Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:22 - ಕನ್ನಡ ಸತ್ಯವೇದವು J.V. (BSI)

22 ದಾನ್‍ಕುಲದ ವಿಷಯದಲ್ಲಿ ಹೀಗಂದನು - ದಾನ್‍ಕುಲವು ಬಾಷಾನ್ ಸೀಮೆಯಿಂದ ಹೊರಟು ಹಾರಿಬರುವ ಪ್ರಾಯದ ಸಿಂಹದಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದಾನ್ ಕುಲದ ವಿಷಯದಲ್ಲಿ, “ದಾನ್ ಕುಲವು ಬಾಷಾನ್ ಸೀಮೆಯಿಂದ ಹೊರಟು ಹಾರಿಬರುವ ಪ್ರಾಯದ ಸಿಂಹದಂತಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದಾನ್ ಕುಲ ಕುರಿತು ಮೋಶೆ ನುಡಿದದ್ದು: “ದಾನನು ಬಾಷಾನ್ ದೇಶದಿಂದ ಧಾವಿಸಿಬಂದ ಯುವಸಿಂಹನು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಮೋಶೆಯು ದಾನನ ವಿಷಯವಾಗಿ ಹೀಗೆ ಹೇಳಿದನು: “ದಾನನು ಪ್ರಾಯದಸಿಂಹದ ಮರಿ; ಅವನು ಬಾಷಾನಿನಿಂದ ನೆಗೆಯುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಮೋಶೆಯು ದಾನನ ವಿಷಯವಾಗಿ ಹೇಳಿದ್ದೇನೆಂದರೆ: “ದಾನನು ಬಾಷಾನಿನಿಂದ ಹಾರಿಬರುವ, ಪ್ರಾಯದ ಸಿಂಹದಂತಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:22
14 ತಿಳಿವುಗಳ ಹೋಲಿಕೆ  

ದಾನ್ಯರು ಮೀಕನು ಮಾಡಿಸಿದ್ದ ವಿಗ್ರಹಗಳನ್ನೂ ಅವನ ಯಾಜಕನನ್ನೂ ಅಪಹರಿಸಿಕೊಂಡು ಲಯಿಷಿಗೆ ಹೋಗಿ ಸುಖದಿಂದಲೂ ನಿರ್ಭಯದಿಂದಲೂ ವಾಸವಾಗಿದ್ದ ಅಲ್ಲಿನ ಜನರ ಮೇಲೆ ಬಿದ್ದು ಅವರನ್ನು ಕತ್ತಿಯಿಂದ ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟರು.


ದಾನ್‍ಕುಲದವರು ತಮ್ಮ ಪ್ರಾಂತವನ್ನು ವಿಸ್ತರಿಸುವದಕ್ಕಾಗಿ ಹೊರಟು ಲೆಷೆವಿುನವರೊಡನೆ ಯುದ್ಧಮಾಡಿ ಜಯಿಸಿ ಜನರನ್ನು ಕತ್ತಿಯಿಂದ ಸಂಹರಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು. ಮತ್ತು ಅದಕ್ಕೆ ತಮ್ಮ ಮೂಲಪುರುಷನ ಹೆಸರಾದ ದಾನ್ ಎಂಬ ಹೆಸರನ್ನಿಟ್ಟರು.


ದಾನ್ಯರಿಂದ ಇಪ್ಪತ್ತೆಂಟು ಸಾವಿರದ ಆರು ನೂರು ಮಂದಿ ಯುದ್ಧನಿಪುಣರು;


ಅವುಗಳನ್ನು ಒತ್ತಿ ನಾನೂ ಫಿಲಿಷ್ಟಿಯರ ಸಂಗಡ ಸಾಯುವೆನು ಎಂದು ಹೇಳಿ ಬಲವಾಗಿ ಬಾಗಿಕೊಳ್ಳಲು ಮನೆಯು ಅಧಿಪತಿಗಳ ಮೇಲೆಯೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೆಯೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದುಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಿತ್ತು.


ಅಲ್ಲಿ ಒಂದು ಕತ್ತೆಯ ದವಡೇ ಎಲುಬು ಬಿದ್ದಿತು. ಅದು ಇನ್ನೂ ಹಸಿ ಇತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಹತಿಸಿಬಿಟ್ಟು -


ಅವರ ತೊಡೆ ಸೊಂಟಗಳನ್ನು ಮುರಿದು ಅವರನ್ನು ಸಂಹರಿಸಿ ತಾನು ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು.


ಯೆಹೋವನ ಆತ್ಮವು ಫಕ್ಕನೆ ಅವನ ಮೇಲೆ ಬಂದಿತು; ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು ಅವರ ವಸ್ತ್ರಗಳನ್ನು ಸುಲುಕೊಂಡು ಒಗಟನ್ನು ಬಿಚ್ಚಿದವರಿಗೆ ತಂದುಕೊಟ್ಟನು. ಮತ್ತು ರೇಗಿದವನಾಗಿ ತನ್ನ ತಂದೆಯ ಮನೆಗೆ ಹೋದನು.


ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.


ಚೊರ್ಗಾ ಎಂಬ ಊರಲ್ಲಿ ದಾನ್ ಕುಲದವನಾದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿಯು ಬಂಜೆಯಾಗಿದ್ದದರಿಂದ ಅವನಿಗೆ ಮಕ್ಕಳಿರಲಿಲ್ಲ.


ಇದಲ್ಲದೆ ನನ್ನ ಎದೆಯು ಅದಕ್ಕೆ ತತ್ತರಗೊಂಡು ತನ್ನ ಸ್ಥಳದಿಂದ ಹಾರುವದು.


ಆಹಾ, ನಿನ್ನ ತಾಯಿಯು ಸಿಂಹಗಳೊಳಗಿನ ಸಿಂಹಿ, ಪ್ರಾಯದ ಸಿಂಹಗಳ ನಡುವೆ ಮಲಗಿತು, ಮರಿಗಳನ್ನು ಸಾಕಿತು.


ಅದು ಬೆಳೆಯಿಸಿದ ಒಂದು ಮರಿಯು ಪ್ರಾಯದ ಸಿಂಹವಾಗಿ ಬೇಟೆಯನ್ನು ಕಲಿತು ಮನುಷ್ಯರನ್ನು ನುಂಗಲಾರಂಭಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು