Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:18 - ಕನ್ನಡ ಸತ್ಯವೇದವು J.V. (BSI)

18 ಆ ಕಾಲದಲ್ಲಿ ನಾನು ನಿಮಗೆ - ನಿಮ್ಮ ದೇವರಾದ ಯೆಹೋವನು ಈ ಪ್ರದೇಶವನ್ನೇ ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದಾನೆ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಾಯೇಲ್ಯರ ಮುಂದೆ ಹೊರಟು ಹೊಳೇ ದಾಟಿ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ಕಾಲದಲ್ಲಿ ನಾನು ನಿಮಗೆ, “ನಿಮ್ಮ ದೇವರಾದ ಯೆಹೋವನು ಈ ಪ್ರದೇಶವನ್ನೇ ನಿಮಗೆ ಸ್ವತ್ತಾಗಿ ಕೊಟ್ಟಿದ್ದಾನೆ. ಆದರೆ ನಿಮ್ಮ ಸೈನಿಕರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಹೊರಟು ಹೊಳೆ ದಾಟಿ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಆ ಕಾಲದಲ್ಲಿ ನಾನು ನಿಮಗೆ, ‘ನಿಮ್ಮ ದೇವರಾದ ಸರ್ವೇಶ್ವರ ಈ ಪ್ರದೇಶವನ್ನೇ ನಿಮಗೆ ಸೊತ್ತಾಗಿ ಕೊಟ್ಟಿದ್ದಾರೆ. ಆದರೆ ನಿಮ್ಮ ಯೋಧರೆಲ್ಲರು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಯೇಲರ ಮುಂದೇ ಹೊರಟು ನದಿ ದಾಟಿ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನೆಂದರೆ: ‘ನಿಮ್ಮ ದೇವರಾದ ಯೆಹೋವನು ನಿಮಗೆ ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವನ್ನು ಕೊಟ್ಟಿದ್ದಾನೆ. ಆದರೆ ನಿಮ್ಮಲ್ಲಿರುವ ಸೈನಿಕರು ತಮ್ಮ ಆಯುಧಗಳನ್ನು ತೆಗೆದುಕೊಂಡು ಇತರ ಇಸ್ರೇಲರೊಂದಿಗೆ ನದಿಯಾಚೆಗೆ ಬರಬೇಕು. ಅಲ್ಲಿಯ ದೇಶಗಳನ್ನು ಸ್ವಾಧೀನಪಡಿಸಿಕೊಂಡು ಶಾಂತಿ ನೆಲೆಸುವ ತನಕ ಅವರೊಂದಿಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆ ಕಾಲದಲ್ಲಿ ನಾನು ರೂಬೇನ್ಯರಿಗೂ ಗಾದ್ಯರಿಗೂ ಮತ್ತು ಮನಸ್ಸೆಯ ಅರ್ಧ ಗೋತ್ರಕ್ಕೂ ಆಜ್ಞಾಪಿಸಿದ್ದೇನೆಂದರೆ, “ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಈ ದೇಶವನ್ನು ಸೊತ್ತಾಗಿ ಕೊಟ್ಟಿದ್ದಾರೆ. ನಿಪುಣರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಆಯುಧ ಧರಿಸಿಕೊಂಡು ನದಿದಾಟಿ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:18
18 ತಿಳಿವುಗಳ ಹೋಲಿಕೆ  

ಆಮೇಲೆ ಆತನು ಅವನಿಗೆ - ಈ ದೇಶದ ಬಾಧ್ಯತೆಯನ್ನು ನಿನಗೆ ಕೊಡುವದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನೇ ನಾನು ಎಂದು ಹೇಳಲು ಅವನು -


ನಾನು ನಿಮಗೇ ಆ ದೇಶವನ್ನು ಸ್ವದೇಶವಾಗುವದಕ್ಕೆ ಕೊಟ್ಟದರಿಂದ ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು.


ನೀನಾದರೋ ಇಲ್ಲೇ ನನ್ನ ಹತ್ತಿರ ನಿಂತಿರು; ನೀನು ಅವರಿಗೆ ಬೋಧಿಸಬೇಕಾದ ಎಲ್ಲಾ ಧರ್ಮೋಪದೇಶವನ್ನೂ ವಿಧಿನಿರ್ಣಯಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ದೇಶದಲ್ಲಿ ಅವರು ಇವುಗಳನ್ನು ಅನುಸರಿಸಬೇಕು ಎಂದು ಹೇಳಿದನು.


ನೀವು ಹೊಳೆ ದಾಟಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಅನುಸರಿಸುವದಕ್ಕಾಗಿ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದ ಧರ್ಮೋಪದೇಶವೂ ವಿಧಿನಿರ್ಣಯಗಳೂ ಇವೇ.


ನಿಮ್ಮ ದೇವರಾದ ಯೆಹೋವನು ಆ ಉತ್ತಮದೇಶವನ್ನು ನಿಮಗೆ ಸ್ವದೇಶವಾಗಿ ಕೊಡುವದು ನಿಮ್ಮ ಪುಣ್ಯಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿರಿ. ನೀವು ಆತನ ಆಜ್ಞೆಗೆ ಮಣಿಯದ ಜನರೇ ಆಗಿದ್ದೀರಿ.


ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ನೀವು ಭೂವಿುಯ ಮೇಲಿರುವ ದಿನಗಳಲ್ಲೆಲ್ಲಾ ಅನುಸರಿಸಬೇಕಾದ ಆಜ್ಞಾವಿಧಿಗಳು ಇವೇ -


ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ ಯೆಹೋವನು ತಾನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ನಿಮ್ಮನ್ನು ಅಭಿವೃದ್ಧಿಪಡಿಸುವದರಿಂದ ನಿಮ್ಮಲ್ಲಿ ಬಡವರೇ ಇರುವದಿಲ್ಲ.


ಆ ನಿಮ್ಮ ದೇಶದ ಮಧ್ಯದಲ್ಲಿ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕು.


ಈ ಕಾರಣದಿಂದ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕೆಂದು ಆಜ್ಞಾಪಿಸಿದ್ದೇನೆ.


ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ನಿಮ್ಮ ಪಾಲಿಗೆ ಬಂದ ಸ್ವಾಸ್ತ್ಯದಲ್ಲಿ ನೆರೆಯವನ ಭೂವಿುಯ ಪೂರ್ವಕಾಲದ ಮೇರೆಯನ್ನು ಒತ್ತಬಾರದು.


ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ಹತನಾದ ಮನುಷ್ಯನ ಶವವು ಅಡವಿಯಲ್ಲಿ ಬಿದ್ದಿರುವದನ್ನು ನೀವು ಕಂಡರೆ ಮತ್ತು ಅವನನ್ನು ಕೊಂದವನು ಯಾರೆಂಬದು ತಿಳಿಯದೆಹೋದರೆ


ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂವಿುಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು.


ನೀವು ಪಾಳೆಯದ ಎಲ್ಲಾ ಕಡೆಗೂ ಹೋಗಿ ಜನರಿಗೆ - ನೀವು ಇನ್ನು ಮೂರು ದಿವಸಗಳಲ್ಲಿ ಈ ಯೊರ್ದನ್ ಹೊಳೆಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶವನ್ನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗಬೇಕು. ಆದದರಿಂದ ನಿಮಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ ಎಂದು ಹೇಳಬೇಕು ಅಂದನು.


ಅವರ ದೇಶವನ್ನು ಇಸ್ರಾಯೇಲ್ಯರಿಗೆ ಕೊಟ್ಟನು; ಆತನ ಕೃಪೆಯು ಶಾಶ್ವತವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು