Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 2:1 - ಕನ್ನಡ ಸತ್ಯವೇದವು J.V. (BSI)

1 [ನಿನೆವೆಯೇ,] ಚದರಿಸುವವನು ನಿನಗೆ ಮುಖಾಮುಖಿಯಾಗಿ ಬಂದಿದ್ದಾನೆ; ಪೌಳಿಗೋಡೆಯನ್ನು ಕಾಯಿ, ದಾರಿಯ ಮೇಲೆ ಕಣ್ಣಿಡು, ನಿನ್ನ ಸೊಂಟವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಚೆನ್ನಾಗಿ ದೃಢಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಿನವೆಯೇ, ನಿನ್ನನ್ನು ಚದರಿಸುವವನು ನಿನಗೆ ಮುಖಾಮುಖಿಯಾಗಿ ಬಂದಿದ್ದಾನೆ; ಪೌಳಿಗೋಡೆಯನ್ನು ರಕ್ಷಿಸಲು ಸಿದ್ಧನಾಗು. ದಾರಿಯ ಮೇಲೆ ಕಣ್ಣಿಡು, ನಿನ್ನ ಸೊಂಟವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಚೆನ್ನಾಗಿ ದೃಢಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಿನೆವೆಯೇ, ನಿನಗೆದುರಾಗಿ ನಿಂತಿಹನು, ನಿನ್ನನ್ನು ಚದುರಿಸುವವನು! ಕಾವಲಿಡು ಕೋಟೆಯ ಸುತ್ತಲು ಪಹರೆಯಿಡು ದಾರಿ ಕಾಯಲು; ಅಣಿಯಾಗಲಿ ನಿನ್ನ ಸೈನ್ಯವಿಡೀ, ನಡುಕಟ್ಟಿ ನಿಲ್ಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ವೈರಿಯು ನಿನ್ನ ಮೇಲೆ ಬರುವನು. ಆದ್ದರಿಂದ ನಿನ್ನ ಪಟ್ಟಣದ ಬುರುಜುಗಳನ್ನು ಕಾಯಿ. ಮಾರ್ಗದ ಮೇಲೆ ಕಣ್ಣಿಡು. ಯುದ್ಧಕ್ಕೆ ತಯಾರಾಗು. ರಣರಂಗಕ್ಕೆ ಹೋಗಲು ಸಿದ್ಧನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಿನೆವೆಯೇ, ಮುತ್ತಿಗೆ ಹಾಕುವವನು ನಿನಗೆ ವಿರೋಧವಾಗಿ ಹೊರಟಿದ್ದಾನೆ, ಕೋಟೆಯನ್ನು ಭದ್ರಪಡಿಸು; ದಾರಿಯನ್ನು ಕಾಯಿ; ನಡುವನ್ನು ಬಲಪಡಿಸಿಕೋ; ನಿನ್ನ ಶಕ್ತಿಯನ್ನು ಬಲವಾಗಿ ಗಟ್ಟಿಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 2:1
14 ತಿಳಿವುಗಳ ಹೋಲಿಕೆ  

ನೀನೇ ಹೋಗಿ ಕಾರ್ಯವನ್ನು ನಡಿಸು; ಧೈರ್ಯದಿಂದ ಯುದ್ಧಮಾಡು. [ಹಾಗೆ ಮಾಡದಿದ್ದರೆ] ದೇವರು ಶತ್ರುಗಳಿಂದ ನಿನ್ನನ್ನು ಅಪಜಯಪಡಿಸುವನು. ಜಯಾಪಜಯಗಳನ್ನುಂಟುಮಾಡುವದಕ್ಕೆ ಆತನು ಶಕ್ತನಾಗಿರುತ್ತಾನಲ್ಲಾ ಅಂದನು.


ಆಹಾ, ಲೋಕವನ್ನೆಲ್ಲಾ ಹೊಡೆದ ಚಮಟಿಗೆಯು ಮುರಿದು ತುಂಡುತುಂಡಾಯಿತು! ಬಾಬೆಲ್‍ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ!


ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಯೆಹೋವನು ಮುರಿದುಬಿಟ್ಟನು.


ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು.


ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ಮಾಡಿದ ಹರಕೆಗಳನ್ನು ಪರಾತ್ಪರನಿಗೆ ಸಲ್ಲಿಸಿರಿ.


ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರು ನಿನ್ನ ಬಳಿಗೆ ಬರುವರು.


ಅರೀಯೇಲಿನ ಮೇಲೆ ಹೋರಾಡಿ ಅದಕ್ಕೂ ಅದರ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ ಬಾಧಿಸುವ ಸಕಲ ಜನಾಂಗಗಳ ಗುಂಪು ಕನಸಿನಂತೆ, ರಾತ್ರಿಯ ಸ್ವಪ್ನದ ಹಾಗೆ, ಮಾಯವಾಗುವದು.


ಹಸಿದವನು ಕನಸು ಕಂಡು ಆಹಾ, ಉಣ್ಣುತ್ತೇನೆ ಎಂದು ಕೊಂಡಂತಾಗುವದು; ಎಚ್ಚತ್ತಾಗ ಅವನ ಹೊಟ್ಟೆ ಬರಿದೇ. ಬಾಯಾರಿದವನು ಸ್ವಪ್ನದಲ್ಲಿ ಇಗೋ ಕುಡಿಯುತ್ತೇನೆ ಎಂದುಕೊಂಡ ಹಾಗೂ ಆಗುವದು; ನಿದ್ರೆ ತಿಳಿದಾಗ ಬಳಲಿ ನೀರನ್ನು ಬಯಸುವನು. ಚೀಯೋನ್ ಪರ್ವತಕ್ಕೆ ವಿರುದ್ಧವಾಗಿ ಹೋರಾಡುವ ಸಕಲಜನಾಂಗಗಳ ಗುಂಪಿಗೆ ಈ ಗತಿಯಾಗುವದು.


ಪರ್ವತಗಳ ಮೇಲೆ ತ್ವರೆಪಡುತ್ತಾ ಶುಭಸಮಾಚಾರವನ್ನು ತಂದು ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ! ಒಳ್ಳೆಯ ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು ರಕ್ಷಣೆಯನ್ನು ಪ್ರಕಟಿಸುತ್ತಾ - ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು