Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:17 - ಕನ್ನಡ ಸತ್ಯವೇದವು J.V. (BSI)

17 ಆದರೆ ನೀವು ಆತನನ್ನು ಬಿಟ್ಟು ಆತನ ಮಾತನ್ನು ಕೇಳಲೊಲ್ಲದೆ ಮರುಳುಗೊಂಡವರಾಗಿ ಇತರ ದೇವರುಗಳನ್ನು ಪೂಜಿಸಿ ಸೇವಿಸಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ನೀವು ಆತನನ್ನು ಬಿಟ್ಟು ಆತನ ಮಾತನ್ನು ಕೇಳಲೊಲ್ಲದೆ ಮರುಳುಗೊಂಡವರಾಗಿ, ಇತರ ದೇವರುಗಳನ್ನು ಪೂಜಿಸಿ, ಸೇವಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದರೆ ನೀವು ಅವರನ್ನು ಬಿಟ್ಟು, ಅವರ ಮಾತನ್ನು ಕೇಳಲೊಲ್ಲದೆ, ಮೋಸಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ನೀವು ಯೆಹೋವನಿಗೆ ವಿಮುಖರಾಗಿ ಆತನಿಗೆ ಕಿವಿಗೊಡದೆ ಹೋದರೆ, ಬೇರೆ ದೇವರುಗಳನ್ನು ಆರಾಧಿಸಲು ಮತ್ತು ಸೇವೆಮಾಡಲು ಹೋದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ನಿಮ್ಮ ಹೃದಯವು ತಿರುಗಿಬಿದ್ದು ನೀವು ಮಾತು ಕೇಳದೆ ಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆದವರಾಗಿ ಅಡ್ಡಬಿದ್ದು, ಅವುಗಳಿಗೆ ಸೇವೆ ಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:17
16 ತಿಳಿವುಗಳ ಹೋಲಿಕೆ  

ಸಹೋದರರೇ, ನೋಡಿಕೊಳ್ಳಿರಿ, ಜೀವಸ್ವರೂಪನಾದ ದೇವರನ್ನು ಬಿಟ್ಟುಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.


ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ಹೋಗುವರು.


ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.


ನೀವು ಮಾತಾಡುತ್ತಿರುವಾತನ ಮಾತನ್ನು ಕೇಳಲೊಲ್ಲೆವೆಂದು ಹೇಳಬಾರದು. ಭೂವಿುಯ ಮೇಲೆ ದೈವೋಕ್ತಿಗಳನ್ನಾಡಿದವನಿಗೆ ಕಿವಿಗೊಡ ಮನಸ್ಸಿಲ್ಲದೆ ಇದ್ದ ಇಸ್ರಾಯೇಲ್ಯರು ದಂಡನೆಗೆ ತಪ್ಪಿಸಿಕೊಳ್ಳದಿದ್ದರೆ ಪರಲೋಕದಿಂದ ಮಾತಾಡುವವನಿಗೆ ನಾವು ಕಿವಿಗೊಡ ಮನಸ್ಸಿಲ್ಲದೆ ತೊಲಗಿದರೆ ಹೇಗೆ ತಪ್ಪಿಸಿಕೊಂಡೇವು?


ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು: ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.


ಯೆಹೋವನು ಈ ಜನಾಂಗಗಳ ವಿಷಯದಲ್ಲಿ ಇಸ್ರಾಯೇಲ್ಯರಿಗೆ - ನಿಮಗೂ ಅವರಿಗೂ ಕೊಟ್ಟುಕೊಳ್ಳುವದು ನಡೆಯಬಾರದು; ಅದು ನಡೆಯುವದಾದರೆ ಅವರು ನಿಮ್ಮ ಮನಸ್ಸನ್ನು ತಮ್ಮ ದೇವತೆಗಳ ಕಡೆಗೆ ತಿರುಗಿಸಾರು ಎಂದು ಆಜ್ಞಾಪಿಸಿದ್ದರೂ ಸೊಲೊಮೋನನು ಅವರ ಸ್ತ್ರೀಯರಲ್ಲಿ ಅನುರಕ್ತನಾಗಿದ್ದನು.


ನೀವು ದ್ರೋಹಿಗಳಾಗಿಯೇ ಇದ್ದರೆ ನಿಮ್ಮ ಅರಸನೊಡನೆ ನಾಶವಾಗುವಿರಿ ಎಂದು ಹೇಳಿದನು.


ಅವನು ಅನೇಕ ಸ್ತ್ರೀಯರನ್ನು ಮದುವೆಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಯೆಹೋವನ ಕಡೆಯಿಂದ ತಿರುಗುವದಕ್ಕೆ ಅವಕಾಶವಾಗುವದು. ಅವನು ಬೆಳ್ಳಿಬಂಗಾರವನ್ನು ವಿಶೇಷವಾಗಿ ಗಳಿಸಿಕೊಳ್ಳಬಾರದು.


ನೀವು ಆತನನ್ನು ಹಿಂಬಾಲಿಸದೆ ನಡೆಯುವ ಕಾರಣ ಆತನು ಈ ಜನರನ್ನು ಅರಣ್ಯದಲ್ಲಿ ಇನ್ನೂ ಇರಿಸಿದರೆ ಈ ಸಮಸ್ತಜನಾಂಗದ ನಾಶಕ್ಕೆ ನೀವೇ ಕಾರಣರಾಗುವಿರಿ ಎಂದು ಹೇಳಿದನು.


ನಾನು ಈಗ ನಿಮಗೆ ಬೋಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನು ಹೇಳಿದ ಮಾರ್ಗದಲ್ಲಿ ನಡೆದು ಆತನ ಆಜ್ಞಾವಿಧಿ ನಿರ್ಣಯಗಳನ್ನು ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚುವಿರಿ; ಮತ್ತು ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.


ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನ್ ಹೊಳೆಯನ್ನು ದಾಟಿಹೋಗುವ ದೇಶದಲ್ಲಿ ಬಹುಕಾಲ ಇರದೆ ನಾಶವಾಗಿಯೇ ಹೋಗುವಿರೆಂದು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.


ಆದರೆ ನೀವು ಎಚ್ಚರದಿಂದಿರಬೇಕು; ನೀವು ಭ್ರಾಂತಿಗೊಂಡು ಯೆಹೋವನು ಹೇಳಿದ ಮಾರ್ಗವನ್ನು ಬಿಟ್ಟು ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ


ಅವರು ಗಿಲ್ಯಾದಿನಲ್ಲಿದ್ದ ರೂಬೇನ್ಯರು, ಗಾದ್ಯರು ಮನಸ್ಸೆ ಕುಲದ ಅರ್ಧಜನರು ಇವರ ಬಳಿಗೆ ಬಂದು -


ದೇವರಲ್ಲದವುಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ ರಕ್ಷಣೆಯೂ ಸಿಕ್ಕುವದಿಲ್ಲ. ಅವು ವ್ಯರ್ಥವಾದವುಗಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು