Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:17 - ಕನ್ನಡ ಸತ್ಯವೇದವು J.V. (BSI)

17 ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು; ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು [ಬಲವುಳ್ಳವು]; ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೋಟ್ಯಾಂತರ ಜನರೂ ಮನಸ್ಸೆಕುಲದ ಲಕ್ಷಾಂತರ ಮಂದಿಯೂ ಇಂಥವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು. ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು (ಬಲವುಳ್ಳವು); ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೊಟ್ಯಾಂತರ ಜನರೂ ಮನಸ್ಸೆ ಕುಲದ ಲಕ್ಷಾಂತರ ಮಂದಿಯೂ ಇಂಥವರೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಜೋಸೆಫನದು ಜೇಷ್ಠಸಂತತಿಯು ಗೂಳಿಯ ಗಾಂಭೀರ್ಯವೂ ಅವನ ಕೊಂಬುಗಳು, ಕಾಡುಕೋಣದ ಕೊಂಬುಗಳು ಅವುಗಳಿಂದ ಇರಿದು ಓಡಿಸಬಲ್ಲನು ಜಗದ ಜನಾಂಗಗಳನು! ಇವನಂಥವರು ಎಫ್ರಯಿಮ್ ಕುಲದ ಕೋಟ್ಯಾಂತರ ಜನರು ಇವನಂಥವರು ಮನಸ್ಸೆಕುಲದ ಲಕ್ಷಾಂತರ ಮಂದಿಗಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೋಸೇಫನು ಬಲಶಾಲಿಯಾದ ಗೂಳಿಯಂತಿದ್ದಾನೆ. ಅವನ ಇಬ್ಬರು ಮಕ್ಕಳು ಗೂಳಿಯ ಕೊಂಬುಗಳಂತೆ ಬೇರೆಯವರನ್ನು ದೂಡಿ ಲೋಕದ ಅಂಚಿಗೆ ತಳ್ಳಿಬಿಡುತ್ತಾರೆ. ಮನಸ್ಸೆಯೊಂದಿಗೆ ಸಾವಿರಗಟ್ಟಲೆ ಜನರಿದ್ದಾರೆ. ಎಫ್ರಾಯೀಮನೊಂದಿಗೆ ಹತ್ತು ಸಾವಿರಗಟ್ಟಲೆ ಜನರಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನ ವೈಭವವು ಚೊಚ್ಚಲ ಹೋರಿಯಂತೆ ಇರುವುದು, ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇರುವುದು. ಇವುಗಳಿಂದ ಜನಾಂಗಗಳನ್ನೆಲ್ಲಾ ಇರಿದು ಒಟ್ಟಿಗೆ ಭೂಮಿಯ ಅಂಚಿನವರೆಗೆ ಓಡಿಸುವನು. ಎಫ್ರಾಯೀಮ್ ಕುಲದ ಹತ್ತು ಸಾವಿರ ಜನರೂ ಇಂಥವರೇ. ಮನಸ್ಸೆ ಕುಲದ ಸಹಸ್ರ ಜನರೂ ಇಂಥವರೇ ಆಗಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:17
27 ತಿಳಿವುಗಳ ಹೋಲಿಕೆ  

ಅವರನ್ನು ಐಗುಪ್ತದೇಶದಿಂದ ಕರಕೊಂಡು ಬಂದವನು ದೇವರೇ; ಅವರು ಕಾಡುಕೋಣದಷ್ಟು ಬಲವುಳ್ಳವರು.


ನಿನ್ನ ಸಹಾಯದಿಂದಲೇ ವೈರಿಗಳನ್ನು ಕೆಡವಿಬಿಡುವೆವು; ನಿನ್ನ ನಾಮಧೇಯದ ಬಲದಿಂದ ಎದುರಾಳಿಗಳನ್ನು ತುಳಿದುಬಿಡುವೆವು.


ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ [ಕಟ್ಟಿಕೊಂಡು] ಬಂದು - ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂದನು.


ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದೀ; ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದೀ.


ಅವರನ್ನು ಐಗುಪ್ತದೇಶದಿಂದ ಕರಕೊಂಡು ಬಂದವನು ದೇವರೇ; ಅವರು ಕಾಡಕೋಣದಷ್ಟು ಬಲವುಳ್ಳವರು. ಅವರು ಶತ್ರುಜನಗಳನ್ನು ನಿರ್ಮೂಲಮಾಡುವರು; ವೈರಿಗಳ ಎಲುಬನ್ನು ಮುರಿದುಹಾಕುವರು; ಅವರನ್ನು ಬಾಣಗಳಿಂದ ಗಾಯಪಡಿಸುವರು.


ಅದರೆ ಅವನ ತಂದೆ ಒಪ್ಪದೆ - ಮಗನೇ, ನಾನು ಬಲ್ಲೆ, ಬಲ್ಲೆ; ಇವನಿಂದಲೂ ಜನಾಂಗವುಂಟಾಗುವದು; ಇವನೂ ಬಲಿಷ್ಠನಾಗುವನು; ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು; ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು ಎಂದು ಹೇಳಿದನು.


ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸಿ ಇಸ್ರಾಯೇಲನ್ನು ಸ್ವಸ್ಥಮಾಡಬೇಕೆಂದಿರುವಾಗ ಎಫ್ರಾಯೀವಿುನ ಅಧರ್ಮವೂ ಸಮಾರ್ಯದ ದುಷ್ಟತನವೂ ವ್ಯಕ್ತವಾಗುತ್ತವೆ; ಎಲ್ಲರೂ ಮೋಸಮಾಡುತ್ತಾರೆ, ಒಳಗೆ ಕಳ್ಳರು ನುಗ್ಗುತ್ತಾರೆ, ಹೊರಗೆ ಡಕಾಯಿತಿಯವರು ಸುಲಿಯುತ್ತಾರೆ.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ.


ಎಫ್ರಾಯೀಮನ್ನು ಬಲ್ಲೆ, ಇಸ್ರಾಯೇಲು ನನಗೆ ಮರೆಯಲ್ಲ; ಎಫ್ರಾಯೀಮೇ, ನೀನೀಗ ಸೂಳೆತನಮಾಡಿದ್ದೀ, ಇಸ್ರಾಯೇಲು ಹೊಲೆಯಾಗಿದೆ.


ಈ ಯಜ್ಞಪಶುಗಳೊಂದಿಗೆ ಕಾಡುಕೋಣಗಳೂ ಹೋರಿಗೂಳಿಗಳೂ ಬರುವವು; ಆ ದೇಶವು ರಕ್ತದಿಂದ ನೆನೆಯುವದು, ಅಲ್ಲಿನ ದೂಳು ಕೊಬ್ಬಿನಿಂದ ಜಿಡ್ಡಾಗುವದು.


ಲೆಬನೋನ್ ಪರ್ವತವು ಕರುವಿನೋಪಾದಿಯಲ್ಲಿಯೂ ಸಿರ್ಯೋನ್ ಬೆಟ್ಟವು ಕಾಡುಕೋಣದ ಮರಿಯಂತೆಯೂ ಹಾರಾಡುವ ಹಾಗೆ ಮಾಡುತ್ತಾನೆ.


ಸಿಂಹಗಳ ಬಾಯಿಂದಲೂ ಕಾಡುಕೋಣಗಳ ಕೊಂಬುಗಳಿಂದಲೂ ನನ್ನನ್ನು ತಪ್ಪಿಸು. ನನಗೆ ಸದುತ್ತರವನ್ನು ಕೊಟ್ಟಿದ್ದೀಯಲ್ಲಾ.


ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ [ತಲೆಗೆ ಕಟ್ಟಿಕೊಂಡು] ಬಂದು - ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂಬದಾಗಿ ಯೆಹೋವನು ಹೇಳುತ್ತಾನೆ ಎಂದನು.


ಇಸ್ರಾಯೇಲನ ಚೊಚ್ಚಲಮಗನಾದ ರೂಬೇನನ ವಂಶಾವಳಿ. ರೂಬೇನನು ಚೊಚ್ಚಲನಾಗಿದ್ದರೂ ಅವನು ತನ್ನ ತಂದೆಯ ಹಾಸಿಗೆಯನ್ನು ಹೊಲೆಮಾಡಿದ್ದರಿಂದ ಅವನ ಹಕ್ಕು ಇಸ್ರಾಯೇಲನ ಮಗನಾದ ಯೋಸೇಫನ ಕುಲಕ್ಕೆ ಕೊಡಲ್ಪಟ್ಟಿತು.


ಎಫ್ರಾಯೀಮ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 32,500 ಮಂದಿ. ಇದೇ ಯೋಸೇಫ್ ವಂಶದ ಕುಟುಂಬಗಳ ವಿವರ.


ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರು 52,700 ಮಂದಿ.


ಹನ್ನಳ ವಿಜ್ಞಾಪನೆ - ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ; ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ತೆರೆದಿರುವದು. ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.


ಗಿಲ್ಯಾದ್ ಸೀಮೆಯೂ ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣವು. ನನ್ನ ರಾಜದಂಡವು ಯೆಹೂದಕುಲವೇ.


[ಟಗರುಹೋತಗಳೇ,] ನೀವು ಕುರಿಮೇಕೆಗಳನ್ನು ಪಕ್ಕದಿಂದಲೂ ಹೆಗಲಿನಿಂದಲೂ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಹಿಂಡನ್ನು ಚದರಿಸಿ ಬಿಟ್ಟಿರಿ;


ನಾನು ನೋಡುತ್ತಿದ್ದ ಹಾಗೆ ಆ ಟಗರು ಪಡುವಲಿಗೂ ಬಡಗಲಿಗೂ ತೆಂಕಲಿಗೂ ಹಾದಾಡುತ್ತಿತ್ತು; ಯಾವ ಜಂತುವೂ ಅದರೆದುರಿಗೆ ನಿಲ್ಲಲಾರದೆ ಹೋಯಿತು; ಅದರ ಕೈಯಿಂದ ಬಿಡಿಸಲು ಯಾವ ಪ್ರಾಣಿಗೂ ಶಕ್ತಿಯಿರಲಿಲ್ಲ; ಅದು ಮನಸ್ಸು ಬಂದಂತೆ ನಡೆದು ತನ್ನನ್ನು ಹೆಚ್ಚಿಸಿಕೊಂಡಿತು.


ಆದರೆ ಯೋಸೇಫ್ಯರು ಯೆಹೋಶುವನಿಗೆ - ನೀನು ಚೀಟುಹಾಕಿ ನಮಗೆ ಒಂದೇ ಭಾಗವನ್ನು ಕೊಟ್ಟದ್ದೇಕೆ? ಯೆಹೋವನು ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿದ್ದರಿಂದ ನಾವು ಮಹಾಜನಾಂಗವಾಗಿದ್ದೇವಲ್ಲಾ ಎಂದು ಹೇಳಲು


ಆ ಬೆಟ್ಟದ ಸೀಮೆಯನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದು ಹಾಕಬಹುದು. ಅದಕ್ಕೆ ಸೇರಿರುವ ಬೈಲೂ ನಿಮ್ಮದೇ. ಕಾನಾನ್ಯರು ಬಲಿಷ್ಠರಾಗಿ ಕಬ್ಬಿಣದ ರಥಗಳುಳ್ಳವರಾಗಿದ್ದರೂ ನೀವು ಅವರನ್ನು ಹೊರಡಿಸುವಿರಿ ಎಂದು ಉತ್ತರಕೊಟ್ಟನು.


ಆದರೆ ಯೆಹೂದನು ಎಲ್ಲಾ ಸಹೋದರರಲ್ಲಿ ಪ್ರಬಲನಾದದರಿಂದಲೂ ರಾಜ್ಯಾಧಿಕಾರವು ಇವನ ಕುಲಕ್ಕೆ ಬಂದದರಿಂದಲೂ ಯೋಸೇಫನು ವಂಶಾವಳಿಯ ಪಟ್ಟಿಗಳಲ್ಲಿ ಚೊಚ್ಚಲನೆಂದು ಲಿಖಿತನಾಗಲಿಲ್ಲ; ಆದರೂ ಚೊಚ್ಚಲನಿಗೆ ಸಿಕ್ಕತಕ್ಕ ಪಾಲು ಅವನಿಗೆ ಸಿಕ್ಕಿತು.


ಮನಸ್ಸೆಕುಲದ ಅರ್ಧಜನರು ಬಾಷಾನಿನಿಂದ ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್‍ಗಿರಿ ಇವುಗಳವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತಗಳಲ್ಲಿ ವಾಸಿಸಿದರು; ಅವರು ಅನೇಕಜನರು.


ಮನಸ್ಸೆಯ ಅರ್ಧಕುಲದಿಂದ ದಾವೀದನ ಪಟ್ಟಾಭಿಷೇಕಕ್ಕೆ ಹೋಗಬೇಕೆಂದು ಹೆಸರುಹೆಸರಾಗಿ ನೇವಿುಸಲ್ಪಟ್ಟ ಹದಿನೆಂಟು ಸಾವಿರ ಮಂದಿ;


ಇಸ್ಸಾಕಾರ್ಯರಿಂದ ಇನ್ನೂರು ಮಂದಿ ಮುಖ್ಯಸ್ಥರು; ಇವರು ಸಮಯೋಚಿತ ಜ್ಞಾನವುಳ್ಳವರಾಗಿ ಇಸ್ರಾಯೇಲ್ಯರು ಮಾಡತಕ್ಕದ್ದನ್ನು ಅರಿತವರು; ಇವರ ಸಹೋದರರೆಲ್ಲರೂ ಇವರ ಆಜ್ಞೆಗೆ ಒಳಗಾಗಿದ್ದರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು