Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:5 - ಕನ್ನಡ ಸತ್ಯವೇದವು J.V. (BSI)

5 ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ - ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಸ್ವಲ್ಪ ಮಂದಿಯೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಮಹಾಬಲಿಷ್ಠ ಜನಾಂಗವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಅವರು ಮಹಾಬಲಿಷ್ಠ ಜನಾಂಗವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಸ್ವಲ್ಪ ಮಂದಿಯೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಮಹಾಬಲಿಷ್ಠ ಜನಾಂಗವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ನಿಮ್ಮ ದೇವರಾದ ಯೆಹೋವನ ಸನ್ನಿಧಾನದಲ್ಲಿ ನೀವು ಹೀಗೆ ಅರಿಕೆ ಮಾಡಬೇಕು: ‘ನಮ್ಮ ಪೂರ್ವಿಕರು ಊರೂರು ತಿರುಗುತ್ತಿದ್ದ ಅರಾಮ್ಯರಾಗಿದ್ದರು. ಅವರು ಈಜಿಪ್ಟನ್ನು ಸೇರಿ ಅಲ್ಲಿಯೇ ನೆಲೆಸಿದರು. ಅಲ್ಲಿಗೆ ಅವರು ಹೋದಾಗ ಅವರು ಕೆಲವರೇ ಆಗಿದ್ದರು. ಆದರೆ ಕಾಲಕ್ರಮೇಣ ಅವರು ದೊಡ್ಡ ಜನಾಂಗವಾಗಿ ಅಭಿವೃದ್ಧಿ ಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಮೇಲೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಬಲಿಷ್ಠವಾದ ಮಹಾಜನಾಂಗವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:5
28 ತಿಳಿವುಗಳ ಹೋಲಿಕೆ  

ನಿಮ್ಮ ಪಿತೃಗಳು ಎಪ್ಪತ್ತು ಮಂದಿ ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗಲೋ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನಲ್ಲಾ.


ಅವರಲ್ಲದೆ ಐಗುಪ್ತದೇಶದಲ್ಲಿ ಯೋಸೇಫನಿಗೆ ಹುಟ್ಟಿದವರು ಇಬ್ಬರು. ಐಗುಪ್ತದೇಶಕ್ಕೆ ಹೋದ ಯಾಕೋಬನ ಕುಟುಂಬದವರೆಲ್ಲರು ಒಟ್ಟಾಗಿ ಎಪ್ಪತ್ತು ಮಂದಿ.


ಅದಲ್ಲದೆ ಯಾಕೋಬನು ತಾನು ಹೋಗುತ್ತೇನೆಂದು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ಅವನನ್ನು ಮೋಸಗೊಳಿಸಿ ಓಡಿಹೋದನು.


ಈ ಬರಗಾಲ ತೀರುವದಕ್ಕೆ ಇನ್ನೂ ಐದು ವರುಷ ಹೋಗಬೇಕು; ಆದದರಿಂದ ನಿನಗೂ ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು ಹೇಳುತ್ತಾನೆಂಬದಾಗಿ ತಿಳಿಸಿರಿ.


ನಿಮ್ಮ ಜನವು ಭೂವಿುಯ ಮೇಲೆ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ ಬಹುಜನವಾಗುವಂತೆಯೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.


ಅದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ; ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನು ತೆಗೆದುಕೊಂಡು ಹೋಗಿರಿ; ಒಂದು ವೇಳೆ ಅದು ಅವರಿಗೆ ತಿಳಿಯದೆ ನಿಮ್ಮ ಕೈಗೆ ಬಂದಿರಬಹುದು.


ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು - ನೋಡಿಕೋ, ನೀನು ಯಾಕೋಬನಿಗೆ ಏನೂ ಅನ್ನಬೇಡ ಎಂದು ಹೇಳಿದನು.


ಅಲ್ಲಿ ಅವನೂ ನಮ್ಮ ಪಿತೃಗಳೂ ತೀರಿಹೋದರು.


ಯಾಕೋಬನು ಪದ್ದನ್ ಅರಾವಿುಗೆ ಓಡಿಹೋದನು; ಇಸ್ರಾಯೇಲನು ಮದುವೆಗಾಗಿ ಜೀತಮಾಡಿದನು, ಹೆಣ್ಣಿಗೋಸ್ಕರ [ಕುರಿಗಳನ್ನು] ಕಾದನು.


ಇಸಾಕನು ನಾಲ್ವತ್ತು ವರುಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳಾಗಿಯೂ ಅರಾಮ್ಯನಾದ ಲಾಬಾನನ ತಂಗಿಯಾಗಿಯೂ ಇದ್ದ ರೆಬೆಕ್ಕಳನ್ನು ಪದ್ದನ್ ಅರಾವಿುನಿಂದ ತರಿಸಿ ಹೆಂಡತಿಯಾಗಿ ಮಾಡಿಕೊಂಡನು.


ನನ್ನ ಬಂಧುಗಳ ಬಳಿಗೂ ಹೋಗಿ ಅವರಲ್ಲೇ ನನ್ನ ಮಗನಾದ ಇಸಾಕನಿಗೆ ಹೆಣ್ಣನ್ನು ತೆಗೆದುಕೊಳ್ಳಬೇಕು. ಹಾಗೆ ತೆಗೆದುಕೊಳ್ಳುತ್ತೇನೆಂಬದಕ್ಕೆ ನೀನು ನನ್ನ ತೊಡೆಯ ಕೆಳಗೆ ಕೈಯಿಟ್ಟು ಭೂಲೋಕಪರಲೋಕಗಳ ದೇವರಾಗಿರುವ ಯೆಹೋವನ ಮೇಲೆ ಪ್ರಮಾಣಮಾಡಬೇಕು ಎಂದು ಹೇಳಿದನು.


ನಿಮ್ಮನ್ನು ಎಲ್ಲಾ ಜನಾಂಗಗಳಲ್ಲಿ ಹೆಚ್ಚು ಮಂದಿ ಎಂದು ಇಷ್ಟಪಟ್ಟು ಆದುಕೊಳ್ಳಲಿಲ್ಲ; ನೀವು ಎಲ್ಲಾ ಜನಾಂಗಗಳಿಗಿಂತಲೂ ಸ್ವಲ್ಪಮಂದಿಯಷ್ಟೆ.


ಐಗುಪ್ತ್ಯರು ಅವರನ್ನು ಎಷ್ಟು ಉಪದ್ರವಪಡಿಸಿದರೂ ಅವರು ಅತ್ಯಧಿಕವಾಗಿ ಹೆಚ್ಚಿ ಹರಡಿಕೊಂಡದ್ದರಿಂದ ಐಗುಪ್ತ್ಯರು ಇಸ್ರಾಯೇಲ್ಯರ ವಿಷಯದಲ್ಲಿ ಸಹಿಸಲಾರದಷ್ಟು ಹೆದರಿಕೆಯುಳ್ಳವರಾದರು.


ಆದರೆ ಇಸ್ರಾಯೇಲ್ಯರು ಅಭಿವೃದ್ಧಿಯಾಗಿ ಅತ್ಯಧಿಕವಾಗಿ ಹೆಚ್ಚಿ ಬಹಳ ಬಲಗೊಂಡರು; ಆ ದೇಶದಲ್ಲೆಲ್ಲಾ ತುಂಬಿಕೊಂಡರು.


ಯಾಕೋಬನಿಂದ ಹುಟ್ಟಿದವರೆಲ್ಲರು ಎಪ್ಪತ್ತು ಮಂದಿ. ಯೋಸೇಫನು ಮೊದಲೇ ಐಗುಪ್ತದೇಶದಲ್ಲಿದ್ದನು.


ಇಸ್ರಾಯೇಲ್ಯರು ಐಗುಪ್ತದೇಶಕ್ಕೆ ಸೇರಿರುವ ಗೋಷೆನ್ ಸೀಮೆಯಲ್ಲಿ ವಾಸಮಾಡಿದರು. ಅದರಲ್ಲಿ ಅವರು ಆಸ್ತಿಯನ್ನು ಸಂಪಾದಿಸಿ ಬಹುಸಂತಾನವಾಗಿ ಬಹಳವಾಗಿ ಹೆಚ್ಚಿದರು.


ಹಗಲಲ್ಲಿ ಬಿಸಿಲಿನಿಂದಲೂ ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು; ನಿದ್ದೆ ಮಾಡುವದಕ್ಕಾದರೂ ಅವಕಾಶವಾಗಲಿಲ್ಲ; ನನ್ನ ಸ್ಥಿತಿ ಹೀಗಿತ್ತು.


ಯಾಕೋಬನು ಪದ್ದನ್ಅರಾವಿುಗೆ ಹೊರಟು ಅರಾಮ್ಯನಾದ ಬೆತೂವೇಲನ ಮಗನಾಗಿಯೂ ಯಾಕೋಬನಿಗೂ ಏಸಾವನಿಗೂ ತಾಯಿಯಾದ ರೆಬೆಕ್ಕಳ ಅಣ್ಣನಾಗಿಯೂ ಇದ್ದ ಲಾಬಾನನ ಬಳಿಗೆ ಹೋದನು.


ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿವಿುತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ - ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು; ಆಗ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು ಅಂದುಕೊಂಡನು.


ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು.


ಅದಲ್ಲದೆ ಅವರು ಅವನಿಗೆ - ಕಾನಾನ್‍ದೇಶದಲ್ಲಿ ಬರವು ಘೋರವಾದ್ದರಿಂದ ನಿನ್ನ ಸೇವಕರ ದನಕುರಿಗಳಿಗೆ ಮೇವು ಸಿಕ್ಕಲಿಲ್ಲ; ಆದದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ಸೇವಕರು ಗೋಷೆನ್‍ಸೀಮೆಯಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು ಎಂದು ಹೇಳಿಕೊಂಡರು.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೆಚ್ಚಿಸಿದ್ದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟಾದಿರಲ್ಲಾ.


ಯಾಜಕನು ಆ ಪುಟ್ಟಿಯನ್ನು ನಿಮ್ಮ ಕೈಯಿಂದ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮುಂದೆ ಇಟ್ಟಾಗ


ಯೆಹೋವನು ಇಸ್ರಾಯೇಲನ್ನು ಪ್ರವಾದಿಯ ಮುಖಾಂತರ ಐಗುಪ್ತದೊಳಗಿಂದ ಪಾರುಮಾಡಿದನು; ಪ್ರವಾದಿಯ ಮೂಲಕ ಅದು ರಕ್ಷಿತವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು