Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:10 - ಕನ್ನಡ ಸತ್ಯವೇದವು J.V. (BSI)

10 ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ ತಮ್ಮ ಮದ್ಯದಲ್ಲಿ ಮುಳುಗಿದ್ದರೂ ತುಂಬಾ ಒಣಗಿದ ಕೂಳೆಯಂತೆ ಬೆಂಕಿಗೆ ತುತ್ತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳುಗಿಹೋಗಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆತನ ವೈರಿಗಳು ಹೆಣೆದುಕೊಂಡಿದ್ದರೂ ಮುಳ್ಳುಗಳಂತೆ ಕುಡಿದು ಮತ್ತರಾಗಿ ಮುಳುಗಿದ್ದರೂ ಮದ್ಯದಲ್ಲೆ ತುತ್ತಾಗುವರು ಬೆಂಕಿಗೆ ತೀರ ಒಣಗಿದ ಕೂಳೆಯಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮಡಕೆಯ ಅಡಿಯಲ್ಲಿ ಉರಿಯುವ ಮುಳ್ಳುಕಡ್ಡಿಗಳಂತೆ ನೀವು ಸಂಪೂರ್ಣವಾಗಿ ನಾಶವಾಗುವಿರಿ. ಜಂಬುಹುಲ್ಲಿನಂತೆ ನೀವು ಸುಟ್ಟು ಭಸ್ಮವಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ಮುಳ್ಳುಗಳಲ್ಲಿ ಸಿಕ್ಕಿಕೊಳ್ಳುವರು, ತಮ್ಮ ದ್ರಾಕ್ಷಾರಸದಿಂದ ಮತ್ತರಾಗುವರು. ಪೂರ್ಣವಾಗಿ ಒಣಗಿದ ಕೂಳೆಯಂತೆ ಅವರು ಸುಟ್ಟು ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:10
19 ತಿಳಿವುಗಳ ಹೋಲಿಕೆ  

ಅವರಲ್ಲಿ ಉತ್ತಮನೂ ಮುಳ್ಳುಕಂಪೆ, ಸತ್ಯವಂತನೂ ಕೂಡ ಮುಳ್ಳುಬೇಲಿಗಿಂತ ಕಡೆ; ನಿನ್ನ ಕಾವಲುಗಾರರು ಮುಂತಿಳಿಸಿದ ದಿನ, ನಿನ್ನ ದಂಡನೆಯ ದಿನ ಬಂದಿದೆ; ಈಗ ನಿನ್ನ ಜನರಿಗೆ ಭ್ರಾಂತಿಹಿಡಿಯುವದು.


ಇಗೋ, ಆ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ ದುಷ್ಕರ್ಮಿಗಳೂ ಹೊಟ್ಟಿನಂತಿರುವರು; ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಲಯವಾಗುವದು; ಬುಡ ರೆಂಬೆಗಳಾವದನ್ನೂ ಉಳಿಸದು.


ನೀನೂ ಓಲಾಡುವಿ, ಬಳಲಿಹೋಗುವಿ; ನೀನೂ ಶತ್ರುವಿನ ನಿವಿುತ್ತ ಆಶ್ರಯವನ್ನು ಹುಡುಕುವಿ.


ದುಷ್ಟತನವು ಬೆಂಕಿಯಂತೆ ಉರಿದು ಮುಳ್ಳುಗಿಳ್ಳನ್ನು ನುಂಗಿ ಅರಣ್ಯದ ಪೊದೆಗಳನ್ನು ಹತ್ತಿಕೊಳ್ಳಲು ಅವು ಹೊಗೆಹೊಗೆಯಾಗಿ ಸುತ್ತಿಸುತ್ತಿಕೊಂಡು ಮೇಲಕ್ಕೆ ಏರುತ್ತವೆ.


ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೂಳೆಯನ್ನು ನುಂಗಿಬಿಡುವ ಹಾಗೂ ಒಣಹುಲ್ಲು ಬೆಂಕಿಯಲ್ಲಿ ಕುಗ್ಗುವಂತೆಯೂ ಅವರ ಬೇರು ಕೊಳೆತು ಅವರ ಹೂವು ದೂಳಾಗಿ ತೂರಿಹೋಗುವದು.


ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನಾಮಧೇಯದ ರಾಜಾಧಿರಾಜನು ಅನ್ನುತ್ತಾನೆ.


ಅವರು ಉರಿಗೊಂಡಿರುವಾಗ ನಾನು ಅವರಿಗೆ ಔತಣವನ್ನು ಸಿದ್ಧಪಡಿಸಿ ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವಂತೆ ತಲೆಗೇರ ಕುಡಿಸುವೆನು. ಇದು ಯೆಹೋವನ ನುಡಿ.


ರೌದ್ರವು ನನ್ನಲಿಲ್ಲ; ಮುಳ್ಳುಗಿಳ್ಳು ನನಗೆ ಎದುರುಬಿದ್ದರೆ ಎಷ್ಟೋ ಒಳ್ಳೇದು! ಅವುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ನಡೆದು ಹೋಗಿ ಒಟ್ಟಿಗೆ ಸುಟ್ಟುಬಿಡುವೆನು.


ಹೊಗೆಯು [ಗಾಳಿಯಿಂದ] ಹೇಗೋ ಹಾಗೆ ಅವರು ಆತನಿಂದ ಹಾರಿಹೋಗುವರು; ಬೆಂಕಿಯ ಮುಂದೆ ಮೇಣವು ಕರಗಿ ಲಯವಾಗಿ ಹೋಗುವಂತೆ ದೇವರ ಎದುರಿನಲ್ಲಿ ದುಷ್ಟರು ನಾಶವಾಗಿ ಹೋಗುವರು.


ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ - ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ; ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೋ? ಧೈರ್ಯದಿಂದಿರಿ, ಶೂರರಾಗಿರಿ ಎಂದು ಹೇಳಿದ್ದನು.


ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದಿದ್ದ ಕಾರಣ ಈಕೆಯು ಮರುದಿವಸದವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.


ಅವರು ಜೇನ್ನೊಣಗಳಂತೆ ನನ್ನನ್ನು ಕವಿದರು; ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು. ಯೆಹೋವನ ಹೆಸರಿನಿಂದ ಅವರನ್ನು ಸಂಹಸರಿಸುವೆನು.


ಆಹಾ, ಇವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವದು, ಜ್ವಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು; ಅದು ಕಾಯಿಸಿಕೊಳ್ಳುವ ಕೆಂಡವಲ್ಲ, ಮುಂದೆ ಕುಳಿತರೆ ಹಾಯಾಗಿರುವ ಉರಿಯಲ್ಲ.


ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷದಿನವಾಗಿರುವದು [ಎಂದು ಹರಟಿಕೊಳ್ಳುವರು].


ಹೀಗಿರಲಾಗಿ ಜನರು ಐಗುಪ್ತ ದೇಶದಲ್ಲೆಲ್ಲಾ ತಿರುಗಿ ಹುಲ್ಲು ಸಿಕ್ಕದೆ ಕೂಳೆ ಕಿತ್ತು ಕೂಡಿಸಿದರು.


ನೀನು ಅತ್ಯಧಿಕ ಮಹತ್ವವುಳ್ಳವನಾಗಿ ನಿನಗೆದುರಾಗಿ ನಿಲ್ಲುವವರನ್ನು ಕೆಡವಿಬಿಡುತ್ತೀ, ನಿನ್ನ ಕೋಪಾಗ್ನಿಯು ಹೊರಟು ಅವರನ್ನು ಒಣಗಿದ ಹುಲ್ಲನ್ನೋ ಎಂಬಂತೆ ಭಸ್ಮ ಮಾಡುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು