Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:12 - ಕನ್ನಡ ಸತ್ಯವೇದವು J.V. (BSI)

12 ಯೆಹೋವನು ಇಂತೆನ್ನುತ್ತಾನೆ - ನಿನ್ನ ಶತ್ರುಗಳು ಎಷ್ಟು ಪ್ರಬಲರಾಗಿದ್ದರೂ ಅವರ ಸಂಖ್ಯೆ ಎಷ್ಟು ಹೆಚ್ಚಿದ್ದರೂ ಅವರು ಕಡಿಯಲ್ಪಡುವರು, ಆ ದುರಾಲೋಚಕನು ಇಲ್ಲವಾಗುವನು. ನಿನ್ನನ್ನು ಬಾಧಿಸಿದ್ದೇನೆ, ಇನ್ನು ಬಾಧಿಸೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ಇಂತೆನ್ನುತ್ತಾನೆ, “ನಿನ್ನ ಶತ್ರುಗಳು ಎಷ್ಟು ಪ್ರಬಲವಾಗಿದ್ದರೂ, ಅವರ ಸಂಖ್ಯೆ ಎಷ್ಟು ಹೆಚ್ಚಿದ್ದರೂ ಅವರು ಕಡಿಯಲ್ಪಡುವರು. ಆ ದುರಾಲೋಚಕನು ಇಲ್ಲವಾಗುವನು. ನಿನ್ನನ್ನು ಬಾಧಿಸಿದ್ದೇನೆ, ಆದರೆ ಇನ್ನು ಬಾಧಿಸೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆ ಸ್ವಾಮಿ ಇಂತೆನ್ನುತ್ತಾನೆ: “ನಿನ್ನ ಶತ್ರುಗಳು ಎಷ್ಟು ಬಲಾಢ್ಯರಾಗಿದ್ದರೂ ಎಷ್ಟು ಅಧಿಕ ಸಂಖ್ಯೆಯಲ್ಲಿದ್ದರೂ ಅವರು ನಾಶಕ್ಕೊಳಗಾಗುವರು; ಆ ದುರಾಲೋಚಕನು ಇಲ್ಲವಾಗುವನು. ನನ್ನ ಜನರೇ, ನಾನು ನಿಮ್ಮನ್ನು ಬಾಧಿಸಿದ್ದುಂಟು, ಆದರೆ ಇನ್ನು ಮುಂದೆ ಬಾಧಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ಯೆಹೂದನಿಗೆ ಇಂತೆಂದೆನು: “ಅಶ್ಶೂರದ ಜನರು ಬಲಶಾಲಿಗಳು. ಅವರಲ್ಲಿ ಅಸಂಖ್ಯಾತ ಸೈನಿಕರಿದ್ದಾರೆ. ಆದರೆ ಅವರೆಲ್ಲಾ ತುಂಡರಿಸಲ್ಪಡುವರು. ಅವರೆಲ್ಲಾ ಹತರಾಗುವರು. ನನ್ನ ಜನರೇ, ನೀವು ಕಷ್ಟ ಅನುಭವಿಸುವಂತೆ ಮಾಡಿದೆನು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರು ಹೀಗೆ ಹೇಳುತ್ತಾರೆ: ಅವರೊಂದಿಗೆ ಒಪ್ಪಂದ ಮಾಡಿಕೊಂಡವರಿದ್ದರೂ, ಅವರು ಬಹುಮಂದಿಯಾಗಿದ್ದರೂ ನಾಶಕ್ಕೆ ಒಳಗಾಗುವರು. ಯೆಹೂದವೇ, ನಾನು ನಿನ್ನನ್ನು ಕಷ್ಟಪಡಿಸಿದಾಗ್ಯೂ, ಇನ್ನು ಮೇಲೆ ಕಷ್ಟಪಡಿಸೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:12
20 ತಿಳಿವುಗಳ ಹೋಲಿಕೆ  

ಅವರ ಬಿನ್ನಹವನ್ನು ಲಾಲಿಸಿ ಅವರಿಗೆ ಹೀಗೆ ಹೇಳಿದನು - ಇಗೋ, ನಾನು ಧಾನ್ಯದ್ರಾಕ್ಷಾರಸತೈಲಗಳನ್ನು ನಿಮಗೆ ಕಳುಹಿಸುತ್ತಿದ್ದೇನೆ; ಅವುಗಳಿಂದ ನಿಮಗೆ ತೃಪ್ತಿಯಾಗುವದು; ನಿಮ್ಮನ್ನು ಅನ್ಯಜನಾಂಗಗಳ ನಿಂದೆಗೆ ಇನ್ನು ಗುರಿಮಾಡೆನು;


ಇನ್ನು ಮೇಲೆ ಅವರಿಗೆ ಹಸಿವೆ ಇಲ್ಲ, ಬಾಯಾರಿಕೆ ಇಲ್ಲ; ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ;


ಆಹಾ, ಶುಭಸಮಾಚಾರವನ್ನು ತಂದು ಸಮಾಧಾನವನ್ನು ಸಾರುವ ದೂತನ ಪಾದಗಳು ಪರ್ವತಗಳ ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟನು ಇನ್ನು ಮುಂದೆ ನಿನ್ನನ್ನು ಹಾದುಹೋಗನು; ತೀರಾ ನಾಶವಾಗಿದ್ದಾನೆ.


ಆಮೇಲೆ ಅವನ ಮಕ್ಕಳು ಯುದ್ಧಸನ್ನಾಹಮಾಡಿ ವ್ಯೂಹವ್ಯೂಹವಾದ ದೊಡ್ಡ ಸೈನ್ಯವನ್ನು ಕೂಡಿಸುವರು; ಆ ಸೈನ್ಯವು ಮುಂದರಿದು ತುಂಬಿ ತುಳುಕಿ ಹಬ್ಬಿಕೊಳ್ಳುವದು; ಅವರು ಪುನಃ ಯುದ್ಧಕ್ಕೆ ಹೊರಟು ದಕ್ಷಿಣರಾಜನ ದುರ್ಗದವರೆಗೆ ನುಗ್ಗುವರು.


ನಿನ್ನ ಕರ್ತನೂ ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೇಹೋವನು ಹೀಗನ್ನುತ್ತಾನೆ - ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ ನನ್ನ ರೋಷವು ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು; ಅದನ್ನು ನೀನು ಇನ್ನು ಕುಡಿಯೆ;


ಆಗ ಯೆಹೋವನ ದೂತನು ಹೊರಟುಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲಾ ಹೆಣಗಳಾಗಿದ್ದರು.


ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು, ಅದು ಮನುಷ್ಯರ ಕತ್ತಿಯಲ್ಲ; ಖಡ್ಗವು ಅವರನ್ನು ನುಂಗುವದು, ಅದು ಮಾನವಖಡ್ಗವಲ್ಲ; ಅವರು ಕತ್ತಿಯ ಕಡೆಯಿಂದ ಓಡುವರು, ಅವರ ಯೌವನಸ್ಥರು ಬಿಟ್ಟಿಹಿಡಿಯಲ್ಪಡುವರು.


ಯೆರೂಸಲೇವಿುನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವದೇ ಇಲ್ಲ; ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.


ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ, ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.


ಅದು ತನ್ನ ಪಾತ್ರವನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ ಯೆಹೂದದಲ್ಲಿಯೂ ನುಗ್ಗಿ ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವದು; ಇಮ್ಮಾನುವೇಲನೇ! ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲದಲ್ಲೆಲ್ಲಾ ಮುತ್ತಿಬಿಡುವವು.


ಆಗ ಕರ್ತನು ಯೂಫ್ರೇಟೀಸ್ ನದಿಯ ಆಚೆಗಿರುವ ಅಶ್ಶೂರದ ರಾಜನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ [ಯೆಹೂದದ] ತಲೆಯನ್ನೂ ಕಾಲಕೂದಲನ್ನೂ ಬೋಳಿಸುವನು; ಅದು ಗಡ್ಡವನ್ನು ಸಹ ತೆಗೆದುಬಿಡುವದು.


ಅವನು ಒಂದು ದಿವಸ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಕತ್ತಿಯಿಂದ ಕೊಂದು ಅರಾರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್‍ಹದ್ದೋನನು ಅರಸನಾದನು.


ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟುಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರಮಂದಿ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡುವಲ್ಲಿ ಪಾಳೆಯತುಂಬಾ ಹೆಣಗಳಿದ್ದವು.


ಆ ರಾತ್ರಿ ನಾನು ಐಗುಪ್ತ ದೇಶದ ನಡುವೆ ಹಾದುಹೋಗಿ ಮನುಷ್ಯರಲ್ಲಾಗಲಿ ಪಶುಗಳಲ್ಲಾಗಲಿ ಚೊಚ್ಚಲಾಗಿರುವದನ್ನೆಲ್ಲಾ ಸಂಹರಿಸುವೆನು; ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ಶಿಕ್ಷೆಮಾಡುವೆನು; ನಾನು ಯೆಹೋವನು.


ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಅವನ ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನುಂಟುಮಾಡುವನು; ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಕೆಳಗೆ ಹತ್ತಿಕೊಳ್ಳುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು