Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:14 - ಕನ್ನಡ ಸತ್ಯವೇದವು J.V. (BSI)

14 ಆಹಾರಕ್ಕಾಗಿ ಆಕಳಿನ ಮೊಸರು, ಆಡುಕುರಿಗಳ ಹಾಲು, ಕೊಬ್ಬಿದ ಕುರಿಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಪಾನಕ್ಕಾಗಿ ದ್ರಾಕ್ಷೆಯ ರಕ್ತರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಹಾರಕ್ಕಾಗಿ ಆಕಳಿನ ಮೊಸರು, ಆಡು ಕುರಿಗಳ ಹಾಲು, ಕೊಬ್ಬಿದ ಕುರಿ ಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಮತ್ತು ಪಾನಕ್ಕಾಗಿ ದ್ರಾಕ್ಷಿಯರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಹಾರಕ್ಕಿತ್ತು, ಆಕಳಿನ ಮೊಸರೋಗರ ಆಡುಕುರಿಗಳ ಕ್ಷೀರ ಬಾಷಾನಿನ ಪುಷ್ಟಪಶು, ಹೋತ, ಕೊಬ್ಬಿದ ಕುರಿಟಗರಿನ ಮಾಂಸ, ಉತ್ತಮವಾದ ಗೋಧೂಮ; ಪಾನಕ್ಕಿತ್ತು ರಕ್ತಗೆಂಪಾದ ದ್ರಾಕ್ಷಾರಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ಇಸ್ರೇಲಿಗೆ ಹಿಂಡಿನಿಂದ ಬೆಣ್ಣೆಯನ್ನೂ ಹಾಲನ್ನೂ ಕೊಟ್ಟನು. ಆತನು ಕೊಬ್ಬಿದ ಕುರಿಮರಿಗಳನ್ನೂ ಆಡುಗಳನ್ನೂ ಬಾಷಾನಿನ ಅತ್ಯುತ್ತಮವಾದ ಟಗರುಗಳನ್ನೂ ಕೊಟ್ಟನು. ಜೊತೆಗೆ ಉತ್ತಮವಾದ ಗೋಧಿಯನ್ನೂ ಕೊಟ್ಟನು. ಇಸ್ರೇಲಿನ ಜನರು ಕೆಂಪು ದ್ರಾಕ್ಷಿಯಿಂದ ಮಾಡಿದ ಉತ್ತಮ ದ್ರಾಕ್ಷಾರಸವನ್ನು ಕುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹಸುಗಳ ಕೆನೆಯನ್ನೂ, ಕುರಿಗಳ ಹಾಲನ್ನೂ, ಕುರಿಮರಿಗಳ ಕೊಬ್ಬಿನ ಸಂಗಡ ಬಾಷಾನಿನ ಟಗರುಗಳನ್ನೂ ಹೋತಗಳನ್ನೂ ಉತ್ತಮವಾದ ಗೋಧಿಯನ್ನು ಕೊಟ್ಟರು. ನೀನು ರಕ್ತಗೆಂಪಾದ ದ್ರಾಕ್ಷಾರಸವನ್ನು ಕುಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:14
22 ತಿಳಿವುಗಳ ಹೋಲಿಕೆ  

ಅವನು ತನ್ನ ವಾಹನಪಶುವನ್ನು ದ್ರಾಕ್ಷಾಲತೆಗೆ ಕಟ್ಟುವನು, ರಾಜದ್ರಾಕ್ಷೆಗೆ ತನ್ನ ಕತ್ತೆಯನ್ನು ಬಿಗಿಯುವನು; ದ್ರಾಕ್ಷಾರಸದಲ್ಲಿ ತನ್ನ ಬಟ್ಟೆಗಳನ್ನು ಒಗೆಯುವನು, ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು:


ಆತನು ನಿನ್ನ ಪ್ರಾಂತದೊಳಗೆ ಸೌಭಾಗ್ಯವನ್ನುಂಟುಮಾಡುತ್ತಾನೆ; ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ.


ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು.


ಫಲವತ್ತಾದ ಭೂವಿುಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವಾಸ್ತ್ಯವಾದ ಹಿಂಡನ್ನು ನಿನ್ನ ಕೋಲಿನಿಂದ ಮೇಯಿಸು; ಪೂರ್ವಕಾಲದಂತೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.


ಸಮಾರ್ಯಬೆಟ್ಟದಲ್ಲಿನ ಬಾಷಾನಿನ ಆಕಳುಗಳೇ, ಬಡವರನ್ನು ಹಿಂಸಿಸಿ ದಿಕ್ಕಿಲ್ಲದವರನ್ನು ಜಜ್ಜಿ ನಿಮ್ಮ ಪತಿಗಳಿಗೆ - ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.


ಟಗರು ಕುರಿ ಹೋತ ಹೋರಿ ಅಂತು ಬಾಷಾನಿನ ಕೊಬ್ಬಿದ ಪಶುಗಳು ಅಂದರೆ ಬಲಿಷ್ಟರು, ಭೂಪತಿಗಳು ಇವರ ಮಾಂಸವೂ ರಕ್ತವೂ ನಿಮಗೆ ಸಿಕ್ಕುವವು.


ಅವು ಕರೆಯುವ ಹೆಚ್ಚು ಹಾಲಿನಿಂದ ಮೊಸರನ್ನು ತಿನ್ನುವನು; ದೇಶದಲ್ಲಿ ಉಳಿದ ಪ್ರತಿಯೊಬ್ಬನೂ ಮೊಸರುಜೇನುಗಳನ್ನೇ ಉಂಡು ಜೀವಿಸುವನು.


ಅವನು ಕೆಟ್ಟದ್ದು ಬೇಡ, ಒಳ್ಳೇದು ಬೇಕು ಅನ್ನುವಷ್ಟು ಬಲ್ಲವನಾಗುವಾಗ ಮೊಸರನ್ನೂ ಜೇನತುಪ್ಪವನ್ನೂ ತಿನ್ನುವನು.


ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವುಳ್ಳ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.


ಜೇನೂ ಮೊಸರೂ ಸಮೃದ್ಧಿಯಾಗಿ ಹರಿಯುವ ನದಿಗಳನ್ನು ಅವನು ನೋಡುವದೇ ಇಲ್ಲ.


ಬೆಣ್ಣೆ ಕುರಿ ಹಸುವಿನ ಗಿಣ್ಣು ಇವುಗಳನ್ನೂ ತಂದು ಕೊಟ್ಟರು. ಜನರು ಅರಣ್ಯಪ್ರಯಾಣದಿಂದ ಹಸಿದವರೂ ದಣಿದವರೂ ಬಾಯಾರಿದವರೂ ಆಗಿದ್ದಾರೆ ಅಂದುಕೊಂಡು ಇವುಗಳನ್ನು ತಂದರು.


ನೀರು ಕೇಳಿದನು, ಹಾಲು ಕೊಟ್ಟಳು; ಉತ್ತಮಪಾತ್ರೆಯಲ್ಲಿ ಮಜ್ಜಿಗೆಕೊಟ್ಟಳು.


ತರುವಾಯ ಅಬ್ರಹಾಮನು ಹಾಲುಮೊಸರನ್ನೂ ಅಟ್ಟ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಊಟಮಾಡುವವರೆಗೂ ಅವನು ಹತ್ತಿರ ನಿಂತುಕೊಂಡು ಉಪಚಾರ ಮಾಡಿದನು.


ಅದನ್ನು ಪಟ್ಟಣದ ಹೊರಗೆ ಆ ತೊಟ್ಟಿಯಲ್ಲಿ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಆಳವಾಗಿ ಇನ್ನೂರು ಮೈಲಿ ದೂರ ಹರಿಯಿತು.


ಇಸ್ರಾಯೇಲ್ಯರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲಗಳು ಅಂದರೆ ಎಣ್ಣೆ, ದ್ರಾಕ್ಷಾರಸ, ಧಾನ್ಯ ಇವುಗಳಲ್ಲಿ ಶ್ರೇಷ್ಠವಾದದ್ದು ನಿನಗೇ ಆಗಬೇಕೆಂದು ವಿಧಿಸಿದ್ದೇನೆ.


ನನ್ನ ಹೆಜ್ಜೆಗಳು ಮೊಸರಿನಲ್ಲಿ ಮುಣುಗುತ್ತಿದ್ದವು, ಬಂಡೆಯು ನನಗೋಸ್ಕರ ಎಣ್ಣೆಯನ್ನು ಪ್ರವಾಹವಾಗಿ ಸುರಿಸುತ್ತಿತ್ತು.


ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿಯೂ ನೀವು ನಿಮ್ಮ ದೇವರಾದ ಯೆಹೋವನನ್ನು ಹರ್ಷಾನಂದಗಳುಳ್ಳವರಾಗಿ ಸೇವಿಸದೆಹೋದದರಿಂದ ಯೆಹೋವನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವನು;


ಅವರು ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸಾರವುಳ್ಳ ಭೂವಿುಯನ್ನೂ ಸಮಸ್ತ ವಿಧವಾದ ಉತ್ತಮವಸ್ತುಗಳಿಂದ ತುಂಬಿದ ಮನೆಗಳನ್ನೂ ತೋಡಿದ ಬಾವಿಗಳನ್ನೂ ದ್ರಾಕ್ಷೇತೋಟ, ಎಣ್ಣೇಮರಗಳ ತೋಪು, ಎಷ್ಟೋ ಹಣ್ಣಿನ ಮರ ಇವುಗಳನ್ನೂ ವಶಮಾಡಿಕೊಂಡು ಚೆನ್ನಾಗಿ ತಿಂದು ತೃಪ್ತರಾಗಿ ಕೊಬ್ಬಿ ನೀನು ಕೊಟ್ಟ ಸಮೃದ್ಧಿಯಲ್ಲಿ ಆನಂದಿಸುತ್ತಿದ್ದರು.


ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವದಕ್ಕೂ ನಿನ್ನ ಕಡೆಗೆ ತಿರುಗಿಸುವದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದುಹಾಕಿ ನಿನ್ನನ್ನು ಅಸಡ್ಡೆಮಾಡಿದರು.


ನಾನು ನನ್ನ ಜನರನ್ನು ಮಾನವರಿಗೆ ತಕ್ಕ ಮೂಗುದಾರದಿಂದ, ಅಂದರೆ ಮಮತೆಯ ಹಗ್ಗದಿಂದ ಸೆಳೆದುಕೊಂಡೆನು; ನೊಗವನ್ನು ತಲೆಯ ಈಚೆಗೆ ತೆಗೆಯುವವರಂತೆ ನಾನು ಅವರನ್ನು ಸುಧಾರಿಸಿ ಅವರಿಗೆ ತೀನಿಯನ್ನು ನಯದಿಂದ ಇಕ್ಕಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು