Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:64 - ಕನ್ನಡ ಸತ್ಯವೇದವು J.V. (BSI)

64 ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು; ಅಲ್ಲಿ ನಿಮಗಾದರೂ ನಿಮ್ಮ ಪಿತೃಗಳಿಗಾದರೂ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

64 ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು. ಅಲ್ಲಿ ನಿಮಗಾಗಲಿ ಅಥವಾ ನಿಮ್ಮ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

64 “ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲ ಜನಾಂಗಗಳಲ್ಲಿಯೂ ಸರ್ವೇಶ್ವರ ನಿಮ್ಮನ್ನು ಚದುರಿಸುವರು; ಅಲ್ಲಿ ನಿಮಗಾಗಲಿ ನಿಮ್ಮ ಪಿತೃಗಳಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

64 ಯೆಹೋವನು ನಿಮ್ಮನ್ನು ಲೋಕದ ಎಲ್ಲಾ ದೇಶಗಳಿಗೆ ಚದರಿಸಿಬಿಡುವನು. ಆತನು ಪ್ರಪಂಚದ ಒಂದು ಕಡೆಯಿಂದ ಇನ್ನೊಂದು ಕಡೆಯ ತನಕ ನಿಮ್ಮನ್ನು ಚದರಿಸುವನು. ಅಲ್ಲಿ ನೀವು ಕಲ್ಲುಮರಗಳಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಆ ಸುಳ್ಳುದೇವರುಗಳನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಎಂದೂ ಪೂಜಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

64 ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯವರೆಗೂ ಎಲ್ಲಾ ಜನಾಂಗಗಳಲ್ಲಿ ಚದರಿಸುವರು. ಅಲ್ಲಿ ನೀವೂ ನಿಮ್ಮ ಪಿತೃಗಳು ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಆರಾಧಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:64
27 ತಿಳಿವುಗಳ ಹೋಲಿಕೆ  

ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವದು, ನಿಮ್ಮ ಪಟ್ಟಣಗಳು ನಾಶವಾಗುವವು.


ನೀವಾಗಲಿ ನಿಮ್ಮ ಪಿತೃಗಳಾಗಲಿ ನೋಡದ ದೇಶಕ್ಕೆ ನಿಮ್ಮನ್ನು ಈ ದೇಶದೊಳಗಿಂದ ಎಸೆದುಬಿಡುವೆನು; ಅಲ್ಲಿ ಹಗಲಿರುಳೂ ಅನ್ಯದೇವತೆಗಳನ್ನು ಸೇವಿಸುವಿರಿ; ನಾನು ನಿಮಗೆ ದಯೆತೋರಿಸೆನು.


ನೀನು ಅವನ ಮುಖಾಂತರವಾಗಿ - ನೀವು ಅವಿಧೇಯರಾದರೆ ನಿಮ್ಮನ್ನು ಜನಾಂಗಗಳೊಳಗೆ ಚದರಿಸಿ ಬಿಡುವೆನು;


ನಿಮಗೂ ನಿಮ್ಮ ಪಿತೃಗಳಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ನೀವು ನೇವಿುಸಿಕೊಳ್ಳುವ ಅರಸರನ್ನೂ ಒಯ್ಯಿಸುವನು; ಅಲ್ಲಿ ನೀವು ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.


ಅವರು ಕತ್ತಿಯ ಬಾಯಿಗೆ ಬೀಳುವರು; ಅವರನ್ನು ಅನ್ಯದೇಶಗಳಿಗೆಲ್ಲಾ ಸೆರೆಹಿಡಿದುಕೊಂಡು ಹೋಗುವರು; ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವದು.


ಇಸ್ರಾಯೇಲು ಚದರಿಹೋದ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಹೊರಡಿಸುತ್ತೀಯಲ್ಲಾ; ನಿನ್ನ ಸಾನ್ನಿಧ್ಯವು ತಪ್ಪಿತು; ನಾನು ಲೋಕದಲ್ಲಿ ಅಲೆಯುವವನೂ ದೇಶಭ್ರಷ್ಟನೂ ಆಗಬೇಕಾಯಿತು. ಇದಲ್ಲದೆ ನನ್ನನ್ನು ಕಂಡವರು ಕೊಲ್ಲುವರು ಎಂದು ಹೇಳಿದನು.


ದೇವರು ಮನುಷ್ಯರನ್ನು ಸೃಷ್ಟಿಸಿ ಭೂವಿುಯ ಮೇಲೆ ಇರಿಸಿದ ದಿನ ಮೊದಲುಗೊಂಡು ಇಂದಿನವರೆಗೂ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೂ ಅಂಥ ದೊಡ್ಡ ಕಾರ್ಯವು ನಡೆದದ್ದುಂಟೋ, ಇಲ್ಲವೆ ಅಂಥದರ ಸುದ್ದಿ ಕೇಳಿದ್ದುಂಟೋ ಎಂದು ವಿಚಾರಿಸಿಕೊಳ್ಳಿರಿ.


ತಮಗೆ ನೇವಿುಸಲ್ಪಡದೆಯೂ ಗೊತ್ತಿಲ್ಲದೆಯೂ ಇದ್ದ ಇತರ ದೇವರುಗಳನ್ನು ಸೇವಿಸಿ ಪೂಜಿಸಿದದರಿಂದ


ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದವೂ ಶಾಪವೂ ನಿಮ್ಮ ಅನುಭವಕ್ಕೆ ಬಂದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಚದರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಂಡು


ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ ಪಿತೃಗಳು ಭಜಿಸದೆಯೂ ತಮಗೆ ಮುಂಚಿತವಾಗಿ ಗೊತ್ತಿಲ್ಲದೆಯೂ ಇರುವ ನೂತನ ದೇವತೆಗಳಿಗೂ ಬಲಿಯನ್ನರ್ಪಿಸಿದರು.


ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು;


ಅದು ಹೋಶೇಯನ ಆಳಿಕೆಯ ಒಂಭತ್ತನೆಯ ವರುಷದಲ್ಲಿ ಅವನ ಸ್ವಾಧೀನವಾಗಲು ಅವನು ಎಲ್ಲಾ ಇಸ್ರಾಯೇಲ್ಯರನ್ನು ಅಶ್ಶೂರ್‍ದೇಶಕ್ಕೆ ಒಯ್ದು ಹಲಹು ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಅವನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.


ಕುರಿಗಳನ್ನೋ ಎಂಬಂತೆ ನಮ್ಮನ್ನು ಘಾತುಕರಿಗೆ ಒಪ್ಪಿಸಿದ್ದೀ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿಬಿಟ್ಟಿದ್ದೀ.


ದೇಶದಲ್ಲಿ ಹಾಳು ಹೆಚ್ಚಿ ಪಟ್ಟಣಗಳು ಜನರಿಲ್ಲದೆ ಮನೆಗಳು ನಿವಾಸಿಗಳಿಲ್ಲದೆ ಧ್ವಂಸವಾಗಿ ಭೂವಿುಯು ತೀರಾ ಹಾಳಾಗುವ ತನಕ ಹೀಗಿರುವದು.


ಇವರಿಗಾಗಲಿ ಇವರ ಪಿತೃಗಳಿಗಾಗಲಿ ಗೊತ್ತಿಲ್ಲದ ಜನಾಂಗಗಳೊಳಗೆ ಇವರನ್ನು ಚದರಿಸಿಬಿಟ್ಟು ಇವರು ನಿರ್ಮೂಲವಾಗುವ ತನಕ ಖಡ್ಗವನ್ನು ಇವರ ಹಿಂದೆ ಕಳುಹಿಸುವೆನು.


ನಿನ್ನ ಶತ್ರುಗಳ ಕೈಗೆ ಕೊಟ್ಟು ನೀನು ನೋಡದ ದೇಶಕ್ಕೆ ಸಾಗಿಸಿಬಿಡುವೆನು. ನನ್ನ ರೋಷದಿಂದ ಉರಿಯು ಹತ್ತಿಕೊಂಡಿದೆ, ಅದು ನಿಮ್ಮನ್ನು ಸುಟ್ಟುಬಿಡುವದು.


ಯೆಹೂದವೆಂಬಾಕೆಯು ಘೋರ ಸೇವೆಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ; ಮ್ಲೇಚ್ಫರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಾಳೆ; ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಹಿಂದಟ್ಟಿ ಹಿಡಿದರು.


ಆಮೇಲೆ ಅವರು ನನ್ನ ಆಜ್ಞೆಗಳನ್ನು ಕೈಕೊಳ್ಳದೆ ನನ್ನ ವಿಧಿಗಳನ್ನು ನಿರಾಕರಿಸಿ ನಾನು ನೇವಿುಸಿದ ಸಬ್ಬತ್‍ದಿನಗಳನ್ನು ಹೊಲೆಮಾಡಿ ತಮ್ಮ ಪಿತೃಗಳ ಬೊಂಬೆಗಳ ಮೇಲೆ ಕಣ್ಣುಹಾಕಿದ್ದರಿಂದ


ಜನಾಂಗಗಳೊಳಗೆ ಅವರನ್ನು ಚದರಿಸಿ ದೇಶದೇಶಗಳಿಗೆ ತೂರಿಬಿಟ್ಟು ಅವರ ದುರ್ಮಾರ್ಗ ದುರಾಚಾರಗಳಿಗೆ ಸರಿಯಾಗಿ ದಂಡಿಸಿದೆನು.


ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು, ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯದೇಶವನ್ನು ಹಾಳುಗತಿಗೆ ತಂದರಷ್ಟೆ.


ಅವನನ್ನು ಕನಿಕರಿಸಕೂಡದು, ತಪ್ಪಿಸಕೂಡದು, ಬಚ್ಚಿಡಕೂಡದು; ಕೊಲ್ಲಿಸಲೇಬೇಕು.


ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವ ಪ್ರಕಾರ ಇಸ್ರಾಯೇಲ್ಯರನ್ನು ಸಕಲ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕೆಂದು ಅಪ್ಪಣೆಕೊಡುವೆನು; ಹೀಗಾದರೂ ಒಂದು ಕಾಳೂ ನೆಲಕ್ಕೆಬೀಳದು.


ಯೆಹೋವನು ಇಂತೆನ್ನುತ್ತಾನೆ - ಚೀಯೋನ್ ನಗರಿಯೇ, ಉಲ್ಲಾಸಗೊಳ್ಳು, ಹರ್ಷಧ್ವನಿಗೈ! ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು