Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 34:9 - ಕನ್ನಡ ಸತ್ಯವೇದವು J.V. (BSI)

9 ಮೋಶೆಯು ನೂನನ ಮಗನಾದ ಯೆಹೋಶುವನ ಮೇಲೆ ಕೈಯಿಟ್ಟದರಿಂದ ಅವನು ಜ್ಞಾನವರ ಸಂಪನ್ನನಾದನು. ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರವಾಗಿ ಇಸ್ರಾಯೇಲ್ಯರು ಯೆಹೋಶುವನ ಮಾತಿನ ಪ್ರಕಾರ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೋಶೆಯು ನೂನನ ಮಗನಾದ ಯೆಹೋಶುವನ ಮೇಲೆ ಕೈಯಿಟ್ಟಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರವಾಗಿ ಇಸ್ರಾಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮೋಶೆ ನೂನನ ಮಗನಾದ ಯೆಹೋಶುವನ ಮೇಲೆ ಹಸ್ತಕ್ಷೇಪಮಾಡಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಸರ್ವೇಶ್ವರ ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರ ಇಸ್ರಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮೋಶೆಯು ಯೆಹೋಶುವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ನಾಯಕನನ್ನಾಗಿ ನೇಮಿಸಿದನು. ಆಗ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮನಿಂದ ತುಂಬಲ್ಪಟ್ಟವನಾದನು. ಇಸ್ರೇಲಿನ ಜನರು ಯೆಹೋಶುವನಿಗೆ ವಿಧೇಯರಾದರು. ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರೇಲರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ನೂನನ ಮಗ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದವನಾಗಿದ್ದನು. ಏಕೆಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲರು ಯೆಹೋಶುವನ ಮಾತು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 34:9
20 ತಿಳಿವುಗಳ ಹೋಲಿಕೆ  

ಆ ಅಂಕುರದ ಮೇಲೆ ಜ್ಞಾನವಿವೇಕದಾಯಕ ಆತ್ಮ, ಆಲೋಚನಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳುವಳಿಕೆಯನ್ನೂ ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವದು;


ಅಪೊಸ್ತಲರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ನೇವಿುಸಿದರು.


ಹೇಗಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮವರವನ್ನು ಅಳತೆಮಾಡದೆ ಅನುಗ್ರಹಿಸುವದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ಈ ದಾನಿಯೇಲನಲ್ಲಿ ಪರಮಬುದ್ಧಿ ಇದ್ದದರಿಂದ ಅವನು ವಿುಕ್ಕ ಮುಖ್ಯಾಧಿಕಾರಿಗಳಿಗಿಂತಲೂ ದೇಶಾಧಿಪತಿಗಳಿಗಿಂತಲೂ ಅಧಿಕ ಸಮರ್ಥನೆನಿಸಿಕೊಂಡಿದ್ದನು; ಅವನನ್ನು ರಾಜನು ಪೂರ್ಣರಾಜ್ಯದ ಮೇಲೆ ನೇವಿುಸಲು ಉದ್ದೇಶಿಸಿದನು.


ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಲಿಯವರು ಇದನ್ನು ಕಂಡು ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿತೆಂದು ತಿಳಿದುಕೊಂಡು ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿದರು.


ಅವರು ಆಚೇದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು - ನಿನ್ನನ್ನು ಬಿಟ್ಟುಹೋಗುವ ಮೊದಲು ನಾನು ನಿನಗೋಸ್ಕರ ಏನು ಮಾಡಬೇಕನ್ನುತ್ತೀ ಹೇಳು ಎಂದು ಕೇಳಿದನು. ಅದಕ್ಕೆ ಎಲೀಷನು - ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಎಂದು ಬೇಡಿಕೊಂಡನು.


ವಿವೇಕವನ್ನು ಬೇಡಿಕೊಂಡದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಮುಂಚೆ ಇರಲಿಲ್ಲ; ಮುಂದೆಯೂ ಇರುವದಿಲ್ಲ.


ಆದದರಿಂದ ಅದನ್ನು ಆಳುವದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಲು ಸಮರ್ಥರು ಯಾರು ಎಂದು ಬೇಡಿಕೊಂಡನು.


ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮೀಯ ವರಗಳಲ್ಲಿ ಕೆಲವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಭಾರವನ್ನು ವಹಿಸಬೇಕಾಗಿರುವದಿಲ್ಲ; ನಿನ್ನ ಜೊತೆಯಲ್ಲಿ ಇವರೂ ವಹಿಸುವರು.


ರತ್ನಗಳನ್ನು ಕೆತ್ತುವದಕ್ಕೂ ಮರದಲ್ಲಿ ವಿಚಿತ್ರವಾಗಿ ಕೆತ್ತನೇ ಕೆಲಸವನ್ನು ಮಾಡುವದಕ್ಕೂ


ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ಉದ್ಯೋಗಕ್ಕೆ ನೇವಿುಸಬೇಡ. ಹಾಗೆ ನೇವಿುಸಿದರೆ ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನೆಂದು ತೋರಿ ಬಂದೀತು; ನೀನು ಶುದ್ಧನಾಗಿರುವ ಹಾಗೆ ನೋಡಿಕೋ.


ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.


ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲ್ಯರು ಮೋಶೆಗೋಸ್ಕರ ಮೂವತ್ತು ದಿನ ದುಃಖಿಸಿದರು. ಅಲ್ಲಿಗೆ ಮೋಶೆಯ ಪ್ರಲಾಪದ ದಿನಗಳು ಮುಗಿದವು.


ಜನರು ತಲೆಬಾಗಿ ನಮಸ್ಕರಿಸಿದರು. ಇಸ್ರಾಯೇಲ್ಯರು ಅಲ್ಲಿಂದ ಹೊರಟು ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ನಡಿಸಿದರು.


ಯಾರಿಗೆ ನಾನು ಜಾಣತನದ ವರವನ್ನು ಪರಿಪೂರ್ತಿಯಾಗಿ ಅನುಗ್ರಹಿಸಿದ್ದೇನೋ ಅಂಥ ಜಾಣರೆಲ್ಲರ ಸಂಗಡ ನೀನು ಮಾತಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವದಕ್ಕೆ ಪ್ರತಿಷ್ಠಿತನಾಗುವನು.


ಅಂದಿನಿಂದ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ ಯೆಹೋವನ ಸಿಂಹಾಸನದಲ್ಲಿ ಕೂತುಕೊಂಡು ವೃದ್ಧಿಯಾಗುತ್ತಾ ಬಂದನು. ಅರಸನಾದ ಸೊಲೊಮೋನನಿಗೆ ಇಸ್ರಾಯೇಲ್ಯರೆಲ್ಲರೂ ವಿಧೇಯರಾಗಿ ನಡೆಯುವವರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು