Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:5 - ಕನ್ನಡ ಸತ್ಯವೇದವು J.V. (BSI)

5 ನೀವು ಆ ಬೆಂಕಿಯ ಜ್ವಾಲೆಯ ದೆಸೆಯಿಂದ ಭಯಪಟ್ಟು ಬೆಟ್ಟವನ್ನು ಹತ್ತದೆಹೋಗಲಾಗಿ ನಾನು ಯೆಹೋವನಿಗೂ ನಿಮಗೂ ನಡುವೆ ನಿಂತು ಆತನು ಆಡಿದ ಮಾತುಗಳನ್ನು ನಿಮಗೆ ತಿಳಿಸಿದೆನು. ಆತನು ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ಆ ಬೆಂಕಿಯ ಜ್ವಾಲೆಯ ದೆಸೆಯಿಂದ ಭಯಪಟ್ಟು, ಬೆಟ್ಟವನ್ನು ಹತ್ತದೆ ಇದ್ದುದರಿಂದ ನಾನು ಯೆಹೋವನಿಗೂ ಮತ್ತು ನಿಮಗೂ ನಡುವೆ ನಿಂತು ಆತನು ಹೇಳಿದ ಮಾತುಗಳನ್ನು ನಿಮಗೆ ತಿಳಿಸಿದೆನು. ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀವು ಆ ಅಗ್ನಿಜ್ವಾಲೆಯನ್ನು ನೋಡಿ ಭಯಪಟ್ಟಿರಿ; ಬೆಟ್ಟವನ್ನು ಹತ್ತದೆ ಹೋದಿರಿ! ಆಗ ನಾನು ಸರ್ವೇಶ್ವರನಿಗೂ ನಿಮಗೂ ನಡುವೆ ನಿಂತು ಅವರು ನುಡಿದ ಮಾತುಗಳನ್ನು ನಿಮಗೆ ತಿಳಿಸಿದೆನು. ಅವರು ನುಡಿದದ್ದು ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ನೀವು ಬೆಂಕಿಗೆ ಭಯಪಟ್ಟಿದ್ದರಿಂದ ಬೆಟ್ಟವನ್ನು ಏರಲಿಲ್ಲ. ಆಗ ನಾನು ನಿಮಗೂ ಯೆಹೋವನಿಗೂ ಮಧ್ಯದಲ್ಲಿದ್ದುಕೊಂಡು ಯೆಹೋವನು ಹೇಳಿದ್ದನ್ನು ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆ ಕಾಲದಲ್ಲಿ ನಾನು ಯೆಹೋವ ದೇವರ ವಾಕ್ಯವನ್ನು ನಿಮಗೆ ತಿಳಿಸಿದ ಹಾಗೆ ಯೆಹೋವ ದೇವರಿಗೂ, ನಿಮಗೂ ನಡುವೆ ನಿಂತಿದ್ದೆನು. ಏಕೆಂದರೆ ನೀವು ಆ ಬೆಂಕಿಗೆ ಭಯಪಟ್ಟು, ಬೆಟ್ಟದ ಮೇಲೆ ಏರಲಿಲ್ಲ. ದೇವರು ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:5
15 ತಿಳಿವುಗಳ ಹೋಲಿಕೆ  

ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ಯಾತಕ್ಕೆ? ವಾಗ್ದಾನದಲ್ಲಿ ಸೂಚಿತನಾದವನು ಹುಟ್ಟಿ ಬರುವ ತನಕ ದೇವರು ಇಂಥಿಂಥದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇವಿುಸಿ ದೇವದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.


ಮೂರನೆಯ ದಿನದಲ್ಲಿ ಸೂರ್ಯೋದಯವಾಗುವಾಗ ಆ ಬೆಟ್ಟದ ಮೇಲೆ ಗುಡುಗೂ ವಿುಂಚೂ ಕಾರ್ಮುಗಿಲೂ ತುತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿದರು.


ಯಾಕಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಅನುರೂಪ ಮಾತ್ರವಾದದ್ದಾಗಿಯೂ ಕೈಯಿಂದ ಕಟ್ಟಿದ್ದಾಗಿಯೂ ಇರುವ ಆಲಯದಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು; ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು; ನನ್ನನ್ನು ಸಮೀಪಿಸುವದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.


ಆದದರಿಂದ ಆತನು ಅವರನ್ನು ಸಂಹರಿಸುವೆನೆನ್ನಲು ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.


ನೀನೇ ಹತ್ತಿರಕ್ಕೆ ಹೋಗಿ ನಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ನಡಿಸುವೆವು ಎಂದು ಹೇಳಿದಿರಿ.


ಅವನು ಸತ್ತವರಿಗೂ ಬದುಕುವವರಿಗೂ ನಡುವೆ ನಿಂತಿರುವಾಗಲೇ ಆ ವಿಪತ್ತು ಶಮನವಾಯಿತು.


ಆ ಮನುಷ್ಯರು ಅಲ್ಲಿಂದ ಸೊದೋವಿುನ ಕಡೆಗೆ ಹೋದರು; ಆದರೆ ಅಬ್ರಹಾಮನು ಯೆಹೋವನ ಎದುರಾಗಿ ಇನ್ನೂ ನಿಂತನು.


ಆಗ ಯೆಹೋವನು ಮೋಶೆಗೆ - ನೀನಿಳಿದು ಹೋಗಿ ಜನರನ್ನು ಎಚ್ಚರಿಸಬೇಕು; ಅವರು ನೋಡಬೇಕೆಂಬ ಆಶೆಯಿಂದ ಯೆಹೋವನ ಹತ್ತಿರಕ್ಕೆ ಮೇರೆಯನ್ನು ದಾಟಿ ಬಂದಾರು; ಹಾಗೆ ಬಂದರೆ ಬಹುಜನ ನಾಶವಾಗುವರು.


ಮೋಶೆ ಜನರ ಬಳಿಗೆ ಇಳಿದು ಹೋಗಿ [ಆ ಮಾತುಗಳನ್ನು] ಅವರಿಗೆ ತಿಳಿಸಿದನು.


ಪೂಜಾಸ್ಥಳಗಳನ್ನು ಹಾಳುಮಾಡಿ ಕಲ್ಲುಕಂಬಗಳನ್ನು ಒಡೆದು ಅಶೇರವಿಗ್ರಹ ಸ್ತಂಭಗಳನ್ನು ಕಡಿದುಹಾಕಿದನು; ಮೋಶೆಯು ಮಾಡಿಸಿದ ತಾಮ್ರಸರ್ಪವನ್ನು ಚೂರು ಚೂರು ಮಾಡಿದನು. ಇಸ್ರಾಯೇಲ್ಯರು ಅದಕ್ಕೆ ಆವರೆಗೂ ಧೂಪಸುಡುತ್ತಿದ್ದರು. ಅದಕ್ಕೆ ನೆಹುಷ್ಟಾನ್ ಎಂಬ ಹೆಸರಿತ್ತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು