Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:11 - ಕನ್ನಡ ಸತ್ಯವೇದವು J.V. (BSI)

11 (ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈಯಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ; ಅಗಲ ನಾಲ್ಕು ಮೊಳ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 (ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈ ಅಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 (ರೆಫಾಯರೊಳಗೆ ಬಾಷಾನಿನ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈಯಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 (ಓಗನು ಬಾಷಾನಿನ ರಾಜನಾಗಿದ್ದನು. ಎದ್ರೈ ಮತ್ತು ಸಲ್ಕಾ ಬಾಷಾನಿನಲ್ಲಿದ್ದ ಓಗನ ರಾಜ್ಯದ ಪಟ್ಟಣಗಳಾಗಿದ್ದವು. ಅವನು ರೆಫಾಯರಲ್ಲಿ ಅಳಿದುಳಿದವರಲ್ಲಿ ಒಬ್ಬನಾಗಿದ್ದನು. ಅವನ ಮಂಚವು ಕಬ್ಬಿಣದಿಂದ ಮಾಡಲ್ಪಟ್ಟಿತ್ತು. ಅದು ಹದಿಮೂರು ಅಡಿ ಉದ್ದವಿತ್ತು ಮತ್ತು ಆರು ಅಡಿ ಅಗಲವಿತ್ತು. ಆ ಮಂಚವು ಈಗಲೂ ಅಮ್ಮೋನಿಯರು ವಾಸಿಸುವ ರಬ್ಬಾದಲ್ಲಿದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ರೆಫಾಯರಲ್ಲಿ ಬಾಷಾನಿನ ಅರಸನಾದ ಓಗನು ಮಾತ್ರ ಉಳಿದಿದ್ದನು. ಅವನ ಮಂಚವು ಕಬ್ಬಿಣದ ಮಂಚ. ಅದು ಅಮ್ಮೋನಿಯರ ರಬ್ಬಾದಲ್ಲಿ ಈಗಲೂ ಉಂಟಲ್ಲವೋ? ಅದರ ಉದ್ದ ಪುರುಷನ ಕೈ ಅಳತೆಯ ಪ್ರಕಾರ ಒಂಬತ್ತು ಮೊಳ, ಅಗಲ ನಾಲ್ಕು ಮೊಳ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:11
15 ತಿಳಿವುಗಳ ಹೋಲಿಕೆ  

ಹದಿನಾಲ್ಕನೆಯ ವರುಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿವಿುನಲ್ಲಿ ರೆಫಾಯರನ್ನೂ ಹಾವಿುನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿವಿುನಲ್ಲಿ ಏವಿುಯರನ್ನೂ ಸೋಲಿಸಿದರು.


ಆದದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು ಯುದ್ಧಘೋಷಮಾಡುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವದು. ಇದು ಯೆಹೋವನ ನುಡಿ.


ಯೋವಾಬನು ಅಮ್ಮೋನಿಯರ ಪಟ್ಟಣವಾದ ರಬ್ಬಕ್ಕೆ ಮುತ್ತಿಗೆಹಾಕಿ ಅರಮನೆಯಿದ್ದ ಭಾಗವನ್ನು ಸ್ವಾಧೀನಮಾಡಿಕೊಂಡು


ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು; ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ ಅಲ್ಲೋನ್ ಮರದ ಹಾಗೆ ದೃಢವಾಗಿ ಇದ್ದರೂ ಮೇಲೆ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.


ನಾನು ರಬ್ಬದ ಕೋಟೆಯಲ್ಲಿ ಬೆಂಕಿಯನ್ನು ಉರಿಸುವೆನು, ಅದು ಅವರ ಅರಮನೆಗಳನ್ನು ನುಂಗಿಬಿಡುವದು; ಆ ಯುದ್ಧದಿನದಲ್ಲಿ ಆರ್ಭಟವಾಗುವದು. ಆ ಸುಂಟರಗಾಳಿಯ ದಿವಸದಲ್ಲಿ ರೋಷಮಾರುತವು ಬೀಸುವದು;


ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ ಯೆಹೂದದೊಳಗೆ ಕೋಟೆಕೊತ್ತಲಗಳಿಂದ ಕೂಡಿದ ಯೆರೂಸಲೇವಿುಗೂ ಖಡ್ಗವು ಬರುವದಕ್ಕೆ ದಾರಿಗಳನ್ನು ಮಾಡು.


ಮರುವರುಷ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ದಾವೀದನು ಯೋವಾಬನನ್ನೂ ತನ್ನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತಗಳನ್ನು ಹಾಳುಮಾಡಿ ರಬ್ಬಕ್ಕೆ ಮುತ್ತಿಗೆಹಾಕಿದರು. ದಾವೀದನು ಯೆರೂಸಲೇವಿುನಲ್ಲಿಯೇ ಇದ್ದನು.


ಉಭಯರ ಮಧ್ಯದಲ್ಲಿ ಒಂದು ತಗ್ಗು ಇತ್ತು. ಫಿಲಿಷ್ಟಿಯರ ಪಾಳೆಯದಿಂದ ಗತ್ ಊರಿನವನಾದ ಗೊಲ್ಯಾತನೆಂಬ ಒಬ್ಬ ರಣಶೂರನು ಹೊರಟುಬಂದನು. ಅವನು ಆರುವರೆ ಮೊಳ ಎತ್ತರವಾಗಿದ್ದನು.


(ಪೂರ್ವಕಾಲದಲ್ಲಿ ರೆಫಾಯರು ಆ ದೇಶದಲ್ಲಿ ವಾಸವಾಗಿದ್ದದರಿಂದ ಅದೂ ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಅಮ್ಮೋನಿಯರು ಅವರನ್ನು ಜಂಜುಮ್ಯರೆಂದು ಹೇಳುತ್ತಾರೆ;


ಅವರು ಅನಾಕ್ಯರಂತೆ ರೆಫಾಯರಿಗೆ ಸೇರಿದವರೆಂದು ಹೇಳುವದುಂಟು; ಆದರೆ ಮೋವಾಬ್ಯರು ಅವರನ್ನು ಏವಿುಯರೆಂದು ಹೇಳುತ್ತಾರೆ.


ಅದರ ಪ್ರಾಕಾರವನ್ನೂ ಅಳತೆಮಾಡಿದನು; ಅದು ನೂರನಾಲ್ಪತ್ತುನಾಲ್ಕು ಮೊಳವಾಯಿತು; ಈ ಲೆಕ್ಕದಲ್ಲಿ ಮನುಷ್ಯನ ಮೊಳ ಅಂದರೆ ದೇವದೂತನ ಮೊಳ.


ಅಷ್ಟರೋತ್, ಎದ್ರೈ ಎಂಬ ಊರುಗಳಲ್ಲಿ ವಾಸವಾಗಿದ್ದ ರೆಫಾಯರ ವಂಶಸ್ಥನೂ ಬಾಷಾನಿನ ಅರಸನೂ ಆದ ಓಗನು [ಎರಡನೆಯವನು].


ಅಷ್ಟರೋತ್, ಎದ್ರೈ ಎಂಬ ಊರುಗಳಲ್ಲಿ ಆಳುತ್ತಿದ್ದ ರೆಫಾಯರ ವಂಶಸ್ಥನಾದ ಓಗನ ರಾಜ್ಯವಾಗಿದ್ದು ಸಲ್ಕಾಪಟ್ಟಣದವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳು ಇವುಗಳೇ. ಮೋಶೆಯೇ ಅವರನ್ನು ಜಯಿಸಿ ಅವರ ದೇಶಗಳನ್ನು ಸ್ವಾಧೀನಮಾಡಿಕೊಂಡಿದ್ದನು.


ನಾನು ರಬ್ಬಾಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿಯೂ ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ರೊಪ್ಪವನ್ನಾಗಿಯೂ ಮಾಡುವೆನು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ನೀನು ಅದನ್ನು ಮಾಡಬೇಕಾದ ವಿಧಾನ ಹೇಗಂದರೆ - ಅದು ಮುನ್ನೂರು ಮೊಳ ಉದ್ದವೂ ಐವತ್ತು ಮೊಳ ಅಗಲವೂ ಮೂವತ್ತು ಮೊಳ ಎತ್ತರವೂ ಉಳ್ಳದ್ದಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು