Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:24 - ಕನ್ನಡ ಸತ್ಯವೇದವು J.V. (BSI)

24 ಆತನು ಅವರ ಅರಸುಗಳನ್ನು ನಿಮ್ಮ ಕೈಗೆ ಸಿಕ್ಕುವಂತೆ ಮಾಡಲಾಗಿ ನೀವು ಅವರ ಹೆಸರುಗಳೇ ಭೂವಿುಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲುವದಿಲ್ಲ; ಎಲ್ಲರನ್ನೂ ನಾಶಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆತನು ಅವರ ಅರಸರನ್ನು ನಿಮ್ಮ ಕೈಗೆ ಸಿಗುವಂತೆ ಮಾಡಿ, ನೀವು ಅವರ ಹೆಸರುಗಳೇ ಭೂಮಿಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ; ನೀವು ಎಲ್ಲರನ್ನೂ ನಾಶಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಈ ಜನರ ಅರಸುಗಳು ನಿಮ್ಮ ಕೈಗೆಸಿಕ್ಕುವಂತೆ ಮಾಡುವರು. ನೀವು ಅವರ ಹೆಸರುಗಳೇ ಭೂಮಿಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲರು; ಎಲ್ಲರನ್ನು ನೀವು ನಾಶಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅವರ ರಾಜರನ್ನು ನೀವು ಸೋಲಿಸುವಂತೆ ಮಾಡುವನು. ನೀವು ಅವರನ್ನು ಕೊಂದು ಅವರ ಹೆಸರು ಉಳಿಯದಂತೆ ಮಾಡುವಿರಿ. ನಿಮ್ಮನ್ನು ಯಾರೂ ತಡೆಯಲಾರರು. ನೀವು ಪ್ರತಿಯೊಬ್ಬರನ್ನು ನಾಶಮಾಡಿಬಿಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ದೇವರು ಅವರ ಅರಸರನ್ನು ನಿಮಗೆ ಒಪ್ಪಿಸುವರು. ನೀವು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ದಂಡಿಸುವಿರಿ. ನೀವು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿಮ್ಮ ಮುಂದೆ ನಿಲ್ಲಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:24
26 ತಿಳಿವುಗಳ ಹೋಲಿಕೆ  

ಯೆಹೋವನು ಮಹಾಪರಾಕ್ರವಿುಗಳಾದ ಜನಾಂಗಗಳನ್ನು ನಿಮ್ಮೆದುರಿನಿಂದ ಓಡಿಸಿಬಿಟ್ಟಿದ್ದಾನೆ; ನಿಮ್ಮ ಮುಂದೆ ಈವರೆಗೆ ಒಬ್ಬನೂ ನಿಲ್ಲಲಿಲ್ಲವಲ್ಲಾ.


ಯೆಹೋವನು ಯೆಹೋಶುವನಿಗೆ - ಅವರಿಗೆ ಹೆದರಬೇಡ; ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವದಿಲ್ಲ ಎಂದು ಹೇಳಿದನು.


ಯಾರೂ ನಿಮ್ಮ ಮುಂದೆ ನಿಲ್ಲುವದಿಲ್ಲ. ತಾನು ನಿಮಗೆ ಹೇಳಿದಂತೆ ನೀವು ಕಾಲಿಡುವ ಎಲ್ಲಾ ಪ್ರದೇಶಗಳ ಜನಗಳಿಗೂ ನಿವ್ಮಿುಂದ ದಿಗಿಲೂ ಹೆದರಿಕೆಯೂ ಉಂಟಾಗುವಂತೆ ನಿಮ್ಮ ದೇವರಾದ ಯೆಹೋವನು ಮಾಡುವನು.


ಇಸ್ರಾಯೇಲ್ ದೇವರಾದ ಯೆಹೋವನು ಅವರ ಪಕ್ಷದಲ್ಲಿ ಯುದ್ಧಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿಯೇ ವಶಮಾಡಿಕೊಂಡನು.


ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನು.


ಬಿಡು, ನಾನು ಅವರನ್ನು ನಾಶಮಾಡಿ ಅವರ ಹೆಸರನ್ನು ಭೂವಿುಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾಬಲಿಷ್ಠ ಜನಾಂಗವು ನಿನ್ನಿಂದುಂಟಾಗುವಂತೆ ಮಾಡುವೆನು ಎಂದು ಹೇಳಿದನು.


ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಈ ಎಲ್ಲಾ ವಿಷಯಗಳಲ್ಲಿ ಪೂರ್ಣ ಜಯಶಾಲಿಗಳಾಗುತ್ತೇವೆ.


ಆದರೆ ದೇವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಟ್ಟಿದ್ದಾನೆ; ಆತನಿಗೆ ಸ್ತೋತ್ರ.


ನಾನು ಯೆಹೂದದ ಮೇಲೂ ಯೆರೂಸಲೇವಿುನವರೆಲ್ಲರ ಮೇಲೂ ಕೈಯೆತ್ತಿ ಈ ಸ್ಥಳದಿಂದ ಬಾಳನ ಪೂಜೆಯನ್ನು ನಿಶ್ಶೇಷಗೊಳಿಸಿ ಕೆಮಾರ್ಯ ಮೊದಲಾದ ಪೂಜಾರಿಗಳನ್ನು ನಿರ್ನಾಮಮಾಡುವೆನು;


ನೀವು ಅವುಗಳಿಗೆ - ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂವಿುಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು ಎಂದು ಹೇಳಿರಿ.


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ ಎಂದು ಯೆಹೋವನು ಅನ್ನುತ್ತಾನೆ.


ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ; ದುಷ್ಟರ ನಾಮವು ನಿರ್ನಾಮ.


ನೀನು ಜನಾಂಗಗಳನ್ನು ಭಂಗಿಸಿ ದುಷ್ಟರನ್ನು ನಾಶಮಾಡಿದ್ದೀ; ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದೀ;


ಯೆಹೋವನು ಅಂಥವನನ್ನು ಎಂದಿಗೂ ಕ್ಷವಿುಸದೆ ಬಹಳ ಸಿಟ್ಟುಮಾಡಿಕೊಂಡು ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂವಿುಯ ಮೇಲೆ ಇಲ್ಲದಂತೆ ಮಾಡುವನು.


ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂವಿುಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು.


ಆಗ ಯೆಹೋವನು ಮೋಶೆಗೆ - ಭೂವಿುಯ ಮೇಲೆ ಅಮಾಲೇಕ್ಯರ ಹೆಸರೇ ಇಲ್ಲದಂತೆ ಮಾಡುವೆನು; ಈ ಮಾತನ್ನು ಜ್ಞಾಪಕಾರ್ಥವಾಗಿ ಪುಸ್ತಕದಲ್ಲಿ ಬರೆ, ಮತ್ತು ಯೆಹೋಶುವನಿಗೆ ಮಂದಟ್ಟು ಮಾಡಿಕೊಡು ಎಂದು ಹೇಳಿದನು.


ಆದದರಿಂದ ನಿಮ್ಮ ದೇವರಾದ ಯೆಹೋವನು ತಾನೇ ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾನೆಂದು ಈಗ ತಿಳಿದುಕೊಳ್ಳಿರಿ. ಆತನೇ ಅವರನ್ನು ನಾಶ ಮಾಡುವನು; ಆತನೇ ಅವರನ್ನು ನಿಮ್ಮ ಮುಂದೆ ಸೋತುಹೋಗುವಂತೆ ಮಾಡುವನು. ಯೆಹೋವನು ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ ಬೇಗನೆ ನಾಶಮಾಡುವಿರಿ.


ಆಗ ಯೆಹೋವನು ಯೆಹೋಶುವನಿಗೆ - ನೋಡು, ನಾನು ಯೆರಿಕೋವನ್ನೂ ಅದರ ಅರಸನನ್ನೂ ಯುದ್ಧವೀರರನ್ನೂ ನಿನ್ನ ಕೈಗೆ ಒಪ್ಪಿಸಿದ್ದೇನೆ.


ಅವರು ಹೋಗಿ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದುಮಂದಿ ಅರಸರನ್ನು ಗವಿಯಿಂದ ಹೊರಗೆ ಅವನ ಬಳಿಗೆ ತಂದರು.


ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳಕಲಿನ ಪ್ರದೇಶ, ಬೆಟ್ಟಗಳ ಬುಡದ ಪ್ರದೇಶ ಇವುಗಳನ್ನು ಸ್ವತಂತ್ರಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವದೆಲ್ಲವನ್ನೂ ಸಂಹರಿಸಿದನು.


ಅವನು ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆರ್ಮೋನಿನ ಬುಡದಲ್ಲಿ ಲೆಬನೋನ್ ತಗ್ಗಿನಲ್ಲಿರುವ ಬಾಲ್ಗಾದ್ ಪಟ್ಟಣದವರೆಗೂ ಇರುವ ಪ್ರದೇಶವನ್ನೆಲ್ಲಾ ತೆಗೆದುಕೊಂಡು ಅದರ ಎಲ್ಲಾ ಅರಸರನ್ನು ಹಿಡಿದು ಸಂಹರಿಸಿಬಿಟ್ಟನು.


ತಿರ್ಚದ ಅರಸನು 1; ಒಟ್ಟು ಅರಸರು 31 ಮಂದಿ.


ಯೆಹೋವನು ಅವರ ಪೂರ್ವಿಕರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲಾ ಕಡೆಯಲ್ಲಿಯೂ ಸಮಾಧಾನಕೊಟ್ಟನು. ವೈರಿಗಳಲ್ಲಿ ಒಬ್ಬನೂ ಅವರ ಮುಂದೆ ನಿಲ್ಲಲಿಲ್ಲ. ಆತನು ಎಲ್ಲರನ್ನೂ ಅವರ ಕೈಗೆ ಒಪ್ಪಿಸಿದನು.


ನಿಮ್ಮ ದೇವರಾದ ಯೆಹೋವನು ನಿಮಗೋಸ್ಕರ ಈ ಜನಾಂಗಗಳಿಗೆಲ್ಲಾ ಮಾಡಿದ್ದೆಲ್ಲವನ್ನೂ ನೋಡಿದ್ದೀರಷ್ಟೆ; ಹೌದು, ನಿಮಗಾಗಿ ಯುದ್ಧ ಮಾಡಿದಾತನು ನಿಮ್ಮ ದೇವರಾದ ಯೆಹೋವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು