Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:28 - ಕನ್ನಡ ಸತ್ಯವೇದವು J.V. (BSI)

28 ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೇ ಈ ಅಧಿಕಾರವನ್ನು ಕೊಡಬೇಕು; ಅವನು ದೃಢನಾಗುವಂತೆ ಅವನನ್ನು ಧೈರ್ಯಪಡಿಸಬೇಕೆಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೆ ಈ ಅಧಿಕಾರವನ್ನು ಕೊಡಬೇಕು; ಅವನು ದೃಢವಾಗುವಂತೆ ಅವನನ್ನು ಧೈರ್ಯಪಡಿಸಬೇಕು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ, ನೀನು ನೋಡುವ ನಾಡನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೇ ಈ ಅಧಿಕಾರವನ್ನು ಕೊಡಬೇಕು; ಅವನು ದೃಢನಾಗುವಂತೆ ಅವನನ್ನು ಧೈರ್ಯಪಡಿಸಬೇಕು,’ ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನೀನು ಯೆಹೋಶುವನನ್ನು ಪ್ರೋತ್ಸಾಹಿಸು. ಅವನಿಗೆ ವಿಷಯಗಳನ್ನೆಲ್ಲಾ ತಿಳಿಯಪಡಿಸು. ಅವನು ಜನರನ್ನು ಜೋರ್ಡನ್ ನದಿಯಾಚೆ ನಡೆಸಬೇಕು. ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಅವನು ಅವರಿಗೆ ಸಹಾಯ ಮಾಡುವನು. ಆದ್ದರಿಂದ ಅವನನ್ನು ಬಲಪಡಿಸು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದರೆ ಯೆಹೋಶುವನಿಗೆ ಆಜ್ಞಾಪಿಸಿ, ಅವನಿಗೆ ದೃಢಮಾಡಿ ಬಲಪಡಿಸು. ಅವನು ಈ ಜನರ ಮುಂದೆ ದಾಟಿ ಹೋಗಿ, ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:28
18 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸೇನಾನಾಯಕನಾಗಿ ಹೊಳೆಯನ್ನು ದಾಟಿಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ಹೊಳೆಯನ್ನು ದಾಟಿಹೋಗುವನು.


ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ - ನಾನು ಇಸ್ರಾಯೇಲ್ಯರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು ಎಂದು ಆಜ್ಞಾಪಿಸಿದನು.


ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲ್ಯರೆಲ್ಲರ ಮುಂದೆ ಅವನಿಗೆ - ಯೆಹೋವನು ಇವರ ಪಿತೃಗಳಿಗೆ ಪ್ರಮಾಣ ಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದದರಿಂದ ಶೂರನಾಗಿ ಧೈರ್ಯದಿಂದಿರು;


ಆದರೆ ನಿನ್ನ ಶಿಷ್ಯನಾದ ನೂನನ ಮಗ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಾಯೇಲ್ಯರಿಗೆ ಆ ದೇಶವನ್ನು ಸ್ವಾಧೀನಪಡಿಸುವನು; ಆದದರಿಂದ ಅವನನ್ನು ಧೈರ್ಯಗೊಳಿಸು.


ನಮ್ಮ ಹಿರಿಯರು ಅದನ್ನು ತಮ್ಮ ತಂದೆಗಳಿಂದ ಹೊಂದಿದರು; ಅವರು ಯೆಹೋಶುವನ ಹಿಂದೆ ಬಂದು ದೇವರು ತಮ್ಮ ಮುಂದೆ ಹೊರಡಿಸಿದ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಇಲ್ಲೇ ಇತ್ತು.


ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ ತರುವಾಯ ಮತ್ತೊಂದು ದಿವಸವನ್ನು ಕುರಿತು ಹೇಳೋಣವಾಗುತ್ತಿರಲಿಲ್ಲ.


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು; ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ಆಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ - ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಯೆಹೋವದೇವರು ನಿನ್ನ ಸಂಗಡ ಇರುತ್ತಾನೆ; ಆತನು ತನ್ನ ಆಲಯದ ಎಲ್ಲಾ ಕೆಲಸವು ತೀರುವವರೆಗೂ ನಿನ್ನನ್ನು ಕೈ ಬಿಡುವದಿಲ್ಲ, ತೊರೆಯುವದಿಲ್ಲ.


ಆಮೇಲೆ ಅವನು ತನ್ನ ಮಗನಾದ ಸೊಲೊಮೋನನನ್ನು ಕರಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಅವನಿಗೆ ಆಜ್ಞಾಪಿಸಿ -


ಸೇವಕನಾದ ಮೋಶೆ ಸತ್ತನು; ನೀನು ಈಗ ಎದ್ದು ಸಮಸ್ತ ಪ್ರಜಾಸಹಿತವಾಗಿ ಈ ಯೊರ್ದನ್ ಹೊಳೆಯನ್ನು ದಾಟಿ ನಾನು ಇಸ್ರಾಯೇಲ್ಯರಿಗೆ ಕೊಡುವ ದೇಶಕ್ಕೆ ಹೋಗು.


ಅದು ಮಾತ್ರವಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಮಾಡಿ - ನೀನೂ ಆ ದೇಶಕ್ಕೆ ಸೇರುವದಿಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು