Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:19 - ಕನ್ನಡ ಸತ್ಯವೇದವು J.V. (BSI)

19 ಯೆಹೋವನು ನಿಮ್ಮ ಮೇಲೆ ಬಹುಕೋಪವನ್ನು ಮಾಡಿ ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದದರಿಂದ ನಾನು ಹೆದರಿಕೊಂಡೆನು. ಆದರೆ ಆ ಕಾಲದಲ್ಲಿಯೂ ಆತನು ನನ್ನ ಮನವಿಯನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನು ನಿಮ್ಮ ಮೇಲೆ ಬಹುಕೋಪಗೊಂಡು ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದ್ದರಿಂದ ನಾನು ಹೆದರಿಕೊಂಡೆನು. ಆದರೆ ಆ ಸಮಯದಲ್ಲಿಯೂ ಆತನು ನನ್ನ ಮನವಿಯನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸರ್ವೇಶ್ವರ ನಿಮ್ಮ ಮೇಲೆ ಬಹು ಕೋಪಗೊಂಡು ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದ್ದರಿಂದ ನಾನು ಹೆದರಿದೆ. ಆದರೆ ಆ ಕಾಲದಲ್ಲೂ ಅವರು ನನ್ನ ಮನವಿಯನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನ ಭಯಂಕರ ಕೋಪಕ್ಕೆ ನಾನು ಹೆದರಿದ್ದೆನು. ನಿಮ್ಮನ್ನು ನಾಶಮಾಡುವಷ್ಟರ ತನಕ ಆತನು ಕೋಪಗೊಂಡಿದ್ದನು. ಆದರೆ ಆತನು ನನ್ನ ಬಿನ್ನಹಗಳನ್ನು ಲಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಏಕೆಂದರೆ ಯೆಹೋವ ದೇವರು ನಿಮ್ಮನ್ನು ನಾಶಮಾಡುವಂತೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು. ಆದರೆ ಆ ಸಾರಿ ಕೂಡ ಯೆಹೋವ ದೇವರು ನನ್ನ ಬೇಡಿಕೆಯನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:19
19 ತಿಳಿವುಗಳ ಹೋಲಿಕೆ  

ನಾನು ಮುಂಚಿನಂತೆ ಹಗಲಿರುಳು ನಾಲ್ವತ್ತು ದಿನವು ಬೆಟ್ಟದ ಮೇಲೆ ಇರಲಾಗಿ ಯೆಹೋವನು ಆ ಕಾಲದಲ್ಲಿಯೂ ನನ್ನ ಪ್ರಾರ್ಥನೆಯನ್ನು ಕೇಳಿ ನಿಮ್ಮನ್ನು ನಾಶ ಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟನು.


ಆತನ ಯಾಜಕರಲ್ಲಿ ಮೋಶೆ ಆರೋನರೂ ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿಕೊಂಡಾಗೆಲ್ಲಾ ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.


ಯೆಹೋವನು ಮೋಶೆಗೆ - ನಿನಗೆ ನನ್ನ ಅನುಗ್ರಹ ದೊರಕಿದ್ದರಿಂದಲೂ ನಾನು ನಿನ್ನ ಹೆಸರನ್ನು ಗೊತ್ತುಮಾಡಿದ್ದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು ಎಂದು ಹೇಳಿದನು.


ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬೇರೆ ಮಾಡಿಕೊಂಡನು.


ಆದದರಿಂದ ಆತನು ಅವರನ್ನು ಸಂಹರಿಸುವೆನೆನ್ನಲು ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.


ದೃಷ್ಟಾಂತ - ಹೋರೇಬಿನಲ್ಲಿ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದಿರಿ. ಆಗ ಆತನು ಬಲು ಸಿಟ್ಟುಗೊಂಡು ನಿಮ್ಮನ್ನು ಧ್ವಂಸಮಾಡಬೇಕೆಂದಿದ್ದನು.


ಇದಲ್ಲದೆ ಅಲ್ಲಿ ತೋರಿದ್ದು ಅಷ್ಟು ಭಯಂಕರವಾಗಿದ್ದದರಿಂದ ಮೋಶೆಯು - ನನಗೆ ಬಹು ಭಯವಾಗುತ್ತದೆ, ನಡುಗುತ್ತೇನೆ ಎಂದು ಹೇಳಿದನು.


ಯೆಹೋವನು ಹೇಳಿದ್ದೇನಂದರೆ - ನಾನು ಒಂದು ನಿಬಂಧನೆಯನ್ನು ಸ್ಥಾಪಿಸುತ್ತೇನೆ, ಕೇಳು; ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡಿಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವದು ಭಯಂಕರವಾದದ್ದು.


ಅದಲ್ಲದೆ ಯೆಹೋವನು ಆರೋನನ ಮೇಲೆ ಬಹಳ ಸಿಟ್ಟುಗೊಂಡು ಅವನನ್ನೂ ನಾಶಮಾಡಬೇಕೆಂದಿದ್ದದರಿಂದ ನಾನು ಅವನಿಗೋಸ್ಕರವಾಗಿಯೂ ಆ ಕಾಲದಲ್ಲಿ ಪ್ರಾರ್ಥಿಸಿದೆನು.


ಆತನು ನಿಮ್ಮ ಮೇಲೆ ಸಿಟ್ಟುಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಬಿಟ್ಟಾನು; ಆಗ ಭೂವಿುಯಲ್ಲಿ ಬೆಳೆಯಾಗದೆ ಯೆಹೋವನು ನಿಮಗೆ ಕೊಡುವ ಆ ಉತ್ತಮದೇಶದಲ್ಲಿ ನೀವು ಉಳಿಯದೆ ಬೇಗ ನಾಶವಾಗಿ ಹೋಗುವಿರಿ.


ದೇವರು ಇದನ್ನು ತಿಳಿದು ರೌದ್ರನಾಗಿ ಇಸ್ರಾಯೇಲ್ಯರನ್ನು ಅಸಹ್ಯದಿಂದ ನಿರಾಕರಿಸಿಬಿಟ್ಟನು.


ಆಗ ಜನರು ಮೋಶೆಯ ಬಳಿಗೆ ಬಂದು ಮೊರೆಯಿಟ್ಟರು. ಮೋಶೆ ಅವರಿಗೋಸ್ಕರ ಯೆಹೋವನಿಗೆ ಪ್ರಾರ್ಥಿಸಲಾಗಿ ಆ ಬೆಂಕಿ ಆರಿಹೋಯಿತು.


ಹೋರೇಬಿನಲ್ಲಿ ಎರಕದ ಬಸವನನ್ನು ಮಾಡಿ ಅದಕ್ಕೆ ಅಡ್ಡಬಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು