋಲಿಕೆ  

ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ಆ ಜನಾಂಗವು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡದೆ; ಮೃಗೇಂದ್ರನಿಗೆ ಸಮನಾದ ಆ ಜನವನ್ನು ಕೆಣಕುವದು ಯಾರಿಂದಾದೀತು. ಇಸ್ರಾಯೇಲ್ಯರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ ಶಪಿಸುವವನಿಗೆ ಶಾಪವೂ ಉಂಟಾಗುವದು ಅಂದನು.


ಹೇಗಂದರೆ ಕ್ಷಣಮಾತ್ರವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕವಾದ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಗೌರವವಾದ ಪ್ರಭಾವವನ್ನು ದೊರಕಿಸುತ್ತದೆ.


ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಅಬ್ರಹಾಮ ಇಸಾಕ ಯಾಕೋಬರೆಂಬ ಪಿತೃಗಳ ವಂಶಸ್ಥರಾಗಿರುವದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.


ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ; ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದನ್ನೆಲ್ಲಾ ಸ್ಮರಿಸಿಕೊಳ್ಳಿರಿ.


ನಾನು ನಿನ್ನನ್ನು ಪ್ರೀತಿಸಿರುವದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ,


ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯ ನೆರಿಗೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡದರಿಂದ ನೀನು ನನ್ನವಳಾದಿ; ಇದು ಕರ್ತನಾದ ಯೆಹೋವನ ನುಡಿ.


ಕುಪ್ಪಳಿಸುತ್ತಿರುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯ ಹಾಗೆ, ನಿವಿುತ್ತವಿಲ್ಲದೆ ಕೊಟ್ಟ ಶಾಪವು ಎರಗಿ ನಿಲ್ಲದು.


ದೇವರು ನಿರ್ಮಲಚಿತ್ತರಾದ ಇಸ್ರಾಯೇಲ್ಯರಿಗೆ ದಯಾಪರನೇ ಹೌದು.


ಆತನು ತನ್ನ ಜನರನ್ನು ಪ್ರೀತಿಸುತ್ತಾನೆ; [ಯೆಹೋವನೇ,] ನಿನ್ನ ಭಕ್ತರೆಲ್ಲರೂ ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣ ಸನ್ನಿಧಾನದಲ್ಲಿ ಕೂತಿರುವರು; ನೀನು ಹೇಳುವ ಆಜ್ಞೆಗಳನ್ನು ಶಿರಸ್ಸಾವಹಿಸುವರು.


ಇದಕ್ಕನುಸಾರವಾಗಿ - ಯಾಕೋಬನನ್ನು ಪ್ರೀತಿಸಿದನು, ಏಸಾವನನ್ನು ದ್ವೇಷಿಸಿದೆನು ಎಂದು ಬರೆದದೆ.


ಯೆಹೋವನ ದೂತನು ಅವನಿಗೆ - ಆ ಮನುಷ್ಯರ ಜೊತೆಯಲ್ಲಿ ಹೋಗು; ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವದನ್ನೂ ಹೇಳಬಾರದು ಎಂದು ಹೇಳಲಾಗಿ ಬಿಳಾಮನು ಬಾಲಾಕನ ಪ್ರಧಾನರ ಜೊತೆಯಲ್ಲಿ ಹೊರಟನು.


ಯೆಹೋವನು ಇಂತೆನ್ನುತ್ತಾನೆ - ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವೋ - ಯಾವ ವಿಷಯದಲ್ಲಿ ನಮ್ಮನ್ನು ಪ್ರೀತಿಸಿದ್ದೀ ಅಂದುಕೊಳ್ಳುತ್ತೀರಲ್ಲಾ. ಏಸಾವನು ಯಾಕೋಬನ ಅಣ್ಣನಲ್ಲವೆ,


ಆತನು ನಿಮ್ಮ ಪಿತೃಗಳನ್ನು ಪ್ರೀತಿಸಿ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೂ ಆದುಕೊಂಡು


ಆದರೆ ನಾನು ಆ ಬಿಳಾಮನಿಗೆ ಸಮ್ಮತಿಕೊಡಲಿಲ್ಲವಾದದರಿಂದ ಅವನು ನಿಮ್ಮನ್ನು ಆಶೀರ್ವದಿಸುತ್ತಲೇ ಇರಬೇಕಾಯಿತು. ಹೀಗೆ ನಿಮ್ಮನ್ನು ಅವನ ಕೈಗೆ ಬೀಳದಂತೆ ತಪ್ಪಿಸಿದೆನು.


ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು ಎಂದು ಹೇಳಿದನು.


ಯಾಕಂದರೆ ಅವರು ಇಸ್ರಾಯೇಲ್ಯರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ; ಅವರನ್ನು ಶಪಿಸುವದಕ್ಕಾಗಿ ಬಿಳಾಮನಿಗೆ ಹಣಕೊಟ್ಟು ಅವನನ್ನು ಕರಿಸಿದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಅಶೀರ್ವಾದವನ್ನೇ ಹೇಳಿಸಿದನು ಎಂಬ ಮಾತು ಬರೆದಿರುವದಾಗಿ ಕಂಡು ಬಂತು.


ಅವನು ಬೆಯೋರನ ಮಗನಾದ ಬಿಳಾಮನನ್ನು ಕರಿಸುವದಕ್ಕೆ ಸ್ವಜನರ ದೇಶಕ್ಕೆ ಯೂಫ್ರೇಟೀಸ್ ನದಿಯ ತೀರದಲ್ಲಿರುವ ಪೆತೋರೂರಿಗೆ ದೂತರನ್ನು ಕಳುಹಿಸಿ ಅವನಿಗೆ - ಚಿತ್ತೈಸಬೇಕು; ಒಂದು ಜನಾಂಗವು ಐಗುಪ್ತದೇಶದಿಂದ ಬಂದಿದೆ; ಅವರು ನೆಲವನ್ನೆಲ್ಲಾ ಮುಚ್ಚಿಕೊಂಡು ನನಗೆದುರಾಗಿ ಇಳಿದಿದ್ದಾರೆ; ಅವರು ನಮಗಿಂತ ಬಲಿಷ್ಠರು.


ನಾವು ಯೊರ್ದನ್ ಹೊಳೆಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರೂ ಆರ್ ಪ್ರದೇಶದಲ್ಲಿರುವ ಮೋವಾಬ್ಯರೂ ನಮಗೆ ದಾರಿಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲವೆಂದು ವಿನಯಪೂರ್ವಕವಾದ ಮಾತುಗಳಿಂದ ಹೇಳಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು