Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:11 - ಕನ್ನಡ ಸತ್ಯವೇದವು J.V. (BSI)

11 ಯೆಹೋವನೇ, ಅವರ ಆಸ್ತಿಯನ್ನು ವೃದ್ಧಿಪಡಿಸು; ಅವರ ಸೇವೆಯು ನಿನಗೆ ಸಮರ್ಪಕವಾಗಿರಲಿ; ಅವರಿಗೆ ವಿರೋಧವಾಗಿ ಬರುವವರ ನಡುವನ್ನು ಮುರಿದು ಅವರ ವೈರಿಗಳು ಪುನಃ ಶ್ವಾಸಬಿಡದಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನೇ, ಅವರ ಆಸ್ತಿಯನ್ನು ವೃದ್ಧಿಪಡಿಸು; ಅವರ ಸೇವೆಯು ನಿನಗೆ ಸಮರ್ಪಕವಾಗಿರಲಿ; ಅವರಿಗೆ ವಿರುದ್ಧವಾಗಿ ಬರುವವರ ನಡುವನ್ನು ಮುರಿದು ಅವರ ವೈರಿಗಳು ಪುನಃ ಎದ್ದು ಬಾರದಂತೆ ಮಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರಾ, ವೃದ್ಧಿಪಡಿಸು ಇವನ ಆಸ್ತಿಯನು ಸಮರ್ಪಕವಾಗಿರಲಿ ನಿನಗೆ ಇವನ ಸೇವೆಯು ಇವನ ಶತ್ರುಗಳ ನಡುವನ್ನು ಮುರಿ ಮರಲಿ ಏಳದಂತೆ ಮಾಡು ಇವನ ವೈರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಯೆಹೋವನೇ, ಲೇವಿಯರಿಗೆ ಇರುವಂಥದನ್ನು ಆಶೀರ್ವದಿಸು; ಅವರು ಮಾಡಿದ್ದೆಲ್ಲಾ ನಿನಗೆ ಮೆಚ್ಚಿಕೆಯಾಗಲಿ. ಅವರ ಮೇಲೆ ಬೀಳುವವರನ್ನು ನಾಶಮಾಡು, ಅವರ ವೈರಿಗಳನ್ನು ಸೋಲಿಸು; ಅವರು ಮತ್ತೆ ಲೇವಿಯರ ಮೇಲೆ ಬೀಳದಂತೆ ಮಾಡು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರೇ, ಅವನ ಎಲ್ಲ ಕೌಶಲ್ಯಗಳನ್ನು ಆಶೀರ್ವದಿಸಿರಿ. ಅವನ ಕೈಕೆಲಸವನ್ನು ಅಂಗೀಕರಿಸಿರಿ. ಅವನಿಗೆ ವಿರೋಧವಾಗಿ ಏಳುವವರ ನಡು ಮುರಿದು ಹೋಗಲಿ. ಅವನನ್ನು ದ್ವೇಷಿಸುವವರು ತಿರುಗಿ ಏಳದ ಹೋಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:11
18 ತಿಳಿವುಗಳ ಹೋಲಿಕೆ  

ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ ಎಂಟನೆಯ ದಿನದಲ್ಲಿಯೂ ಮುಂದೆಯೂ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ಪಕ್ಷವಾಗಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಮಾಡಬೇಕು; ಆಗ ನಾನು ನಿಮಗೆ ಪ್ರಸನ್ನನಾಗುವೆನು; ಇದು ಕರ್ತನಾದ ಯೆಹೋವನ ನುಡಿ.


ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಡುತ್ತೇನೆ. ನಿನ್ನ ದೇವರಾದ ಯೆಹೋವನು ನಿನಗೆ ಪ್ರಸನ್ನನಾಗಲಿ ಎಂದು ಹೇಳಿದನು.


ಹೀಗಿರಲು ಈ ಮಾತನ್ನು ತಾತ್ಸಾರ ಮಾಡುವವನು ಮನುಷ್ಯನನ್ನು ತಿರಸ್ಕರಿಸುವದು ಮಾತ್ರವಲ್ಲದೆ ಪವಿತ್ರಾತ್ಮವರವನ್ನು ನಿಮಗೆ ದಯಪಾಲಿಸುವ ದೇವರನ್ನೂ ತಿರಸ್ಕರಿಸುತ್ತಾನೆ.


ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನು ಅಲಕ್ಷ್ಯಮಾಡುವವನಾಗಿದ್ದಾನೆ; ನನ್ನನ್ನು ಅಲಕ್ಷ್ಯಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಅಲಕ್ಷ್ಯಮಾಡುವವನಾಗಿದ್ದಾನೆ ಅಂದನು.


ಕಂಡ ದೋಷವನ್ನು ಚಾವಡಿಯಲ್ಲಿ ಖಂಡಿಸುವವನ ಮೇಲೆ ಹಗೆತೋರಿಸುತ್ತೀರಿ, ಯಥಾರ್ಥವಾದಿಯನ್ನು ದ್ವೇಷಿಸುತ್ತೀರಿ.


ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ಬಯ್ಯುತ್ತಾರೆ.


ಅಪಸಾಕ್ಷಿಯಿಂದ ತಪ್ಪು ಹೊರಿಸುವವರೂ ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ ನ್ಯಾಯವಂತನ ನ್ಯಾಯವನ್ನು ಸುಮ್ಮಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲಾ ನಿರ್ಮೂಲರಾಗುವರು.


ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ; ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ. ಸೆಲಾ.


ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲ್ಯರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.


ಬೆನ್ಯಾಮೀನ್ ಕುಲದವರ ವಿಷಯದಲ್ಲಿ ಹೀಗಂದನು - ಯೆಹೋವನು ಇವರ ಬೆಟ್ಟಗಳ ತಪ್ಪಲುಗಳಲ್ಲೇ ನಿವಾಸಿಸುತ್ತಾ ಇವರನ್ನು ಯಾವಾಗಲೂ ಆವರಿಸಿಕೊಂಡಿರುವದರಿಂದ ಆತನ ಪ್ರಿಯರಾದ ಇವರು ನಿರ್ಭಯವಾಗಿ ವಾಸಿಸುವರು.


ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ; ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನು ಬೇಡ; ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತಭಂಗದಿಂದ ಅವರನ್ನು ನಾಶಪಡಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು