Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:15 - ಕನ್ನಡ ಸತ್ಯವೇದವು J.V. (BSI)

15 ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತು ಮುಣುಗುವದಕ್ಕೆ ಮುಂಚಿತವಾಗಿ ಅವನಿಗೆ ಕೊಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರು ನೋಡುತ್ತಾನಲ್ಲಾ. ನೀವು ಕೊಡದಿದ್ದರೆ ಅವನು ಯೆಹೋವನಿಗೆ ಮೊರೆಯಿಟ್ಟಾನು; ಆಗ ನೀವು ದೋಷಿಗಳಾಗಿ ಕಂಡುಬಂದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಏನೂ ಅನ್ಯಾಯಮಾಡದೆ ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತುಮುಣುಗುವುದಕ್ಕೆ ಮುಂಚಿತವಾಗಿ ಅವನಿಗೆ ಕೊಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರುನೋಡುತ್ತಾನಲ್ಲಾ. ನೀವು ಕೊಡದಿದ್ದರೆ ಅವನು ಯೆಹೋವನಿಗೆ ಮೊರೆಯಿಟ್ಟಾನು; ಆಗ ನೀವು ದೋಷಿಗಳಾಗಿ ಕಂಡುಬಂದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತುಮುಳುಗುವುದಕ್ಕೆ ಮುಂಚಿತವಾಗಿ ಅವನಿಗೆ ಕೊಟ್ಟುಬಿಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರು ನೋಡುತ್ತಿರುತ್ತಾನೆ. ನೀವು ಕೊಡದಿದ್ದರೆ ಅವನು ಸರ್ವೇಶ್ವರನಿಗೆ ಮೊರೆಯಿಡುವನು; ಆಗ ನೀವು ದೋಷಿಗಳಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸೂರ್ಯ ಮುಳುಗುವುದರೊಳಗೆ ಅವನಿಗೆ ಸಲ್ಲಬೇಕಾದ ಕೂಲಿಯನ್ನು ಕೊಟ್ಟುಬಿಡು, ಅವನು ಬಡವನಾಗಿದ್ದಾನೆ. ನೀನು ಕೊಡುವ ಕೂಲಿಯಿಂದಲೇ ಅವನು ತನ್ನ ಹಸಿವನ್ನು ನೀಗಿಸಿಕೊಳ್ಳಬೇಕು. ನೀನು ಅವನ ಕೂಲಿ ಕೊಡದಿದ್ದಲ್ಲಿ ಅವನು ದೇವರಾದ ಯೆಹೋವನಿಗೆ ದೂರು ಹೇಳುವನು. ಆಗ ನೀನು ಪಾಪಮಾಡುವವನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವನ ದಿನದ ಕೂಲಿಯನ್ನು ಆ ದಿನದಲ್ಲೇ ಸೂರ್ಯನು ಮುಳುಗುವುದರೊಳಗೆ ಅವನಿಗೆ ಕೊಡಬೇಕು. ಏಕೆಂದರೆ ಅವನು ಬಡವನಾಗಿದ್ದರಿಂದ ಅದನ್ನೇ ಎದುರು ನೋಡುತ್ತಿರುತ್ತಾನೆ. ನೀವು ಕೊಡದಿದ್ದರೆ, ಅವನು ನಿನಗೆ ವಿರೋಧವಾಗಿ ಯೆಹೋವ ದೇವರಿಗೆ ಮೊರೆಯಿಡುವನು. ಆಗ ನಿನ್ನ ಮೇಲೆ ಪಾಪದ ಹೊರೆ ಬಿದ್ದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:15
22 ತಿಳಿವುಗಳ ಹೋಲಿಕೆ  

ಮತ್ತೊಬ್ಬನನ್ನು ಬಲಾತ್ಕರಿಸಬಾರದು; ಅವನ ಸೊತ್ತನ್ನು ಅಪಹರಿಸಬಾರದು. ಕೂಲಿಯವನ ಕೂಲಿಯನ್ನು ಮರುದಿನದವರೆಗೆ ನಿನ್ನ ಬಳಿಯಲ್ಲಿ ಇಟ್ಟುಕೊಳ್ಳಬಾರದು.


ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಅಗೋ, ಆ ಕೂಲಿ ನಿಮ್ಮ ಮೇಲೆ ಕೂಗಿಕೊಳ್ಳುತ್ತದೆ; ಮತ್ತು ಕೊಯಿದವರ ಕೂಗು ಸಕಲಸೇನಾಧಿಪತಿಯಾಗಿರುವ ಕರ್ತನ ಕಿವಿಗಳಲ್ಲಿ ಬಿದ್ದಿದೆ.


ತನ್ನ ಅರಮನೆಯನ್ನು ದುರ್ನೀತಿಯಿಂದಲೂ ಮಹಡಿಗಳನ್ನು ಅನ್ಯಾಯದಿಂದಲೂ ಕಟ್ಟಿಸಿಕೊಳ್ಳುವವನ ಗತಿಯನ್ನು ಏನು ಹೇಳಲಿ! ಕೂಲಿಕೊಡದೆ ನೆರೆಯವನಿಂದ ಬಿಟ್ಟಿಕೆಲಸವನ್ನು ಮಾಡಿಸಿ -


ನೀವು - ಬಿಡುಗಡೆಯುಂಟಾಗುವ ಏಳನೆಯ ವರುಷವು ಸಮೀಪವಾಯಿತೆಂದು ನೀಚವಾದ ಆಲೋಚನೆಯನ್ನು ಮಾಡಿ ಆ ಬಡ ಸಹೋದರನ ವಿಷಯದಲ್ಲಿ ಮೋರೆ ಕರ್ರಗೆಮಾಡಿಕೊಂಡು ಏನೂ ಕೊಡದೆ ಇರಬಾರದು, ನೋಡಿರಿ. [ಹಾಗೆ ಧಿಕ್ಕರಿಸಿದರೆ] ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ತೋರಿಬಂದೀರಿ.


ಅಪಾರವಾದ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾ ಬಲಿಷ್ಠರ ಭುಜಬಲದಿಂದ ಪೀಡಿತರಾಗಿ ಕೂಗಿಕೊಳ್ಳುವರೇ ಹೊರತು


ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ಮಾಡಿದ್ದರು, ಆತನು ದಿಕ್ಕಿಲ್ಲದವರ ಮೊರೆಯನ್ನು ಆಲೈಸಿದ್ದನು.


ನರಹತ್ಯ ಮಾಡಬಾರದು; ವ್ಯಭಿಚಾರಮಾಡಬಾರದು; ಕದಿಯಬಾರದು; ಸುಳ್ಳುಸಾಕ್ಷಿ ಹೇಳಬಾರದು; ಮೋಸಮಾಡಬಾರದು; ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ ಎಂದು ಹೇಳಿದನು.


ಸಂಜೇಹೊತ್ತಿಗೆ ದ್ರಾಕ್ಷೇತೋಟದ ಯಜಮಾನನು ತನ್ನ ಪಾರುಪತ್ಯಗಾರನಿಗೆ - ಆ ಆಳುಗಳನ್ನು ಕರೆದು ಕಡೆಗೆ ಬಂದವರನ್ನು ಮೊದಲು ಮಾಡಿಕೊಂಡು ಮೊದಲು ಬಂದವರ ತನಕ ಅವರಿಗೆ ಕೂಲಿಕೊಡು ಎಂದು ಹೇಳಿದನು.


ಸೇನಾಧೀಶ್ವರನಾದ ಯೆಹೋವನ ದ್ರಾಕ್ಷೆಯ ತೋಟವು ಇಸ್ರಾಯೇಲ್ಯರ ಮನೆತನ, ಯೆಹೂದದ ಜನವೋ ಆತನ ಇಷ್ಟದ ಗಿಡವೇ; ಆತನು ನ್ಯಾಯವನ್ನು ನಿರೀಕ್ಷಿಸಿದಾಗ ಆಹಾ, ಸಿಕ್ಕಿದ್ದು ನರಹತ್ಯವೇ; ಧರ್ಮವನ್ನು ಎದುರುನೋಡಿದಾಗ ಆಹಾ, ದೊರಕಿದ್ದು ಅರಚಾಟವೇ.


ಕರ್ತನೇ, ನಿನ್ನ ಸೇವಕನ ಹೃದಯವನ್ನು ಆನಂದಗೊಳಿಸು; ನಿನ್ನನ್ನೇ ನಿರೀಕ್ಷಿಸುತ್ತಿರುವೆನಲ್ಲಾ.


ಯೆಹೋವನೇ, ನಿನ್ನಲ್ಲಿ ಮನಸ್ಸಿಟ್ಟಿದ್ದೇನೆ; ನನ್ನ ದೇವರೇ, ನಿನ್ನನ್ನೇ ನಂಬಿದ್ದೇನೆ,


ಯಾವನು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ ಮೋಸಪ್ರಮಾಣಮಾಡದೆ ಶುದ್ಧಹಸ್ತವೂ ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ


ನನ್ನ ಭೂವಿುಯು ನನ್ನ ಮೇಲೆ ಕೂಗಿಕೊಂಡರೆ ಅದರ ನೇಗಿಲಗೆರೆಗಳೆಲ್ಲಾ ಅತ್ತರೆ


ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ ಆಳು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಶಾಸ್ತ್ರದಲ್ಲಿ ಹೇಳಿದೆಯಲ್ಲಾ.


ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ ಅವನು ಬದುಕಿಕೊಳ್ಳುವಂತೆ ನೀವು ಅವನನ್ನು ನಿಮ್ಮ ನಡುವೆ ಇಳುಕೊಂಡ ಪರವಾಸಿಯೆಂದು ಉದ್ಧಾರಮಾಡಬೇಕು.


ಒಂದು ವೇಳೆ ನನಗೂ ನನ್ನ ದಾಸನಿಗೂ ಇಲ್ಲವೆ ದಾಸಿಗೂ ವ್ಯಾಜ್ಯವಾದಾಗ ನಾನು ಅವರ ನ್ಯಾಯವನ್ನು ಅಲಕ್ಷ್ಯಮಾಡಿದ್ದರೆ


ನಾನು ಸಂಜೆಯನ್ನು ಬಯಸುವ ದಾಸನಂತೆಯೂ ಕೂಲಿಯನ್ನು ನಿರೀಕ್ಷಿಸುವ ಆಳಿನಂತೆಯೂ ಇದ್ದೇನೆ.


ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು