Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:1 - ಕನ್ನಡ ಸತ್ಯವೇದವು J.V. (BSI)

1 ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಸಂಖ್ಯೆಯಲ್ಲಿಯೂ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬ ಏಳು ಜನಾಂಗಗಳನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಅಧಿಕ ಸಂಖ್ಯೆಯಲ್ಲಿಯೂ ಮತ್ತು ಅಧಿಕ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿ, ಸಂಖ್ಯೆಯಲ್ಲೂ ಶಕ್ತಿಯಲ್ಲೂ ನಿಮ್ಮನ್ನು ಮೀರುವ ಜನಾಂಗಗಳನ್ನು ಅಲ್ಲಿಂದ ನಿಮ್ಮ ಮುಂದೆಯೆ ಹೊರಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ಯೆಹೋವನು ನಿಮ್ಮನ್ನು ನಡೆಸುವನು. ನಿಮಗಿಂತ ಬಲಿಷ್ಠವಾಗಿದ್ದು ಅಲ್ಲಿ ವಾಸಿಸುತ್ತಿರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ಆ ದೇಶದಿಂದ ನಿಮಗಾಗಿ ಹೊರಗಟ್ಟುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಬರಮಾಡಿದಾಗ, ಅವರು ನಿಮಗಿಂತ ದೊಡ್ಡವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಎಂದರೆ, ಗಿರ್ಗಾಷಿಯರನ್ನೂ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:1
35 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸೇನಾನಾಯಕನಾಗಿ ಹೊಳೆಯನ್ನು ದಾಟಿಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ಹೊಳೆಯನ್ನು ದಾಟಿಹೋಗುವನು.


ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲ ಮಾಡಿ ಆ ಜನರ ದೇಶವನ್ನು ಅವರಿಗೆ ಬಾಧ್ಯವಾಗಿ ಹಂಚಿಕೊಟ್ಟನು.


ಈಗ ನಿಮ್ಮ ಅನುಭವಕ್ಕೆ ಬಂದ ಪ್ರಕಾರ ನಿಮಗಿಂತ ಮಹಾಬಲಿಷ್ಠವಾದ ಜನಾಂಗಗಳನ್ನು ಹೊರಡಿಸಲೂ ಅವರ ದೇಶದಲ್ಲಿ ನಿಮ್ಮನ್ನು ಸೇರಿಸಿ ಆ ದೇಶವನ್ನು ನಿಮಗೇ ಸ್ವದೇಶವಾಗಿ ಕೊಡಲೂಬೇಕೆಂದು ಸಂಕಲ್ಪಿಸಿ ತಾನೇ ನಿಮ್ಮೊಂದಿಗಿದ್ದು ತನ್ನ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದನಲ್ಲಾ.


ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟಾಗ ಅವರ ಕಡೆ ಕುದುರೆಗಳೂ ರಥಗಳೂ ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವದನ್ನು ಕಂಡರೆ ಹೆದರಬಾರದು. ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ .


ಇಸ್ರಾಯೇಲ್ಯರೇ ಕೇಳಿರಿ. ನಿಮಗಿಂತ ಮಹಾಬಲಿಷ್ಠ ಜನಾಂಗಗಳನ್ನೂ ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಳ್ಳುವದಕ್ಕೆ ನೀವು ಈ ಯೊರ್ದನ್ ಹೊಳೆಯನ್ನು ಇಂದು ದಾಟುವವರಾಗಿದ್ದೀರಿ.


ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದನಂತರ ನೀವು ಮನಸ್ಸಿನಲ್ಲಿ - ಯೆಹೋವನು ನಮ್ಮನ್ನು ಈ ದೇಶಕ್ಕೆ ಕರತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದು ನಮ್ಮ ಪುಣ್ಯಫಲವೇ ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ.


ನಾನು ನಿನ್ನ ಮುಂದುಗಡೆಯಲ್ಲಿ ದೂತನನ್ನು ಕಳುಹಿಸಿ ಕಾನಾನ್ಯರನ್ನೂ ಅಮೋರಿಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಹೊರಡಿಸುವೆನು.


ಜನಾಂಗಗಳನ್ನು ಅವರ ಮುಂಗಡೆಯಿಂದ ಓಡಿಸಿಬಿಟ್ಟು ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವಾಸ್ತ್ಯವಾಗಿರುವಂತೆ ಹಂಚಿಕೊಟ್ಟು ಆ ಜನಾಂಗಗಳ ಬೀಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.


ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವದು ಎಂದು ಹೇಳಿದನು.


ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ಆ ದೇಶಕ್ಕೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿದನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.


ತಾನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಮ್ಮನ್ನು ಸೇರಿಸುವದಕ್ಕಾಗಿ ಐಗುಪ್ತದೇಶದೊಳಗಿಂದ ಬರಮಾಡಿದನು;


ಆತನು ತಾನೇ ನಿಮ್ಮ ಶತ್ರುಗಳನ್ನು ನಿಮ್ಮ ಎದುರಿನಿಂದ ಹೊರಡಿಸುವೆನೆಂದು ಮಾತು ಕೊಟ್ಟನಲ್ಲವೇ.


ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದಾಗ ನೀವು ಕಟ್ಟದ ಒಳ್ಳೆಯ ದೊಡ್ಡ ಪಟ್ಟಣಗಳನ್ನೂ


ನೀವು ಹೊಳೆ ದಾಟಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಅನುಸರಿಸುವದಕ್ಕಾಗಿ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದ ಧರ್ಮೋಪದೇಶವೂ ವಿಧಿನಿರ್ಣಯಗಳೂ ಇವೇ.


ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಸೇರಿಸುವೆನು; ನೀವು ಬೇಡವೆಂದು ಹೇಳಿದ ದೇಶವನ್ನು ಅವರು ಅನುಭೋಗಿಸುವರು.


ನೀನು ಅತ್ಯಧಿಕ ಮಹತ್ವವುಳ್ಳವನಾಗಿ ನಿನಗೆದುರಾಗಿ ನಿಲ್ಲುವವರನ್ನು ಕೆಡವಿಬಿಡುತ್ತೀ, ನಿನ್ನ ಕೋಪಾಗ್ನಿಯು ಹೊರಟು ಅವರನ್ನು ಒಣಗಿದ ಹುಲ್ಲನ್ನೋ ಎಂಬಂತೆ ಭಸ್ಮ ಮಾಡುತ್ತದೆ.


ಇದಲ್ಲದೆ ಅಬ್ರಹಾಮ ಇಸಾಕ ಯಾಕೋಬರಿಗೆ ಕೊಡುವೆನೆಂದು ನಾನು ಪ್ರಮಾಣವಾಗಿ ಹೇಳಿದ ದೇಶಕ್ಕೆ ನಿಮ್ಮನ್ನು ಸೇರಿಸಿ ಅದನ್ನು ನಿಮಗೆ ಸ್ವದೇಶವನ್ನಾಗಿ ಕೊಡುವೆನು; ಯೆಹೋವನೇ ನಾನು; ಹೀಗೆ ಅವರಿಗೆ ಹೇಳು ಅಂದನು.


ಅದಲ್ಲದೆ ಕಡಜದ ಹುಳಗಳನ್ನು ನಿಮ್ಮ ಮುಂಚಿತವಾಗಿ ಕಳುಹಿಸುವೆನು; ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಮುಂದೆ ನಿಲ್ಲದಂತೆ ಅವು ಅವರನ್ನು ಓಡಿಸಿಬಿಡುವವು.


ಅವರು ನಿಮ್ಮ ದೇಶದಲ್ಲೇ ವಾಸವಾಗಿರಬಾರದು; ವಾಸವಾಗಿದ್ದರೆ ನನಗೆ ವಿರೋಧವಾಗಿ ನಿಮ್ಮಲ್ಲಿ ದ್ರೋಹಬುದ್ಧಿಯನ್ನು ಹುಟ್ಟಿಸಾರು; ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯು ನಿಮಗೆ ಉರುಲಾಗುವದು.


ನಿಮಗೆ ಸ್ವದೇಶವಾಗಿರುವದಕ್ಕೋಸ್ಕರ ನಾನು ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ


ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸುರುಬಿಡುವ ಒಬ್ಬರನ್ನಾದರೂ ಉಳಿಸಬಾರದು.


ಚೈತನ್ಯಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿರುತ್ತಾನೆಂಬದೂ ಆತನು ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು ಇವರನ್ನೆಲ್ಲಾ ನಿಮ್ಮ ಮುಂದೆ ತಪ್ಪದೆ ಹೊರಡಿಸುವನೆಂಬದೂ


ಪೂರ್ವಪಶ್ಚಿಮಗಳಲ್ಲಿರುವ ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಬೆಟ್ಟದ ಮೇಲಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ಮೋನಿನ ಬುಡದಲ್ಲಿ ವಿುಚ್ಪಾ ದೇಶದಲ್ಲಿದ್ದ ಹಿವ್ವಿಯರು ಇವರನ್ನೂ ಕರೇಕಳುಹಿಸಿದನು.


ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಆಗ ಯೆರಿಕೋವಿನವರು, ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಇವರೆಲ್ಲಾ ನಿಮಗೆ ವಿರೋಧವಾಗಿ ಯುದ್ಧಕ್ಕೆ ಬರಲು ನಾನು ಅವರೆಲ್ಲರನ್ನೂ ನಿಮ್ಮ ಕೈಗೆ ಒಪ್ಪಿಸಿದೆನು.


ಇವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವದು ಅಲ್ಪಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆ ಮಾಡಿಕೊಂಡು ಬಾಳ್‍ದೇವರನ್ನು ಪೂಜಿಸತೊಡಗಿದನು.


ಅದೇ ಕಾಲದಲ್ಲಿ ನಾನು ಅಷ್ಡೋದ್ ಅಮ್ಮೋನಿಯ ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕುರಿತು ವಿಚಾರಮಾಡಿ


ನೀವು ಅವರೊಡನೆಯಾಗಲಿ ಅವರ ದೇವತೆಗಳೊಡನೆಯಾಗಲಿ ಯಾವ ವಿಧವಾದ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು.


ದಕ್ಷಿಣ ಸೀಮೆಯಲ್ಲಿ ಅಮಾಲೇಕ್ಯರೂ ಬೆಟ್ಟದ ಸೀಮೆಯಲ್ಲಿ ಹಿತ್ತಿಯರು, ಯೆಬೂಸಿಯರು, ಅಮೋರಿಯರು ಇವರೂ ಸಮುದ್ರತೀರದಲ್ಲಿ ಮತ್ತು ಯೊರ್ದನ್ ಹೊಳೆಯ ಬಳಿಯಲ್ಲಿ ಕಾನಾನ್ಯರೂ ವಾಸವಾಗಿದ್ದಾರೆ ಎಂದು ತಿಳಿಸಿದರು.


ಆದದರಿಂದ ನಿಮ್ಮ ದೇವರಾದ ಯೆಹೋವನು ತಾನೇ ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾನೆಂದು ಈಗ ತಿಳಿದುಕೊಳ್ಳಿರಿ. ಆತನೇ ಅವರನ್ನು ನಾಶ ಮಾಡುವನು; ಆತನೇ ಅವರನ್ನು ನಿಮ್ಮ ಮುಂದೆ ಸೋತುಹೋಗುವಂತೆ ಮಾಡುವನು. ಯೆಹೋವನು ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ ಬೇಗನೆ ನಾಶಮಾಡುವಿರಿ.


ಇದಲ್ಲದೆ ಯೆಬೂಸಿಯರೂ ಅಮೋರಿಯರೂ ಗಿರ್ಗಾಷಿಯರೂ


ಇದಲ್ಲದೆ ಇಸ್ರಾಯೇಲ್ಯರಿಂದ ಸಂಹೃತರಾಗದೆ ಕಾನಾನ್ ದೇಶದಲ್ಲಿ ಉಳಿದ ಹಿತ್ತಿಯ ಅಮೋರಿಯ ಪೆರಿಜೀಯ ಹಿವ್ವಿಯ ಯೆಬೂಸಿಯ ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನೂ [ತನ್ನ ಕೆಲಸಕ್ಕಾಗಿ] ಬಿಟ್ಟಿ ಹಿಡಿದನು.


ಇದಾದನಂತರ ಪ್ರಧಾನಪುರುಷರು ನನ್ನ ಬಳಿಗೆ ಬಂದು - ಇಸ್ರಾಯೇಲ್ಯರಲ್ಲಿ ಸಾಧಾರಣಜನರೂ ಯಾಜಕರೂ ಲೇವಿಯರೂ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಎಂಬ ಅನ್ಯದೇಶಗಳವರ ಬಳಕೆಯನ್ನು ತೊರೆಯದೆ ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು