Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:27 - ಕನ್ನಡ ಸತ್ಯವೇದವು J.V. (BSI)

27 ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ ಎಂದು ಆಜ್ಞಾಪಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು “ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ” ಎಂದು ಆಜ್ಞಾಪಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆದಿಯಿಂದ ದೇವರೇ ನಿಮಗೆ ಶ್ರೀನಿವಾಸ ಆತನ ಹಸ್ತವೇ ನಿಮಗೆ ನಿತ್ಯಾಧಾರ! ಶತ್ರುಗಳನು ಹೊರಡಿಸುವನು ನಿಮ್ಮ ಬಳಿಯಿಂದ ಅವರನು ಸಂಹರಿಸಲು ಆಜ್ಞಾಪಿಸಿಹನು ಆತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆತನು ನಿರಂತರಕ್ಕೂ ಜೀವಿಸುವವನಾಗಿದ್ದಾನೆ. ಆತನೇ ನಿಮ್ಮ ಆಶ್ರಯಸ್ಥಾನ. ಆತನ ಸಾಮರ್ಥ್ಯ ಸದಾಕಾಲವಿರುವುದು. ಆತನು ನಿಮ್ಮನ್ನು ಸಂರಕ್ಷಿಸಿ ಕಾಪಾಡುವನು; ನಿಮ್ಮ ದೇಶವನ್ನು ಬಿಟ್ಟುಹೋಗಲು ಜನರನ್ನು ದೂಡುವನು; ‘ವೈರಿಗಳನ್ನು ನಾಶಮಾಡಿರಿ’ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಿತ್ಯ ದೇವರು ನಿನ್ನ ಆಶ್ರಯವು. ದೇವರ ಶಾಶ್ವತ ತೋಳುಗಳು ನಿನಗೆ ಆಶ್ರಯ. ನಿನ್ನ ವೈರಿಗಳನ್ನು ನಿನ್ನ ಮುಂದೆ ಓಡಿಸಿ, ‘ಅವರನ್ನು ಸಂಹರಿಸಿರಿ,’ ಎಂದು ಆಜ್ಞಾಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:27
48 ತಿಳಿವುಗಳ ಹೋಲಿಕೆ  

ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕನೂ ನನ್ನ ದೇವರೂ ನನ್ನ ಆಶ್ರಯಗಿರಿಯೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ದುರ್ಗವೂ ಆಗಿದ್ದಾನೆ.


ನೀನು ದೀನರಿಗೆ ಕೋಟೆ, ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣದುರ್ಗ, ಬಿಸಿಲಿಗೆ ನೆರಳು, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.


ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.


ಯೆಹೋವನ ನಾಮವು ಬಲವಾದ ಬುರುಜು; ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.


ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿಸಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.


ಯೆಹೋವನೇ ನನ್ನ ಶರಣನು! ಪರಾತ್ಪರನನ್ನು ನಿವಾಸಸ್ಥಾನ ಮಾಡಿಕೊಂಡಿದ್ದೀಯಲ್ಲಾ.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ ಹರ್ಷದೊಡನೆ ನಿಲ್ಲಿಸುವದಕ್ಕೂ


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಮತ್ತು ಒಬ್ಬ ಪುರುಷನು ಗಾಳಿಯಲ್ಲಿ ಮರೆಯಂತೆಯೂ ಅತಿವೃಷ್ಟಿಯಲ್ಲಿ ಆವರಣದ ಹಾಗೂ ಮರುಭೂವಿುಯಲ್ಲಿ ನೀರಿನ ಕಾಲುವೆಗಳ ಪ್ರಕಾರವೂ ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.


ಯೆಹೋವನಲ್ಲಿ ಸದಾ ಭರವಸವಿಡಿರಿ; ಯಾಹುಯೆಹೋವನು ಶಾಶ್ವತವಾಗಿ ಆಶ್ರಯಗಿರಿಯಾಗಿದ್ದಾನೆ.


ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.


ನನ್ನ ಆಯುಷ್ಯವನ್ನು ಕಡಿಮೆಮಾಡಿ ಬಿಟ್ಟಿದ್ದಾನೆ. ಆದದರಿಂದ - ನನ್ನ ದೇವರೇ, ಅರ್ಧಾಯುಷ್ಯದಲ್ಲಿಯೇ ನನ್ನನ್ನು ಒಯ್ಯಬೇಡ; ನಿನ್ನ ವರುಷಗಳು ತಲತಲಾಂತರಕ್ಕೂ ಇರುತ್ತವೆ.


ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರವಿುಯ ಭುಜಬಲದಿಂದಲೂ ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನ ಕಡೆಯಿಂದಲೂ ಅವನ ಬಿಲ್ಲು ಸ್ಥಿರವಾಗಿ ನಿಂತಿತು, ಅವನ ಕೈಗಳು ಚುರುಕಾಗಿ ಮಾಡಲ್ಪಟ್ಟವು.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ.


ಸರ್ವಯುಗಗಳ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಏಕದೇವರಿಗೆ ಯುಗಯುಗಾಂತರಗಳಲ್ಲಿಯೂ ಮಾನಪ್ರಭಾವಗಳಿರಲಿ. ಆಮೆನ್.


ಇದರಲ್ಲಿ ನನ್ನ ಉದ್ದೇಶವೇನಂದರೆ - ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ನೇಮನಿಷ್ಠೆಗಳ ಫಲವಾಗಿರುವ ಸ್ವನೀತಿಯನ್ನಾಶ್ರಯಿಸದೆ ಕ್ರಿಸ್ತನನ್ನು ನಂಬುವದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿ ಕಾಣಿಸಿಕೊಳ್ಳಬೇಕೆಂಬದೇ.


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಶಾಶ್ವತರಾಜನೂ ಆಗಿದ್ದಾನೆ; ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ಅವನ ಎಡಗೈ ನನಗೆ ತಲೆಗಿಂಬಾಗಿ ಬಲಗೈ ತಬ್ಬುವದಾದರೆ ಎಷ್ಟೋ ಸಂತೋಷ!


ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;


ಯಾಕಂದರೆ ಜೀವವನ್ನುಂಟುಮಾಡುವ ಪವಿತ್ರಾತ್ಮನಿಂದಾದ ನಿಯಮವು ನಿನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ಕ್ರಿಸ್ತ ಯೇಸುವಿನ ಮೂಲಕ ಬಿಡಿಸಿತು.


ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು.


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು; ಆತನ ಹೊರಡೋಣದ ಮೂಲವು ಪುರಾತನವೂ ಅನಾದಿಯೂ ಆದದ್ದು.


ಬಿರುಗಾಳಿ ಬೀಸಿದರೆ ದುಷ್ಟನು ಎಲ್ಲೋ! ಶಿಷ್ಟನು ಶಾಶ್ವತವಾದ ಕಟ್ಟಡ.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. ಸೆಲಾ.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. ಸೆಲಾ.


ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು; ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ.


ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಾಗ್ರದಲ್ಲಿ ನನ್ನನ್ನು ಸುರಕ್ಷಿತವಾಗಿ ಇರಿಸುವನು.


ಇಸ್ರಾಯೇಲ್ಯರ ನಿತ್ಯಾಧಾರನು ಸುಳ್ಳಾಡುವವನಲ್ಲ; ಪಶ್ಚಾತ್ತಾಪಪಡುವವನಲ್ಲ; ಯಾಕಂದರೆ ಅವನು ಪಶ್ಚಾತ್ತಾಪಪಡ ಮನುಷ್ಯನಲ್ಲ ಎಂದು ಹೇಳಿದನು.


ನಿಮ್ಮ ಎದುರಿನಿಂದ ಹೊರಡಿಸುವವನಾಗಿ ಅವರನ್ನು ನಿಮ್ಮಿಂದ ಪರಾಜಯಪಡಿಸುವಾಗ ನೀವು ಅವರನ್ನು ನಿಶ್ಶೇಷವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು.


ದೇವರು ಅದರ ಕೊತ್ತಲುಗಳಲ್ಲಿ ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು.


ಈ ದೇಶವಾಸಿಗಳಾಗಿದ್ದ ಅಮೋರಿಯರು ಮೊದಲಾದ ಸರ್ವಜನಾಂಗಗಳನ್ನು ನಮ್ಮ ಮುಂದೆ ಹೊರಡಿಸಿ ಬಿಟ್ಟವನು ಆತನೇ. ಆದದರಿಂದ ನಾವೂ ಯೆಹೋವನನ್ನೇ ಸೇವಿಸುವೆವು; ಆತನೇ ನಮ್ಮ ದೇವರು ಎಂದು ಉತ್ತರಕೊಟ್ಟರು.


ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನೂ ಕಾನಾನ್ಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿಮ್ಮ ಮುಂದೆ ಹೊರಡಿಸುವೆನು.


ಅನಾದಿಕಾಲದಿಂದ ಆಸನಾರೂಢನಾಗಿರುವ ದೇವರು ಲಕ್ಷ್ಯವಿಟ್ಟು ಅವರನ್ನು ತಗ್ಗಿಸಿಬಿಡುವನು. ಸೆಲಾ. ಅವರು ತಮ್ಮ ಸುಖವು ಕದಲದೆಂದುಕೊಂಡು ದೇವರಿಗೆ ಹೆದರುವದಿಲ್ಲ.


ನಾನು ಯಾವಾಗಲೂ ಮರೆಹೊಗುವ ಆಶ್ರಯಗಿರಿಯಾಗಿರು; ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ. ನೀನೇ ನನ್ನ ಬಂಡೆಯೂ ಕೋಟೆಯೂ ಆಗಿದ್ದೀಯಲ್ಲಾ.


ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾವಿುಯೇ, ನೀನು ಅನಾದಿಯಿಂದಿದ್ದೀಯಲ್ಲಾ; ನಾವು ಸಾಯೆವು. ಯೆಹೋವನೇ, [ನಮ್ಮ] ನ್ಯಾಯತೀರ್ಪಿಗಾಗಿ ಅವರನ್ನು ನೇವಿುಸಿದ್ದೀ; ಶರಣನೇ, [ನಮ್ಮ] ಶಿಕ್ಷೆಗಾಗಿ ಅವರನ್ನು ನಿಲ್ಲಿಸಿದ್ದೀ.


ಅದಲ್ಲದೆ ಕಡಜದ ಹುಳಗಳನ್ನು ನಿಮ್ಮ ಮುಂಚಿತವಾಗಿ ಕಳುಹಿಸುವೆನು; ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಮುಂದೆ ನಿಲ್ಲದಂತೆ ಅವು ಅವರನ್ನು ಓಡಿಸಿಬಿಡುವವು.


ದೇವರ ಪ್ರತಾಪವನ್ನು ಕೊಂಡಾಡಿರಿ. ಆತನ ಗಾಂಭೀರ್ಯವು ಇಸ್ರಾಯೇಲ್ಯರ ಆಶ್ರಯವಾಗಿದೆ; ಆತನ ಶಕ್ತಿಯು ಮೇಘಮಾರ್ಗದಲ್ಲೆಲ್ಲಾ ವ್ಯಾಪಿಸಿದೆ.


ಸುತ್ತಲೂ ನನ್ನನ್ನು ಆವರಿಸಿ ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದೀ.


ಯೆಹೋವನು ಇಂತೆನ್ನುತ್ತಾನೆ - ಮೆರಾಥಯಿಮ್ ದೇಶಕ್ಕೂ ಪೆಕೋದಿನ ನಿವಾಸಿಗಳಿಗೂ ವಿರುದ್ಧವಾಗಿ ದಂಡೆತ್ತಿ ಹೋಗಿ ಅವರನ್ನು ಸಂಹರಿಸಿ ಅನಂತರ ದೇಶವನ್ನು ತೀರಾ ಹಾಳುಮಾಡಿ ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸು.


ನಾನೇ ಎಫ್ರಾಯೀವಿುಗೆ ನಡೆದಾಟವನ್ನು ಕಲಿಸಿದೆನು; ಅದನ್ನು ಕೈಯಲ್ಲಿ ಎತ್ತಿಕೊಂಡೆನು; ತನ್ನನ್ನು ಸ್ವಸ್ಥಮಾಡಿದವನು ನಾನೇ ಎಂದು ಅದಕ್ಕೆ ತಿಳಿಯಲಿಲ್ಲ.


ವ್ಯೂಹಭರಿತದೇಶವೇ, ನಿನ್ನ ವ್ಯೂಹಗಳನ್ನು ಈಗ ಕೂಡಿಸು; ಆಹಾ, ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ; ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು