Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:14 - ಕನ್ನಡ ಸತ್ಯವೇದವು J.V. (BSI)

14 [ಅಶ್ಶೂರವೇ,] ನಿನ್ನ ಹೆಸರಿನ ಸಂತಾನ ಬೀಜವು ಇನ್ನು ಬಿತ್ತಲ್ಪಡಬಾರದೆಂದು ಯೆಹೋವನಾದ ನಾನು ಆಜ್ಞಾಪಿಸಿದ್ದೇನೆ; ನಿನ್ನ ದೇವರ ಮಂದಿರದೊಳಗಿಂದ ಕೆತ್ತಿದ ವಿಗ್ರಹವನ್ನೂ ಎರಕದ ಬೊಂಬೆಯನ್ನೂ ಕಡಿದುಬಿಡುವೆನು; ನಿನಗೆ ಗೋರಿಯನ್ನು ಸಿದ್ಧಮಾಡುವೆನು; ನೀನು ತುಚ್ಫ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಶ್ಶೂರವೇ, ನಿನ್ನ ಹೆಸರಿನ ಸಂತಾನ ಬೀಜವು ಇನ್ನು ಬಿತ್ತಲ್ಪಡಬಾರದೆಂದು ಯೆಹೋವನಾದ ನಾನು ಆಜ್ಞಾಪಿಸಿದ್ದೇನೆ; ನಿನ್ನ ದೇವರ ಮಂದಿರದೊಳಗಿಂದ ಕೆತ್ತಿದ ವಿಗ್ರಹವನ್ನೂ, ಎರಕದ ಬೊಂಬೆಯನ್ನೂ ಕಡಿದುಬಿಡುವೆನು; ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು; ನಿನ್ನ ಪಾಪಗಳು ದುರ್ವಾಸನೆ ಬೀರುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಸ್ಸೀರಿಯವೇ, ಸರ್ವೇಶ್ವರನಾದ ನಾನು ನಿನ್ನ ಬಗ್ಗೆ ಹೊರಡಿಸಿದ ಆಜ್ಞೆ ಏನೆಂದರೆ: ಹೆಸರೆತ್ತಲು ನಿನಗೆ ಸಂತಾನವೇ ಇಲ್ಲದಂತಾಗುವುದು. ನಿನ್ನ ದೇವರುಗಳ ಗುಡಿಗಳಲ್ಲಿರುವ ಕೆತ್ತನೆಯ ವಿಗ್ರಹವನ್ನೂ ಎರಕದ ಬೊಂಬೆಯನ್ನೂ ಒಡೆದುಹಾಕುವೆನು. ನಿನಗೆ ಸಮಾಧಿಯೊಂದನ್ನು ಸಿದ್ಧಗೊಳಿಸುವೆನು; ಏಕೆಂದರೆ ನೀನು ಕೆಡುಕ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅಶ್ಶೂರದ ಅರಸನೇ, ನಿನ್ನ ವಿಷಯವಾಗಿ ಯೆಹೋವನು ಕೊಟ್ಟ ಆಜ್ಞೆ ಏನೆಂದರೆ, “ನಿನ್ನ ಹೆಸರನ್ನು ಧರಿಸುವ ಸಂತತಿಯವರು ಯಾರೂ ಇರುವುದಿಲ್ಲ. ನಿನ್ನ ಕೆತ್ತನೆಯ ವಿಗ್ರಹಗಳನ್ನು ನಾನು ನಾಶಮಾಡುವೆನು. ನಿನ್ನ ದೇವರುಗಳ ಆಲಯದಲ್ಲಿರುವ ಲೋಹದ ಬೊಂಬೆಗಳನ್ನು ಕೆಡವಿಬಿಡುವೆನು. ನಿನ್ನ ಅಂತ್ಯವು ಬೇಗನೆ ಬರಲಿರುವುದರಿಂದ ನಿನಗೆ ಸಮಾಧಿಯನ್ನು ತಯಾರುಮಾಡುತ್ತಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿನೆವೆಯೇ, ನಿನ್ನ ವಿಷಯವಾಗಿ ಯೆಹೋವ ದೇವರು ಆಜ್ಞಾಪಿಸುವುದೇನೆಂದರೆ: ಹೆಸರೆತ್ತಲು ನಿನಗೆ ಸಂತಾನವಿಲ್ಲದಂತೆ ಮಾಡುವೆನು. ನಿನ್ನ ದೇವರ ಮಂದಿರದಲ್ಲಿರುವ ಕೆತ್ತಿದ ವಿಗ್ರಹವನ್ನೂ, ಎರಕ ಬೊಂಬೆಯನ್ನೂ ನಾಶಮಾಡುವೆನು. ನೀನು ತುಚ್ಛನಾದದ್ದರಿಂದ ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:14
21 ತಿಳಿವುಗಳ ಹೋಲಿಕೆ  

ಅವನ ಸಂತತಿಯು ನಿರ್ಮೂಲವಾಗಲಿ. ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ.


ನಿನ್ನ ಮೂರ್ತಿಗಳನ್ನೂ ಕಲ್ಲುಕಂಬಗಳನ್ನೂ ನಿನ್ನಲ್ಲಿ ನಿಲ್ಲದಂತೆ ಒಡೆದುಹಾಕುವೆನು, ನಿನ್ನ ಕೈ ರೂಪಿಸಿದ್ದನ್ನು ಇನ್ನು ಪೂಜಿಸದಿರುವಿ.


ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ; ದುಷ್ಟರ ನಾಮವು ನಿರ್ನಾಮ.


ಅವನು ಒಂದು ದಿವಸ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಕತ್ತಿಯಿಂದ ಕೊಂದು ಅರಾರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್‍ಹದ್ದೋನನು ಅರಸನಾದನು.


ಅವನ ಸ್ಥಾನದಲ್ಲಿ ರಾಜ್ಯಪದವಿಗೆ ಹಕ್ಕುದಾರನಲ್ಲದ ಒಬ್ಬ ನೀಚನು ಎದ್ದು ನೆಮ್ಮದಿಯ ಕಾಲದಲ್ಲಿ ಬಂದು ನಯನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.


ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಜದೆ ಹೀಗೆ ಸಾರಿರಿ - ಬಾಬೆಲ್ ಶತ್ರುವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.


ದೂರಸ್ಥರೇ, ನಾನು ನಡಿಸಿದ್ದನ್ನು ಕೇಳಿರಿ; ಸಮೀಪಸ್ಥರೇ, ನನ್ನ ಪರಾಕ್ರಮವನ್ನು ತಿಳಿದುಕೊಳ್ಳಿರಿ.


ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗಮೇಘವಾಹನನಾಗಿ ಐಗುಪ್ತಕ್ಕೆ ಬರುವನು; ಆತನು ಸಮ್ಮುಖನಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತ್ಯರ ಹೃದಯವು ತಮ್ಮೊಳಗೆ ಕರಗಿ ನೀರಾಗುವದು.


ನಾನು ಯಾವಾಗಲೂ ಮರೆಹೊಗುವ ಆಶ್ರಯಗಿರಿಯಾಗಿರು; ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ. ನೀನೇ ನನ್ನ ಬಂಡೆಯೂ ಕೋಟೆಯೂ ಆಗಿದ್ದೀಯಲ್ಲಾ.


ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದನು; ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.


ತನ್ನ ಮಕ್ಕಳು ದೇವದೂಷಕರೆಂದು ಅವನಿಗೆ ತಿಳಿದುಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿವಿುತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.


ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು; ನಿಮ್ಮ ಬೊಂಬೆಗಳ ಮುಂಡಗಳ ಮೇಲೆ ನಿಮ್ಮ ಮುಂಡಗಳನ್ನು ಬೀಸಾಡುವೆನು; ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.


ಆ ರಾತ್ರಿ ನಾನು ಐಗುಪ್ತ ದೇಶದ ನಡುವೆ ಹಾದುಹೋಗಿ ಮನುಷ್ಯರಲ್ಲಾಗಲಿ ಪಶುಗಳಲ್ಲಾಗಲಿ ಚೊಚ್ಚಲಾಗಿರುವದನ್ನೆಲ್ಲಾ ಸಂಹರಿಸುವೆನು; ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ಶಿಕ್ಷೆಮಾಡುವೆನು; ನಾನು ಯೆಹೋವನು.


ಅವನ ಸ್ಮರಣೆಯು ಭೂವಿುಯಲ್ಲಿ ಅಳಿದುಹೋಗುವದು, ಅವನ ಹೆಸರು ಹೊರಗಣ ಪ್ರಾಂತ್ಯಗಳಲ್ಲಿಯೂ ನಿಲ್ಲುವದಿಲ್ಲ.


ನಿನ್ನ ಅಶೇರವೆಂಬ ವಿಗ್ರಹಸ್ತಂಭಗಳನ್ನು ನಿನ್ನ ಮಧ್ಯದೊಳಗಿಂದ ಕಿತ್ತುಬಿಟ್ಟು ನಿನ್ನ ಪಟ್ಟಣಗಳನ್ನು ನಿರ್ಮೂಲಮಾಡುವೆನು.


ನೀನು ಬಹುಜನಾಂಗಗಳನ್ನು ನಿರ್ಮೂಲಮಾಡಿದ್ದು ನಿನ್ನ ಕುಲಕ್ಕೆ ಅವಮಾನವನ್ನೇ ಆಲೋಚಿಸಿಕೊಂಡ ಹಾಗಾಯಿತು, ನಿನಗೇ ಕೆಡುಕುಮಾಡಿಕೊಂಡಿದ್ದೀ.


ತೆಕೇಲ್ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡು ಬಂದಿದ್ದೀ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು