Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:23 - ಕನ್ನಡ ಸತ್ಯವೇದವು J.V. (BSI)

23 ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ - ನಾನು ಇಸ್ರಾಯೇಲ್ಯರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ, “ನಾನು ಇಸ್ರಾಯೇಲರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಗ ಸರ್ವೇಶ್ವರಸ್ವಾಮಿ ನೂನನ ಮಗ ಯೆಹೋಶುವನಿಗೆ, “ನಾನು ಇಸ್ರಯೇಲರಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿರು, ಧೈರ್ಯದಿಂದಿರು; ನಾನೇ ನಿನ್ನೊಂದಿಗೆ ಇರುವೆನು,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನೂನನ ಮಗನಾದ ಯೆಹೋಶುವನೊಂದಿಗೆ ಯೆಹೋವನು ಮಾತನಾಡಿ ಹೇಳಿದ್ದೇನೆಂದರೆ: “ಧೈರ್ಯವಂತನಾಗಿದ್ದು ಬಲಗೊಳ್ಳು, ನೀನು ಜನರನ್ನು ವಾಗ್ದಾನದ ದೇಶಕ್ಕೆ ನಡೆಸಬೇಕು. ನಾನು ನಿನ್ನೊಂದಿಗಿರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನು ನೂನನ ಮಗನಾದ ಯೆಹೋಶುವನಿಗೆ ಆಜ್ಞಾಪಿಸಿ, “ಶೂರನಾಗಿರು, ಧೈರ್ಯವಾಗಿರು, ಏಕೆಂದರೆ ನೀನು ಇಸ್ರಾಯೇಲರನ್ನು ನಾನು ಅವರಿಗೆ ಪ್ರಮಾಣ ಮಾಡಿದ ದೇಶಕ್ಕೆ ತರುವೆ, ನಾನು ನಿನ್ನ ಸಂಗಡ ಇರುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:23
15 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ - ನೀನು ಸಾಯಬೇಕಾದ ಕಾಲ ಸಮೀಪವಾಯಿತು; ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು ಎಂದು ಆಜ್ಞಾಪಿಸಲಾಗಿ ಮೋಶೆಯೂ ಯೆಹೋಶುವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು.


ನಮ್ಮ ಹಿರಿಯರು ಅದನ್ನು ತಮ್ಮ ತಂದೆಗಳಿಂದ ಹೊಂದಿದರು; ಅವರು ಯೆಹೋಶುವನ ಹಿಂದೆ ಬಂದು ದೇವರು ತಮ್ಮ ಮುಂದೆ ಹೊರಡಿಸಿದ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಇಲ್ಲೇ ಇತ್ತು.


ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೇ ಈ ಅಧಿಕಾರವನ್ನು ಕೊಡಬೇಕು; ಅವನು ದೃಢನಾಗುವಂತೆ ಅವನನ್ನು ಧೈರ್ಯಪಡಿಸಬೇಕೆಂದು ಉತ್ತರ ಕೊಟ್ಟನು.


ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸೇನಾನಾಯಕನಾಗಿ ಹೊಳೆಯನ್ನು ದಾಟಿಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ಹೊಳೆಯನ್ನು ದಾಟಿಹೋಗುವನು.


ಅದಕ್ಕೆ ದೇವರು - ನಾನೇ ನಿನ್ನ ಸಂಗಡ ಇರುವೆನು; ಮತ್ತು ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ; ನಿನ್ನನ್ನು ಕಳುಹಿಸಿದವನು ನಾನೇ ಎಂಬದಕ್ಕೆ ಇದೇ ನಿನಗೆ ಗುರುತಾಗಿರುವದು ಅಂದನು.


ಭೂವಿುಯು ಸಾರವಾದದ್ದೋ ನಿಸ್ಸಾರವಾದದ್ದೋ, ಮರಗಳುಳ್ಳದ್ದೋ ಬೈಲೋ ನೋಡಿ ತಿಳಿದುಕೊಳ್ಳಬೇಕು. ಅದಲ್ಲದೆ ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ಸಾಹಸಮಾಡಿ ತರಬೇಕೆಂದು ಬೋಧಿಸಿದನು. ಆಗ ದ್ರಾಕ್ಷಾಲತೆಗಳ ಪ್ರಥಮಫಲಕಾಲವಾಗಿತ್ತು.


ಯಾಕೋಬ್ಯರಲ್ಲಿ ಯಾವ ಆಪತ್ತಿನ ಸೂಚನೆಯೂ ಇಲ್ಲ; ಇಸ್ರಾಯೇಲ್ಯರಿಗೆ ವಿಪತ್ತು ಸಂಭವಿಸುವ ಹಾಗೆ ತೋರುವದಿಲ್ಲ. ಅವರಿಗೆ ದೇವರಾಗಿರುವ ಯೆಹೋವನು ಅವರ ಸಂಗಡಲೇ ಇದ್ದಾನೆ; ಅವರು ತಮ್ಮ ಅರಸನಿಗೋಸ್ಕರ ಮಾಡುವ ಜಯಘೋಷವು ಕೇಳಿಸುತ್ತಲೇ ಇದೆ.


ಅವನ ಮೇಲೆ ಕೈಯಿಟ್ಟು ಅಧಿಕಾರವನ್ನು ಕೊಟ್ಟನು.


ಮೋಶೆ ಈ ಧರ್ಮಶಾಸ್ತ್ರವನ್ನು ಗ್ರಂಥರೂಪವಾಗಿ ಬರೆದು ಪೂರೈಸಿದಾಗ


ಭೂಲೋಕದವರೆಲ್ಲರೂ ಹೋಗುವ ದಾರಿಯನ್ನು ನಾನೂ ಈಗ ಹಿಡಿಯಬೇಕು; ನೀನು ಧೈರ್ಯದಿಂದಿರು, ನಿನ್ನ ಪೌರುಷವನ್ನು ತೋರಿಸು.


ಯೆಹೋವನು ಇಂತೆನ್ನುತ್ತಾನೆ - ಜೆರುಬ್ಬಾಬೆಲನೇ, ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ; ಇದು ಯೆಹೋವನ ನುಡಿ; ನಾನು ನಿಮ್ಮೊಂದಿಗೆ ಇದ್ದೇನೆಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.


ನೀವು ಶೂರರಾಗಿ ಧೈರ್ಯದಿಂದಿರ್ರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವದಿಲ್ಲ, ಅಪಜಯಕ್ಕೆ ಗುರಿಪಡಿಸುವದೇ ಇಲ್ಲ ಎಂದು ಹೇಳಿದನು.


ಇವನ ಮಗನು ಎಲೀಷಾಮ; ಇವನ ಮಗನು ನೋನ್; ಇವನ ಮಗನು ಯೆಹೋಷುವ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು