Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:53 - ಕನ್ನಡ ಸತ್ಯವೇದವು J.V. (BSI)

53 ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆಹಾಕಿ ನಿಮ್ಮನ್ನು ಬಹಳವಾಗಿ ಇರಿಕಿಸುವದರಿಂದ ನೀವು ನಿಮ್ಮ ಸಂತಾನವನ್ನೇ ಅಂದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಗಂಡು ಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವುದರಿಂದ ನೀವು ನಿಮ್ಮ ಸಂತಾನವನ್ನೇ ಅಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಗಂಡು ಮತ್ತು ಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 “ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಎಂಥ ಇಕ್ಕಟ್ಟಿಗೆ ಸಿಕ್ಕಿಸುವರೆಂದರೆ, ನೀವು ನಿಮ್ಮ ಸಂತಾನವನ್ನೇ, ಅಂದರೆ, ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟಿರುವ ಗಂಡುಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ವೈರಿಗಳು ನಿಮ್ಮ ಪಟ್ಟಣವನ್ನು ಮುತ್ತಿಗೆ ಹಾಕಿದಾಗ ನೀವು ಸಂಕಟ ಅನುಭವಿಸುವಿರಿ. ಆಗ ನೀವು ಊಟಕ್ಕೆ ಇಲ್ಲದೆ ತೊಂದರೆಗೊಳಗಾಗುವಿರಿ; ಹಸಿವು ತಾಳಲಾರದೆ ನಿಮ್ಮ ಮಕ್ಕಳನ್ನೇ ತಿನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವುದರಿಂದ ನೀವು ನಿಮ್ಮ ಗರ್ಭದ ಫಲವನ್ನು ಅಂದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಪುತ್ರಪುತ್ರಿಯರ ಮಾಂಸವನ್ನು ತಿನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:53
11 ತಿಳಿವುಗಳ ಹೋಲಿಕೆ  

ಕರುಣಿಗಳಾದ ಹೆಂಗಸರು ತಮ್ಮ ಕೂಸುಗಳನ್ನು ಸ್ವಂತ ಕೈಯಿಂದ ಬೇಯಿಸಿಕೊಂಡಿದ್ದಾರೆ; ನನ್ನ ಜನರ ನಾಶನಕಾಲದಲ್ಲಿ ಮಕ್ಕಳು ತಾಯಿಗಳಿಗೆ ತಿಂಡಿಯಾದವು.


ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಿಂದುಕೊಳ್ಳಲೋ? ಯಾಜಕರೂ ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ?


ಅವರ ಪ್ರಾಣವನ್ನು ಹುಡುಕುವ ಶತ್ರುಗಳು ಅವರನ್ನು ಮುತ್ತಿ ಬಹಳವಾಗಿ ಇರಕಿಸುವಾಗ ಅವರು ತಮ್ಮ ಗಂಡು ಹೆಣ್ಣು ಮಕ್ಕಳ ಮಾಂಸವನ್ನೂ ಇಷ್ಟ ವಿುತ್ರರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಇದು ಯೆಹೋವನಾದ ನನ್ನ ನುಡಿ.


ನೀವು ನಿಮ್ಮ ಗಂಡು ಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.


ಹೀಗಿರಲು ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು, ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.


ಆದರೆ ಆ ದಿನಗಳಲ್ಲಿ ಬಸುರಿಯರಿಗೂ ಮೊಲೆಕೂಸಿರುವ ಹೆಂಗಸರಿಗೂ ಆಗುವ ಕಷ್ಟವನ್ನು ಏನು ಹೇಳಲಿ.


ನಿಮ್ಮ ಸಂತಾನ ವ್ಯವಸಾಯಗಳಿಗೂ ದನಕುರಿಗಳಿಗೂ ಅಶುಭವುಂಟಾಗುವದು.


ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಬಹಳವಾಗಿ ಇರಿಕಿಸುವ ಕಾಲದಲ್ಲಿ ನಿಮ್ಮಲ್ಲಿ ಮೃದುಸ್ವಭಾವಿಯೂ ಅತಿಸುಕುಮಾರನೂ ಆಗಿರುವವನೂ ತನಗೆ ತಿನ್ನಲಿಕ್ಕೆ ಏನೂ ಉಳಿಯದೆಹೋದದರಿಂದ ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು ಅಣ್ಣತಮ್ಮಂದಿರಿಗೂ ಪ್ರಾಣಪ್ರಿಯಳಾದ ಹೆಂಡತಿಗೂ ಉಳಿದ ಮಕ್ಕಳಿಗೂ ಮೋರೆಯನ್ನು ಕಪ್ಪುಮಾಡಿಕೊಂಡು ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆಹೋಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು