Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:18 - ಕನ್ನಡ ಸತ್ಯವೇದವು J.V. (BSI)

18 ಆದದರಿಂದ ನಿಮ್ಮ ದೇವರಾದ ಯೆಹೋವನೇ ತಾನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ, ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವುದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮಗೆ ಮನಮುಟ್ಟುವ ರೀತಿಯಲ್ಲಿ ನೆರವೇರಿಸಿದ್ದಾರೆ. ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವ ಸಾಮರ್ಥ್ಯವನ್ನು ಕೊಟ್ಟಿದ್ದಾರೆ ಎಂಬುದನ್ನು ಜ್ಞಾಪಕಮಾಡಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಿಮ್ಮ ದೇವರಾದ ಯೆಹೋವನನ್ನು ಜ್ಞಾಪಕಮಾಡಿಕೊಳ್ಳಿ. ಇವೆಲ್ಲಾ ಸಂಪಾದಿಸುವುದಕ್ಕೆ ಆತನೇ ನಿಮಗೆ ಶಕ್ತಿ ಕೊಟ್ಟನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿ. ಯೆಹೋವನು ನಿಮಗೆ ಹೀಗೆ ಮಾಡುವುದರ ಉದ್ದೇಶವೇನಾಗಿತ್ತು? ಆತನು ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿಮ್ಮ ದೇವರಾದ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರೇ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸುವಂತೆ ಇಂದು ನೀವು ಇಷ್ಟು ಆಸ್ತಿಯನ್ನು ಸಂಪಾದಿಸುವ ಸಾಮರ್ಥ್ಯವನ್ನು ನಿಮಗೆ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:18
19 ತಿಳಿವುಗಳ ಹೋಲಿಕೆ  

ಯೆಹೋವನ ಆಶೀರ್ವಾದವು ಭಾಗ್ಯದಾಯಕವು; ಅದು ವ್ಯಸನವನ್ನು ಸೇರಿಸದು.


ತನ್ನ ಧಾನ್ಯದ್ರಾಕ್ಷಾರಸತೈಲಗಳು ನನ್ನಿಂದ ದೊರೆತವುಗಳೆಂದೂ ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿ ಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.


ಯೆಹೋವನು ನಿಮ್ಮನ್ನು ಪ್ರೀತಿಸಿ ತಾನು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿ ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು.


ನೀವು ಈ ವಿಧಿಗಳನ್ನು ಲಕ್ಷ್ಯವಿಟ್ಟು ಅನುಸರಿಸಿದರೆ ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನೂ ಕೃಪೆಯನ್ನೂ ನಿಮ್ಮಲ್ಲಿ ನೆರವೇರಿಸುವವನಾಗಿ


ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ. ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನೂ ನನ್ನ ಬೆರಳುಗಳಿಗೆ ಕಾಳಗವನ್ನೂ ಕಲಿಸಿದ್ದಾನೆ.


ಆದದರಿಂದ ಯೆಹೋವನೇ, ನೀನು ಅನುಗ್ರಹಿಸಿರುವ ಭೂವಿುಯ ಬೆಳೆಯಲ್ಲಿ ಪ್ರಥಮಫಲಗಳನ್ನು ನಾವು ಕಾಣಿಕೆಯಾಗಿ ತಂದಿದ್ದೇವೆ; ಸ್ವೀಕರಿಸಬೇಕು ಎಂದು ಹೇಳಿ ಆ ಪ್ರಥಮಫಲಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿಟ್ಟು ಆತನನ್ನು ಆರಾಧಿಸಬೇಕು.


ಆಗ ಯೆಹೋವನು ಗಿದ್ಯೋನನಿಗೆ - ನಿನ್ನ ಸಂಗಡ ಇರುವ ಜನರು ಹೆಚ್ಚಾಗಿದ್ದಾರೆ; ಇವರ ಕೈಗೆ ವಿುದ್ಯಾನ್ಯರನ್ನು ಒಪ್ಪಿಸುವದು ನನಗೆ ಸರಿಯಾಗಿ ಕಾಣುವದಿಲ್ಲ; ಒಪ್ಪಿಸಿಕೊಟ್ಟರೆ ಸ್ವಹಸ್ತದಿಂದಲೇ ನಮಗೆ ರಕ್ಷಣೆಯುಂಟಾಯಿತೆಂದು ಹೆಚ್ಚಳ ಪಟ್ಟು ನನ್ನನ್ನು ಅಲಕ್ಷ್ಯಮಾಡಾರು.


ಬಡತನ ಸಿರಿತನಗಳನ್ನು ಕೊಡುವವನೂ ತಗ್ಗಿಸುವವನೂ ಹೆಚ್ಚಿಸುವವನೂ ಯೆಹೋವನೇ.


ಅಮಚ್ಯನು ದೇವರ ಮನುಷ್ಯನನ್ನು - ಹಾಗಾದರೆ ನಾನು ಇಸ್ರಾಯೇಲ್ ಸೈನ್ಯಕ್ಕೋಸ್ಕರ ನೂರು ತಲಾಂತುಗಳನ್ನು ಕೊಟ್ಟ ವಿಷಯದಲ್ಲಿ ಮಾಡುವದೇನು ಎಂದು ಕೇಳಲು ಅವನು ಯೆಹೋವನು ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿನಗೆ ಕೊಡಬಲ್ಲನು ಅಂದನು.


ನಮ್ಮ ಪಿತೃಗಳಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ಅವರ ಭುಜಬಲವೇ ಅವರಿಗೆ ಜಯಕೊಡಲಿಲ್ಲ. ನಿನ್ನ ಭುಜಬಲ, ಹಸ್ತ, ಪ್ರಸನ್ನತೆ ಇವೇ ಅವರಿಗೆ ಜಯವನ್ನುಂಟುಮಾಡಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.


ನಾನು ಲೋಕದಲ್ಲಿ ತಿರಿಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲವಿಲ್ಲ, ಬಲಿಷ್ಠರಿಗೆ ಯುದ್ಧದಲ್ಲಿ ಜಯವಾಗದು, ಜ್ಞಾನಿಗಳಿಗೆ ಅನ್ನ ಸಿಕ್ಕದು, ವಿವೇಕಿಗಳಿಗೆ ಧನ ಲಭಿಸದು, ಪ್ರವೀಣರಿಗೆ ದಯೆ ದೊರೆಯದು; ಕಾಲವೂ ಪ್ರಾಪ್ತಿಯೂ ಯಾರಿಗೂ ತಪ್ಪಿದ್ದಲ್ಲ ಎಂದು ತಿಳಿದುಕೊಂಡೆನು.


ಕಷ್ಟದ ದಿನಗಳೂ ಸಂತೋಷವಿಲ್ಲವೆಂದು ನೀನು ಹೇಳುವ ವರುಷಗಳೂ ಸಮೀಪಿಸುವದರೊಳಗಾಗಿ ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು .


ನೀವು ಕೂಡಿಸದ ಉತ್ತಮವಸ್ತುಗಳಿಂದ ತುಂಬಿದ ಮನೆಗಳನ್ನೂ ನೀವು ಅಗೆಯದ ನೀರಗುಂಡಿಗಳನ್ನೂ ನೀವು ಬೆಳಸದ ದ್ರಾಕ್ಷೇತೋಟಗಳನ್ನೂ ಎಣ್ಣೆಮರಗಳನ್ನೂ ಅನುಭವಿಸುತ್ತಾ ತೃಪ್ತರಾಗಿರುವಾಗ


ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚಿ ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣರೂಪವಾಗಿ ಕೊಟ್ಟ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.


ಇಸ್ರಾಯೇಲ್ಯರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.


ಪ್ರಭಾವೈಶ್ವರ್ಯಗಳು ನಿನ್ನ ಸನ್ನಿಧಿಯಿಂದ ಬರುತ್ತವೆ; ನೀನು ಸರ್ವಾಧಿಕಾರಿಯು; ಬಲಪರಾಕ್ರಮಗಳು ನಿನ್ನ ಹಸ್ತದಲ್ಲಿರುತ್ತವೆ; ಎಲ್ಲಾ ದೊಡ್ಡಸ್ತಿಕೆಗೂ ಶಕ್ತಿಗೂ ನೀನೇ ಮೂಲನು.


ಇಂಥಾ ಯೋಚನೆಯು ಸುಳ್ಳಾಗಿ ಪ್ರವಾದಿಸುವ ಈ ಪ್ರವಾದಿಗಳ ಹೃದಯದಲ್ಲಿ ಎಂದಿನವರೆಗೆ ಇರುವದು? ಕನಸುಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು