Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:26 - ಕನ್ನಡ ಸತ್ಯವೇದವು J.V. (BSI)

26 ನಾನು ಆತನನ್ನು ಬೇಡಿಕೊಳ್ಳುತ್ತಾ - ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತ್ಯರಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಾನು ಆತನನ್ನು ಬೇಡಿಕೊಳ್ಳುತ್ತಾ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತ್ಯರಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಾನು ಅವರನ್ನು ಬೇಡಿಕೊಳ್ಳುತ್ತಾ, ‘ಸರ್ವೇಶ್ವರಾ, ದೇವರೇ, ನೀವು ನಿಮ್ಮ ಮಹಿಮೆಯಿಂದ ರಕ್ಷಿಸಿ, ನಿಮ್ಮ ಭುಜಬಲ ಪ್ರಯೋಗಿಸಿ ಈಜಿಪ್ಟಿನಿಂದ ಬಿಡುಗಡೆಮಾಡಿದ ನಿಮ್ಮ ಸ್ವಕೀಯ ಜನರನ್ನು ನಾಶಮಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ‘ನನ್ನ ಒಡೆಯನೇ, ಯೆಹೋವನೇ, ನಿನ್ನ ಜನರನ್ನು ನೀನು ನಾಶಮಾಡಬೇಡ. ಅವರು ನಿನ್ನ ಜನಾಂಗ. ನಿನ್ನ ಪರಾಕ್ರಮದಿಂದ ನೀನು ಈಜಿಪ್ಟಿನಿಂದ ಅವರನ್ನು ಬಿಡಿಸಿ ಹೊರತಂದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಾನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ, “ಸಾರ್ವಭೌಮ ಯೆಹೋವ ದೇವರೇ, ನೀವು ನಿಮ್ಮ ಮಹಿಮೆಯಿಂದ ವಿಮೋಚಿಸಿ, ಬಲವಾದ ಕೈಯಿಂದ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ ನಿಮ್ಮ ಜನರನ್ನು ನಾಶಮಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:26
36 ತಿಳಿವುಗಳ ಹೋಲಿಕೆ  

ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ, ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು.


ಯೆಹೋವನ ವಿಮುಕ್ತರು ಅಂದರೆ ಆತನು ಶತ್ರುಗಳಿಂದ ಬಿಡಿಸಿ


ನೀನು ಬಿಡುಗಡೆ ಮಾಡಿದ ಪ್ರಜೆಯನ್ನೋ ಪ್ರೀತಿಯಿಂದ ನಡಿಸಿಕೊಂಡು ನಿನ್ನ ಪರಿಶುದ್ಧ ನಿವಾಸಸ್ಥಾನದ ತನಕ ನಿನ್ನ ಶಕ್ತಿಯಿಂದ ಬರಮಾಡಿದಿ.


ಹೋತಗಳ ಮತ್ತು ಹೋರಿಕರಗಳ ರಕ್ತವನ್ನು ತೆಗೆದುಕೊಳ್ಳದೆ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ದೇವರ ಸನ್ನಿಧಾನಕ್ಕೆ ಪ್ರವೇಶಿಸಿದನು.


ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು; ಮೋಶೆಯನ್ನೂ ಆರೋನನನ್ನೂ ವಿುರ್ಯಾಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು.


ನಿನ್ನ ದೊರೆತನಕ್ಕೆ ಎಂದಿಗೂ ಒಳಪಡದೆ ನಿನ್ನ ನಾಮವನ್ನು ಧರಿಸದೆ ಇರುವ ಜನರ ಹಾಗಿದ್ದೇವೆ.


ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ; ಭೂವಿುಯ ಅಧೋಭಾಗವೇ, ಆರ್ಭಟಿಸು; ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಕೋಲಾಹಲಮಾಡಿರಿ; ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.


ಆದದರಿಂದ ಆತನು ಅವರನ್ನು ಸಂಹರಿಸುವೆನೆನ್ನಲು ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.


ಆತನ ಯಾಜಕರಲ್ಲಿ ಮೋಶೆ ಆರೋನರೂ ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿಕೊಂಡಾಗೆಲ್ಲಾ ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.


ಯಾಕೋಬ ಯೋಸೇಫರ ವಂಶೀಯವಾದ ನಿನ್ನ ಪ್ರಜೆಯನ್ನು ಭುಜಬಲದಿಂದ ಬಿಡುಗಡೆ ಮಾಡಿದಿ. ಸೆಲಾ.


ಅವರು ನಿನ್ನ ಸೇವಕರೂ ನೀನು ನಿನ್ನ ಮಹಾಶಕ್ತಿಭುಜಪರಾಕ್ರಮಗಳಿಂದ ವಿಮೋಚಿಸಿದ ನಿನ್ನ ಪ್ರಜೆಗಳೂ ಆಗಿರುತ್ತಾರಲ್ಲಾ.


ನಿನ್ನ ಸ್ವಕೀಯ ಜನರಾಗಿದ್ದಾರೆಂಬದನ್ನು ನೆನಸಿ ಅವರು ನಿನಗೆ ವಿರುದ್ಧವಾಗಿ ಮಾಡಿದ ಎಲ್ಲಾ ಅಪರಾಧ ದ್ರೋಹಗಳನ್ನು ಕ್ಷವಿುಸಿ ಅವರನ್ನು ಸೆರೆಯೊಯ್ದವರ ಮನಸ್ಸಿನಲ್ಲಿ ಅವರ ಮೇಲೆ ದಯೆ ಹುಟ್ಟಿಸು.


ನಿನ್ನ ಇಸ್ರಾಯೇಲ್ ಪ್ರಜೆಗೆ ಸಮಾನವಾದ ಜನಾಂಗವು ಲೋಕದಲ್ಲಿ ಯಾವದಿರುತ್ತದೆ? ನೀನೇ ಹೋಗಿ ಅದನ್ನು ವಿಮೋಚಿಸಿ ಸ್ವಪ್ರಜೆಯನ್ನಾಗಿ ಮಾಡಿಕೊಂಡು ನಿನ್ನ ಹೆಸರನ್ನು ಪ್ರಸಿದ್ಧಪಡಿಸಿದಿ. ಐಗುಪ್ತ್ಯರು ಮೊದಲಾದ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ ರಕ್ಷಿಸಿ ಅದರ ಎದುರಿನಲ್ಲೇ ನಿನ್ನ ದೇಶಕ್ಕೋಸ್ಕರ ಭಯಂಕರವಾದ ಮಹತ್ಕಾರ್ಯಗಳನ್ನು ನಡಿಸಿದಿ.


ಇಸ್ರಾಯೇಲ್ಯರು ಮಾತ್ರ ಯೆಹೋವನ ಸ್ವಂತ ಜನರಾದದ್ದೂ; ಯಾಕೋಬ್ ವಂಶಸ್ಥರು ಆತನಿಗೆ ಸ್ವಕೀಯ ಪ್ರಜೆಯಾದದ್ದೂ;


ಯೆಹೋವನೇ, ನೀನು ಬಿಡುಗಡೆಮಾಡಿದ ನಿನ್ನ ಜನರನ್ನು ಕ್ಷವಿುಸಬೇಕು; ಅನ್ಯಾಯವಾದ ನರಹತ್ಯದೋಷಫಲವು ನಿನ್ನ ಜನರಾದ ಇಸ್ರಾಯೇಲ್ಯರಿಗೆ ತಗಲದಿರಲಿ ಎಂದು ಹೇಳಬೇಕು.


ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನೆಂಬದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ.


ಆ ಪ್ರವಾದಿಗೆ ಅಥವಾ ಆ ಕನಸುಕಂಡವನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಇವರು ಮಹಾಶಕ್ತಿಯಿಂದಲೂ ಭುಜಬಲದಿಂದಲೂ ನೀನು ಬಿಡಿಸಿದ ನಿನ್ನ ಸ್ವಕೀಯ ಜನರಲ್ಲವೇ ಎಂದು ಬಿನ್ನೈಸಿದೆನು.


ಯೆಹೋವನು ನಿಮ್ಮನ್ನು ಪ್ರೀತಿಸಿ ತಾನು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿ ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು.


ಕರ್ತನೇ, ನಿನ್ನ ಅನುಗ್ರಹವು ನನಗೆ ದೊರಕಿದ್ದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷವಿುಸಿ ನಿನ್ನ ಜನರಾಗುವಂತೆ ನಮ್ಮನ್ನು ಸ್ವೀಕರಿಸಬೇಕೆಂದು ಪ್ರಾರ್ಥಿಸಿದನು.


ನನಗೆ ನಿನ್ನ ದಯೆ ದೊರಕಿದ್ದಾದರೆ ನಾನು ನಿನ್ನನ್ನು ಬಲ್ಲವನಾಗಿರುವಂತೆ ನಿನ್ನ ಮಾರ್ಗವನ್ನು ನನಗೆ ತೋರಿಸು; ಆಗ ನಿನ್ನ ದಯೆ ನನಗೆ ದೊರೆಯಿತೆಂದು ನನಗೆ ತಿಳಿದಿರುವದು; ಈ ಜನವು ನಿನ್ನ ಪ್ರಜೆಯೆಂದು ಜ್ಞಾಪಕಮಾಡಿಕೋ ಎಂದು ಅರಿಕೆಮಾಡಿದನು.


ಇವರ ಮೊಂಡತನ, ದುಷ್ಟತ್ವ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿನ್ನ ಸೇವಕರಾದ ಅಬ್ರಾಹಾಮ್ ಇಸಾಕ್ ಯಾಕೋಬರನ್ನು ನೆನಪಿಗೆ ತಂದುಕೋ.


ಆಗ ಸಮುವೇಲನು ಹಾಲುಕುಡಿಯುವ ಕುರಿಮರಿಯನ್ನು ತಂದು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿ ಇಸ್ರಾಯೇಲ್ಯರಿಗೋಸ್ಕರ ಮೊರೆಯಿಡಲು ಆತನು ಸದುತ್ತರವನ್ನು ದಯಪಾಲಿಸಿದನು. ಹೇಗಂದರೆ -


ಕರ್ತನೇ, ಯೆಹೋವನೇ, ನೀನು ನಮ್ಮ ಪಿತೃಗಳನ್ನು ಐಗುಪ್ತದೇಶದಿಂದ ಬಿಡಿಸುವಾಗ ಅವರಿಗೆ - ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ ಸ್ವಕೀಯ ಜನರನ್ನಾಗಿ ಮಾಡಿಕೊಂಡಿದ್ದೇನೆಂದು ಮೋಶೆಯ ಮುಖಾಂತರವಾಗಿ ಹೇಳಿದಿಯಲ್ಲವೇ ಎಂದು ದೇವರನ್ನು ಪ್ರಾರ್ಥಿಸಿದನು.


ದೇವರು ತಮ್ಮ ಶರಣನೂ ಪರಾತ್ಪರನು ತಮ್ಮ ವಿಮೋಚಕನೂ ಆಗಿದ್ದಾನೆ ಎಂಬದನ್ನು ನೆನಪಿಗೆ ತಂದುಕೊಳ್ಳುವರು.


ಯೆಹೋವನು ನನಗೆ ಹೀಗೆ ಹೇಳಿದನು - ಮೋಶೆಯೂ ಸಮುವೇಲನೂ ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗದು; ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿಹೋಗಲಿ! ಅವರು - ನಾವು ಎಲ್ಲಿಗೆ ಹೋಗೋಣ ಎಂದು ಕೇಳಲು


ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಿಂದುಕೊಳ್ಳಲೋ? ಯಾಜಕರೂ ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ?


ನೀನು ಐಗುಪ್ತದೇಶದಿಂದ ಕರಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು; ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಲೋಹವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ ಎಂದು ಹೇಳಿದನು.


[ಯೆಹೋವನೇ,] ನಿನ್ನ ಜನರನ್ನು ರಕ್ಷಿಸು; ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು. ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.


ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು