Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:14 - ಕನ್ನಡ ಸತ್ಯವೇದವು J.V. (BSI)

14 ಬಿಡು, ನಾನು ಅವರನ್ನು ನಾಶಮಾಡಿ ಅವರ ಹೆಸರನ್ನು ಭೂವಿುಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾಬಲಿಷ್ಠ ಜನಾಂಗವು ನಿನ್ನಿಂದುಂಟಾಗುವಂತೆ ಮಾಡುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಭೂಮಿಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾ ಬಲಿಷ್ಠ ಜನಾಂಗವು ನಿನ್ನಿಂದುಂಟಾಗುವಂತೆ ಮಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇವರು ನನ್ನ ಆಜ್ಞೆಗೆ ಬಗ್ಗದವರು. ಬಿಡು, ನಾನು ಅವರನ್ನು ನಾಶಮಾಡಿ ಅವರ ಹೆಸರನ್ನು ಭೂಮಿಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾಬಲಿಷ್ಠ ಜನಾಂಗವೊಂದು ನಿನ್ನಿಂದುಂಟಾಗುವಂತೆ ಮಾಡುವೆನು,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇವರನ್ನು ನಾನು ಸಂಪೂರ್ಣವಾಗಿ ನಾಶಮಾಡುತ್ತೇನೆ. ಅವರ ಹೆಸರುಗಳನ್ನು ಯಾರೂ ನೆನಪಿನಲ್ಲಿಟ್ಟುಕೊಳ್ಳದಂತೆ ಮಾಡುತ್ತೇನೆ. ಆಮೇಲೆ ನಾನು ನಿನ್ನಿಂದ ಬಲಿಷ್ಠವಾದ ಮಹಾಜನಾಂಗವನ್ನು ನಿರ್ಮಿಸುತ್ತೇನೆ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನನ್ನನ್ನು ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು, ನಿಮ್ಮನ್ನು ಅವರಿಗಿಂತ ಬಲಿಷ್ಠವಾದ ಜನಾಂಗವಾಗಿ ಮಾಡುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:14
19 ತಿಳಿವುಗಳ ಹೋಲಿಕೆ  

ಯೆಹೋವನು ಅಂಥವನನ್ನು ಎಂದಿಗೂ ಕ್ಷವಿುಸದೆ ಬಹಳ ಸಿಟ್ಟುಮಾಡಿಕೊಂಡು ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂವಿುಯ ಮೇಲೆ ಇಲ್ಲದಂತೆ ಮಾಡುವನು.


ನೀನು ಜನಾಂಗಗಳನ್ನು ಭಂಗಿಸಿ ದುಷ್ಟರನ್ನು ನಾಶಮಾಡಿದ್ದೀ; ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದೀ;


ಜಯಶಾಲಿಗೆ ಹೀಗೆ ಶುಭ್ರವಸ್ತ್ರಗಳನ್ನು ಹೊದಿಸುವರು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಬಿಡದೆ ಅವನು ನನ್ನವನೆಂದು ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಒಪ್ಪುವೆನು.


ಚಂಡಿಗಳೇ, ಮನಶ್ಶುದ್ಧಿಯೂ ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.


ಅವನ ಸಂತತಿಯು ನಿರ್ಮೂಲವಾಗಲಿ. ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ.


ಯೆಹೋವನು ನನಗೆ ಹೀಗೆ ಹೇಳಿದನು - ಮೋಶೆಯೂ ಸಮುವೇಲನೂ ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗದು; ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿಹೋಗಲಿ! ಅವರು - ನಾವು ಎಲ್ಲಿಗೆ ಹೋಗೋಣ ಎಂದು ಕೇಳಲು


ಮತ್ತು ಯೆಹೋವನು ನನಗೆ - ಈ ಜನರ ಹಿತವನ್ನು ಬಯಸಿ ಇವರಿಗೋಸ್ಕರ ಪ್ರಾರ್ಥನೆಮಾಡಬೇಡ.


ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ; ದುಷ್ಟರ ನಾಮವು ನಿರ್ನಾಮ.


ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು;


ಹೀಗಿರುವಲ್ಲಿ ನಾವು ತಿರಿಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿ ಬಿಡುವಿಯಲ್ಲವೋ?


ಆದದರಿಂದ ಆತನು ಅವರನ್ನು ಸಂಹರಿಸುವೆನೆನ್ನಲು ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.


ನೀನಂತು ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಬೇಡ, ನನಗೆ ವಿಜ್ಞಾಪಿಸಲೂಬೇಡ, ನಾನು ಕೇಳಲೊಲ್ಲೆ.


ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳ ಪ್ರಕಾರವೂ ಅಸಂಖ್ಯಾತರಾಗುತ್ತಿದ್ದರು; ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು