Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:19 - ಕನ್ನಡ ಸತ್ಯವೇದವು J.V. (BSI)

19 ನೀವು ಪೈರುಗಳನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತು ಬಂದರೆ ಅದನ್ನು ತರುವದಕ್ಕೆ ಹಿಂದಕ್ಕೆ ಹೋಗಬಾರದು; ಪರದೇಶಿ, ತಾಯಿತಂದೆಯಿಲ್ಲದವ, ವಿಧವೆ ಇಂಥವರಿಗೋಸ್ಕರ ಇರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವು ಪೈರುಗಳನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರುವುದಕ್ಕೆ ಹಿಂದಕ್ಕೆ ಹೋಗಬಾರದು; ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ನೀವು ಬೆಳೆಯನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರಲು ಹಿಂದಕ್ಕೆ ಹೋಗಬಾರದು; ಪರದೇಶಿ, ತಾಯಿತಂದೆಯಿಲ್ಲದ ವ್ಯಕ್ತಿ, ವಿಧವೆ, ಇಂಥವರಿಗಾಗಿ ಅದನ್ನು ಬಿಟ್ಟುಬಿಡಿ; ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಕೆಲಸಕಾರ್ಯಗಳಲ್ಲಿ ಕೈಗೂಡಿಸಿ ನಿಮ್ಮನ್ನು ಅಭಿವೃದ್ಧಿಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನೀವು ಹೊಲದಲ್ಲಿ ಬೆಳೆದ ಬೆಳೆಯನ್ನು ಕೊಯ್ದು ಮನೆಗೆ ತರುವಾಗ ಕೆಲವು ಸಿವುಡುಗಳನ್ನು ನೀವು ಹೊಲದಲ್ಲಿಯೇ ಬಿಟ್ಟು ಬಂದಿದ್ದರೆ ಅದನ್ನು ತರಲು ಹಿಂದಕ್ಕೆ ಹೋಗಬೇಡಿ. ಅದನ್ನು ನಿಮ್ಮ ಊರಿನಲ್ಲಿರುವ ಅನಾಥರಿಗೂ ವಿಧವೆಯರಿಗೂ ಪರದೇಶಸ್ಥರಿಗೂ ಬಿಡಿರಿ. ನೀವು ಹಾಗೆ ಮಾಡಿದರೆ ದೇವರಾದ ಯೆಹೋವನು ನಿಮಗೆ ಶುಭವನ್ನು ಉಂಟುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹೊಲದಲ್ಲಿ ನಿನ್ನ ಪೈರನ್ನು ಕೊಯ್ಯುವಾಗ, ಹೊಲದಲ್ಲಿ ಸಿವುಡನ್ನು ಮರೆತುಬಿಟ್ಟರೆ, ಅದನ್ನು ತೆಗೆದುಕೊಳ್ಳುವುದಕ್ಕೆ ತಿರುಗಿಕೊಳ್ಳಬಾರದು. ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ. ನೀವು ಹೀಗೆ ನಡೆದುಕೊಂಡರೆ, ನಿನ್ನ ದೇವರಾದ ಯೆಹೋವ ದೇವರು ನಿನ್ನ ಎಲ್ಲಾ ದುಡಿಮೆಯಲ್ಲಿ ನಿನ್ನನ್ನು ಆಶೀರ್ವದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:19
23 ತಿಳಿವುಗಳ ಹೋಲಿಕೆ  

ನಿಮ್ಮ ದೇಶದ ಪೈರನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವದನ್ನೆಲ್ಲಾ ಕೊಯ್ಯಬಾರದು, ಮತ್ತು ಹಕ್ಕಲಾಯಬಾರದು. ಇವನ್ನು ಬಡವರಿಗೋಸ್ಕರವೂ ಪರದೇಶದವರಿಗೋಸ್ಕರವೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಯೆಹೋವನು.


ಆಗ ಊರಲ್ಲಿರುವ ಅನ್ಯದೇಶದವರೂ ತಾಯಿತಂದೆಯಿಲ್ಲದವರೂ ವಿಧವೆಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆಹೋದ ಲೇವಿಯರೂ ಉಂಡು ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.


ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು; ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.


ಕೊಡಿರಿ, ಆಗ ನಿಮಗೂ ಕೊಡುವರು; ಜಡಿದು ಅಲ್ಲಾಡಿಸಿ ಹೊರಚೆಲ್ಲುವ ಹಾಗೆ ತುಂಬಾ ಅಳತೆಯನ್ನು ಅಳೆದು ನಿಮ್ಮ ಸೆರಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು ಅಂದನು.


ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು; ಘನವಾದವುಗಳಲ್ಲಿಯೇ ನಿರತನಾಗಿರುವನು.


ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವದು.


ಯೆಹೋವನು ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಹೆಚ್ಚಾಗಿ ಆಶೀರ್ವದಿಸಿದನು; ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಒಂದು ಸಾವಿರ ಜೋಡಿ ಎತ್ತುಗಳೂ ಒಂದು ಸಾವಿರ ಹೆಣ್ಣುಕತ್ತೆಗಳೂ ಉಂಟಾದವು.


ಆಗ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ - ನಾವು ಮೀಸಲಾದ ವಸ್ತುಗಳನ್ನು ಮನೆಯಿಂದ ತೆಗೆದುಬಿಟ್ಟಿದ್ದೇವೆ; ನೀನು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯ, ಪರದೇಶಿ, ತಾಯಿತಂದೆಯಿಲ್ಲದವ, ವಿಧವೆ ಇಂಥವರಿಗೆ ಕೊಟ್ಟಿದ್ದೇವೆ; ನಿನ್ನ ಆಜ್ಞೆಗಳಲ್ಲಿ ಒಂದನ್ನೂ ಮೀರಲೂ ಇಲ್ಲ ಮರೆಯಲೂ ಇಲ್ಲ.


ಕಟ್ಟುಗಳಿಂದ ತೆನೆಗಳನ್ನು ಕಿತ್ತುಹಾಕಿರಿ; ಈಕೆಯು ಕೂಡಿಸಿಕೊಳ್ಳಲಿ, ಗದರಿಸಬೇಡಿರಿ ಎಂದು ಆಜ್ಞಾಪಿಸಿದನು.


ನೀವು ಕೊಡುವಾಗ ಬೇಸರಗೊಳ್ಳದೆ ಉದಾರವಾದ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ಪ್ರಯತ್ನಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.


ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಧೈರ್ಯವನ್ನು ಬಿಡದೆ ಸಾಲಕೊಡಿರಿ; ಹೀಗೆ ಮಾಡಿದರೆ, ನಿಮಗೆ ಬಹಳ ಫಲ ಸಿಕ್ಕುವದು, ಮತ್ತು ನೀವು ಪರಾತ್ಪರನ ಮಕ್ಕಳಾಗುವಿರಿ. ಆತನಂತೂ ಉಪಕಾರ ನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.


ನೆರೆಯವನನ್ನು ತಿರಸ್ಕರಿಸುವವನು ದೋಷಿ; ದರಿದ್ರನನ್ನು ಕನಿಕರಿಸುವವನು ಧನ್ಯನು.


ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನೆಂಬದನ್ನು ನೆನಪುಮಾಡಿಕೊಳ್ಳಿರಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ.


ಮೋವಾಬ್ಯಳಾದ ರೂತಳು ನೊವೊವಿುಗೆ - ನಾನು ಹೋಗಿ ಯಾವನು ನನಗೆ ದಯೆತೋರಿಸುವನೋ ಅವನ ಹೊಲದಲ್ಲಿ ಹಕ್ಕಲತೆನೆಗಳನ್ನು ಕೂಡಿಸಿಕೊಂಡು ಬರುವೆನು ಅಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು