Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:17 - ಕನ್ನಡ ಸತ್ಯವೇದವು J.V. (BSI)

17 ಈ ಭಾಗ್ಯವು ನಮ್ಮ ಸಾಮರ್ಥ್ಯ ಸಾಹಸಗಳಿಂದಲೇ ನಮಗುಂಟಾಯಿತು ಅಂದುಕೊಂಡೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿಮ್ಮ ಮನಸ್ಸಿನೊಳಗೆ, “ಈ ಭಾಗ್ಯವು ನಮ್ಮ ಸಾಮರ್ಥ್ಯ ಮತ್ತು ಸಾಹಸಗಳಿಂದಲೇ ನಮಗುಂಟಾಯಿತು” ಎಂದು ಅಂದುಕೊಂಡೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ‘ಈ ಭಾಗ್ಯ ನಮ್ಮ ಸಾಮರ್ಥ್ಯ ಸಾಹಸಗಳಿಂದಲೇ ನಮಗೆ ಲಭಿಸಿತು’ ಎಂದುಕೊಂಡೀರಿ ಎಚ್ಚರಿಕೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ‘ಇವೆಲ್ಲಾ ನಾವೇ ಸಂಪಾದಿಸಿದ್ದು, ನಮ್ಮ ಶಕ್ತಿಸಾಮರ್ಥ್ಯಗಳಿಂದ ಇವುಗಳನ್ನು ನಾವು ಪಡೆದೆವು’ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿಮ್ಮ ದೇವರಾದ ಯೆಹೋವ ದೇವರನ್ನು ಮರೆತು, “ನಮ್ಮ ಹಸ್ತ ಬಲ ಸಾಮರ್ಥ್ಯವೇ ನಮಗೆ ಈ ಆಸ್ತಿಯನ್ನು ಸಂಪಾದಿಸಿತು,” ಎಂದು ನಿಮ್ಮ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:17
17 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದನಂತರ ನೀವು ಮನಸ್ಸಿನಲ್ಲಿ - ಯೆಹೋವನು ನಮ್ಮನ್ನು ಈ ದೇಶಕ್ಕೆ ಕರತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದು ನಮ್ಮ ಪುಣ್ಯಫಲವೇ ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ.


ನಿನಗೂ ಇತರರಿಗೂ ತಾರತಮ್ಯ ಮಾಡಿದವರು ಯಾರು? ದೇವರಿಂದ ಹೊಂದದಿರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?


ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವದು ಇಗೋ, ಮಹಾಪಟ್ಟಣವಾದ ಈ ಬಾಬೆಲ್ ಎಂದು ಕೊಚ್ಚಿಕೊಂಡನು.


ಎಫ್ರಾಯೀಮು - ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ ಅಂದುಕೊಳ್ಳುತ್ತದೋ?


ಆ ಜನಗಳು ನಮಗಿಂತ ಹೆಚ್ಚು ಮಂದಿ; ಅವರನ್ನು ಹೊರಡಿಸುವದು ನಮ್ಮಿಂದ ಹೇಗಾದೀತು ಅಂದುಕೊಳ್ಳುತ್ತೀರೋ? ಅವರಿಗೆ ಹೆದರಬೇಡಿರಿ;


ತನ್ನ ಬಲೆಗೆ ಬಲಿಕೊಡುತ್ತಾನೆ, ತನ್ನ ಜಾಲಕ್ಕೆ ಧೂಪಹಾಕುತ್ತಾನೆ; ಅವುಗಳ ಮೂಲಕವೇ ಅವನ ಭೋಜನವು ಪುಷ್ಟಿ, ಅವನ ಆಹಾರವು ರುಚಿ.


ಆಗ ಯೆಹೋವನು ಗಿದ್ಯೋನನಿಗೆ - ನಿನ್ನ ಸಂಗಡ ಇರುವ ಜನರು ಹೆಚ್ಚಾಗಿದ್ದಾರೆ; ಇವರ ಕೈಗೆ ವಿುದ್ಯಾನ್ಯರನ್ನು ಒಪ್ಪಿಸುವದು ನನಗೆ ಸರಿಯಾಗಿ ಕಾಣುವದಿಲ್ಲ; ಒಪ್ಪಿಸಿಕೊಟ್ಟರೆ ಸ್ವಹಸ್ತದಿಂದಲೇ ನಮಗೆ ರಕ್ಷಣೆಯುಂಟಾಯಿತೆಂದು ಹೆಚ್ಚಳ ಪಟ್ಟು ನನ್ನನ್ನು ಅಲಕ್ಷ್ಯಮಾಡಾರು.


ಬಡತನ ಸಿರಿತನಗಳನ್ನು ಕೊಡುವವನೂ ತಗ್ಗಿಸುವವನೂ ಹೆಚ್ಚಿಸುವವನೂ ಯೆಹೋವನೇ.


ನಮ್ಮ ಪಿತೃಗಳಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ಅವರ ಭುಜಬಲವೇ ಅವರಿಗೆ ಜಯಕೊಡಲಿಲ್ಲ. ನಿನ್ನ ಭುಜಬಲ, ಹಸ್ತ, ಪ್ರಸನ್ನತೆ ಇವೇ ಅವರಿಗೆ ಜಯವನ್ನುಂಟುಮಾಡಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.


ನಾನು ಲೋಕದಲ್ಲಿ ತಿರಿಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲವಿಲ್ಲ, ಬಲಿಷ್ಠರಿಗೆ ಯುದ್ಧದಲ್ಲಿ ಜಯವಾಗದು, ಜ್ಞಾನಿಗಳಿಗೆ ಅನ್ನ ಸಿಕ್ಕದು, ವಿವೇಕಿಗಳಿಗೆ ಧನ ಲಭಿಸದು, ಪ್ರವೀಣರಿಗೆ ದಯೆ ದೊರೆಯದು; ಕಾಲವೂ ಪ್ರಾಪ್ತಿಯೂ ಯಾರಿಗೂ ತಪ್ಪಿದ್ದಲ್ಲ ಎಂದು ತಿಳಿದುಕೊಂಡೆನು.


ಆಗ ದಾವೀದನು ಅವರಿಗೆ - ಸಹೋದರರೇ, ಯೆಹೋವನು ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದಿದ್ದ ಶತ್ರುಗಳ ಗುಂಪನ್ನು ನಮ್ಮ ಕೈಗೆ ಒಪ್ಪಿಸಿ ನಮಗೆ ಇಷ್ಟನ್ನೆಲ್ಲಾ ಕೊಟ್ಟ ಮೇಲೆ ನೀವು ಹೀಗೆ ಮಾಡಬಾರದು.


ನನ್ನ ಆಸ್ತಿ ದೊಡ್ಡದೆಂದೂ ನನ್ನ ಕೈಯೇ ಬಹು ಸಂಪತ್ತನ್ನು ಪಡೆಯಿತೆಂದೂ ಹೆಚ್ಚಳಪಟ್ಟಿದ್ದರೆ


ಗಳಿಸುವ ಸಮಯ, ಕಳೆಯುವ ಸಮಯ, ಕಾಪಾಡುವ ಸಮಯ, ಬಿಸಾಡುವ ಸಮಯ, ಹರಿಯುವ ಸಮಯ,


ಯೆಹೋವನ ಈ ಮಾತನ್ನು ಸಾರು ಎಂದು ನನಗೆ ಅಪ್ಪಣೆಯಾಯಿತು - ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವವು; ಅವು ಹೊಲಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಅರಿಗಳಂತಿರುವವು.


ನೀನು ನಿನ್ನ ಅಧಿಕಜ್ಞಾನದಿಂದಲೂ ವ್ಯಾಪಾರದಿಂದಲೂ ಸಂಪತ್ತನ್ನು ವೃದ್ಧಿಮಾಡಿಕೊಂಡಿರಲು ನಿನ್ನ ಮನಸ್ಸು ನಿನ್ನ ಆಸ್ತಿಯ ನಿವಿುತ್ತ ಉಬ್ಬಿಕೊಂಡಿದೆ;


ಆದಕಾರಣ, ಅರಸೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ - ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು ಎಂದರಿಕೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು