Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:8 - ಕನ್ನಡ ಸತ್ಯವೇದವು J.V. (BSI)

8 ನಿಮ್ಮ ಕಣಜಗಳು ಯಾವಾಗಲೂ ತುಂಬಿರುವಂತೆಯೂ ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಶುಭವನ್ನು ಅನುಗ್ರಹಿಸುವನು. ಆತನು ನಿಮಗೆ ಕೊಡುವ ದೇಶದಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿಮ್ಮ ಕಣಜಗಳು ಯಾವಾಗಲೂ ತುಂಬಿರುವಂತೆಯೂ ಮತ್ತು ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಶುಭವನ್ನು ಅನುಗ್ರಹಿಸುವನು. ಆತನು ನಿಮಗೆ ಕೊಡುವ ದೇಶದಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ನಿಮ್ಮ ಕಣಜಗಳು ಯಾವಾಗಲೂ ತುಂಬಿ ಇರುವಂತೆ ಹಾಗು ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶುಭವನ್ನು ಅನುಗ್ರಹಿಸುವರು. ಅವರು ನಿಮಗೆ ಕೊಡುವ ನಾಡಿನಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮ್ಮ ಕಣಜಗಳನ್ನು ಆಶೀರ್ವದಿಸುವನು. ನೀವು ಮಾಡುವ ಕಾರ್ಯಗಳನ್ನೆಲ್ಲಾ ಆಶೀರ್ವದಿಸುವನು. ನಿಮಗೆ ಕೊಡುವ ದೇಶದಲ್ಲಿ ನೀವು ವಾಸಿಸುವಾಗ ನಿಮ್ಮನ್ನು ಆಶೀರ್ವದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿಮ್ಮ ಕಣಜಗಳಲ್ಲಿಯೂ, ನೀವು ಕೈಹಾಕುವ ಎಲ್ಲಾದರಲ್ಲಿಯೂ ನಿಮಗೆ ಆಶೀರ್ವಾದ ಬರುವಂತೆ ಯೆಹೋವ ದೇವರು ಅಪ್ಪಣೆ ಕೊಡುವರು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶದಲ್ಲಿ ನಿಮ್ಮನ್ನು ಆಶೀರ್ವದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:8
22 ತಿಳಿವುಗಳ ಹೋಲಿಕೆ  

ನೀವು ಕೊಡುವಾಗ ಬೇಸರಗೊಳ್ಳದೆ ಉದಾರವಾದ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ಪ್ರಯತ್ನಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.


ನೀವು ಬಹುದಿವಸದಿಂದ ಇಟ್ಟುಕೊಂಡಿರುವ ಹಳೆಯ ಧಾನ್ಯವನ್ನು ಊಟಮಾಡುವಿರಿ; ಹೊಸದಕ್ಕೆ ಸ್ಥಳ ಉಂಟಾಗುವಂತೆ ಹಳೆಯದನ್ನು ತೆಗೆಯುವಿರಿ.


ಹೆರ್ಮೋನ್‍ಪರ್ವತದಲ್ಲಿ ಹುಟ್ಟಿ ಚೀಯೋನ್‍ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ ಜೀವವೂ ಸದಾಕಾಲ ಇರಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.


ನನ್ನ ಕಣಜಗಳನ್ನು ಕೀಳಿಸಿ ಅವುಗಳಿಗಿಂತ ದೊಡ್ಡ ಕಣಜಗಳನ್ನು ಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನೂ ತುಂಬಿಟ್ಟು


ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ?


ಯೆಹೋವನು ಹಗಲಿನಲ್ಲಿ ತನ್ನ ಪ್ರೀತಿಯನ್ನು ನನಗೆ ಅನುಗ್ರಹಿಸುವನು; ರಾತ್ರಿವೇಳೆಯಲ್ಲಿಯೂ ಆತನ ಕೀರ್ತನೆ ನನ್ನಲ್ಲಿರುವದು. ನನ್ನ ಜೀವಾಧಾರಕನಾದ ದೇವರನ್ನು ಪ್ರಾರ್ಥಿಸುವೆನು.


ಆರನೆಯ ವರುಷದ ಬೆಳೆ ನನ್ನ ಪೂರ್ಣಾನುಗ್ರಹದಿಂದ ಮೂರು ವರುಷಗಳ ಬೆಳೆಯಷ್ಟಾಗುವದು.


ದ್ರಾಕ್ಷೆ, ಅಂಜೂರ, ದಾಳಿಂಬರ, ಒಲೀವ, ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿವಸ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.


ನಮ್ಮ ಕಣಜಗಳು ಸಕಲವಿಧವಾದ ಧಾನ್ಯಗಳಿಂದ ತುಂಬಿರುವವು; ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುವವು.


ಅರಸನು ಆಕೆಗೆ - ಯೆಹೋವನು ನಿನ್ನನ್ನು ರಕ್ಷಿಸದಿದ್ದರೆ ನಾನು ಹೇಗೆ ರಕ್ಷಿಸಬಹುದು? ಕಣದಲ್ಲಾಗಲಿ ದ್ರಾಕ್ಷೇ ಆಲೆಯಲ್ಲಾಗಲಿ ಏನಾದರೂ ಉಂಟೋ ಎಂದು ಹೇಳಿ


ಸುಗ್ಗೀಕಾಲದ ತನಕ ಎರಡೂ ಕೂಡ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ - ಮೊದಲು ಹಣಜಿಯನ್ನು ಆರಿಸಿತೆಗೆದು ಅದನ್ನು ಸುಡುವದಕ್ಕೆ ಹೊರೆಕಟ್ಟಿಹಾಕಿ, ಗೋದಿಯನ್ನು ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು ಅಂದನು.


ದೇವರೇ, ನೀನೇ ನನ್ನ ಅರಸನು; ಯಾಕೋಬವಂಶಕ್ಕೆ ಜಯಪ್ರದನಾಗು.


ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ ಯೆಹೋವನು ತಾನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ನಿಮ್ಮನ್ನು ಅಭಿವೃದ್ಧಿಪಡಿಸುವದರಿಂದ ನಿಮ್ಮಲ್ಲಿ ಬಡವರೇ ಇರುವದಿಲ್ಲ.


ನಿಮ್ಮ ಮೇಲೆ ಬರುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಯೆಹೋವನು ಮಾಡುವನು. ಅವರು ಒಂದೇ ದಾರಿಯಿಂದ ನಿಮ್ಮ ಮೇಲೆ ಬಂದರೂ ಏಳು ದಾರಿಗಳಿಂದ ಓಡಿಹೋಗುವರು.


ನೀವು ದುರ್ನಡತೆಯುಳ್ಳವರಾಗಿ ಯೆಹೋವನನ್ನು ಬಿಟ್ಟದ್ದರಿಂದ ಆತನು ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ವಿಪತ್ತು, ಕಳವಳ, ಶಾಪ ಇವುಗಳನ್ನುಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವನು.


ಆಗ ಊರಲ್ಲಿರುವ ಅನ್ಯದೇಶದವರೂ ತಾಯಿತಂದೆಯಿಲ್ಲದವರೂ ವಿಧವೆಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆಹೋದ ಲೇವಿಯರೂ ಉಂಡು ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.


ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗಿರುವನು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದಲ್ಲಾ; ಅದರ ಎಲೆ ಬಾಡುವದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವದು.


ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ; ನೀನು ಧನ್ಯನು, ನಿನಗೆ ಶುಭವಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು