Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 2:2 - ಕನ್ನಡ ಸತ್ಯವೇದವು J.V. (BSI)

2 (ಆಹಾ, ಯೆಹೋವನು ಯಾಕೋಬಿನ ಅತಿಶಯವನ್ನು, ಇಸ್ರಾಯೇಲಿನ ಅತಿಶಯವನ್ನು ಸಹ ಪುನರುಜ್ಜೀವನ ಮಾಡುವನು; ಸೂರೆಗಾರರು ಅವುಗಳನ್ನು ಸೂರೆಗೈದು ಅವುಗಳ ಶಾಖೆಗಳನ್ನು ಹಾಳುಮಾಡಿದ್ದರಷ್ಟೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಹಾ, ಯೆಹೋವನು ಯಾಕೋಬಿನ ಅತಿಶಯವನ್ನು, ಇಸ್ರಾಯೇಲಿನ ಅತಿಶಯದಂತೆ ಪುನರುಜ್ಜೀವನಗೋಳಿಸುವನು; ಕೊಳ್ಳೆಹೊಡೆಯುವವರು ಆ ಅತಿಶಯವನ್ನು ಸೂರೆಗೈದು ಅವುಗಳ ದ್ರಾಕ್ಷಾಲತೆಗಳನ್ನು ಹಾಳುಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 (ಸರ್ವೇಶ್ವರ, ಕೊಳ್ಳೆಗಾರರು ಸುಲಿಗೆಮಾಡಿದ್ದನ್ನೂ ಮುರಿದುಹಾಕಿದ ದ್ರಾಕ್ಷಿಯ ತೋಟಗಳನ್ನೂ ಸರಿಪಡಿಸಲಿದ್ದಾರೆ. ಯಕೋಬಿನ ಮಹತ್ವವನ್ನು ಹಾಗೂ ಇಸ್ರಯೇಲಿನ ಮಹಿಮೆಯನ್ನು ಈಗ ಮತ್ತೆ ಸ್ಥಾಪಿಸಲಿದ್ದಾರೆ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಹೌದು, ಯೆಹೋವನು ಯಾಕೋಬನ ವೈಭವವನ್ನು ಇಸ್ರೇಲಿನ ವೈಭವವಾಗಿ ಸ್ಥಾಪಿಸುವನು. ವೈರಿಯು ಅವರನ್ನು ನಾಶಮಾಡಿ ಅವರ ದ್ರಾಕ್ಷಿಬಳ್ಳಿಯನ್ನು ಹಾಳುಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರು ಯಾಕೋಬಿನ ಹೆಚ್ಚಳವನ್ನು ಇಸ್ರಾಯೇಲಿನ ಹೆಚ್ಚಳದ ಹಾಗೆಯೇ ಪುನಃ ಸ್ಥಾಪಿಸುತ್ತಾರೆ. ನಾಶಕರು ಅವುಗಳನ್ನು ನಾಶಮಾಡಿದರೂ ಅವರ ದ್ರಾಕ್ಷಿಬಳ್ಳಿಗಳನ್ನು ಕೆಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 2:2
14 ತಿಳಿವುಗಳ ಹೋಲಿಕೆ  

ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೀಡಾಗವು; ಆಗ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.


ತಮ್ಮ ಬೊಂಬೆಗಳಿಂದಾಗಲಿ ಅಸಹ್ಯ ವಸ್ತುಗಳಿಂದಾಗಲಿ ಯಾವ ದುರಾಚಾರದಿಂದಲೇ ಆಗಲಿ ತಮ್ಮನ್ನು ಇನ್ನು ಮುಂದೆ ಹೊಲೆಗೆಯ್ದುಕೊಳ್ಳರು; ಅವರು ಪಾಪಮಾಡಿಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ನಿವಾಸಿಗಳು ಬಿಟ್ಟು ಬಿಟ್ಟ, ದ್ವೇಷಕ್ಕೀಡಾದ, ಯಾರೂ ಹಾದು ಹೋಗದ ನಿನಗೆ ನಾನು ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರಗಳವರಿಗೆ ಉಲ್ಲಾಸಕರವಾಗುವಂತೆ ಮಾಡುವೆನು.


ಇಸ್ರಾಯೇಲು ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣು ಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂವಿುಯು ಎಷ್ಟು ಒಳ್ಳೆಯದೋ ಅಷ್ಟು ಒಳ್ಳೆಯ ವಿಗ್ರಹಸ್ತಂಭಗಳನ್ನು ಮಾಡಿಕೊಂಡಿದೆ.


ದ್ರಾಕ್ಷೆಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಲನ್ನೂ ಉಳಿಸುವದಿಲ್ಲ; ಕಳ್ಳರು ರಾತ್ರಿವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಹಾಳುಮಾಡುವರು.


ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ.


ಆತನು ಯಾಕೋಬವಂಶದವರಾದ ನಮ್ಮನ್ನು ಪ್ರೀತಿಸಿ ನಾವು ಅಭಿಮಾನಿಸುವ ಸ್ವಾಸ್ತ್ಯವನ್ನು ನಿರ್ಣಯಿಸಿಕೊಟ್ಟಿದ್ದಾನೆ. ಸೆಲಾ.


ಮೋವಾಬು ಚಿಕ್ಕತನದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ; ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.


ಇದನ್ನೂ ಅವರಿಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ಇಸ್ರಾಯೇಲ್ಯರು ವಶವಾಗಿರುವ ಜನಾಂಗಗಳೊಳಗಿಂದ ನಾನು ಅವರನ್ನು ಉದ್ಧರಿಸಿ ಎಲ್ಲಾ ಕಡೆಯಿಂದಲೂ ಒಟ್ಟುಗೂಡಿಸಿ ಸ್ವದೇಶಕ್ಕೆ ಕರತಂದು


ನಗರಿಯು ಬರಿದಾಗಿದೆ, ಬಟ್ಟಬರಿದಾಗಿ ಬೀಳುಬಿದ್ದಿದೆ; ಎದೆಯು ನೀರಾಗಿ ಹೋಗಿದೆ, ಮೊಣಕಾಲುಗಳು ಅದರುತ್ತವೆ, ಎಲ್ಲರ ಸೊಂಟಗಳಿಗೂ ವೇದನೆಯಾಗಿದೆ, ಎಲ್ಲರ ಮುಖಗಳೂ ಬಾಡಿವೆ.


ಮುತ್ತಿಗೆಯ ಕಾಲಕ್ಕೆ ನೀರನ್ನು ಸೇದಿಟ್ಟುಕೋ, ನಿನ್ನ ಬುರುಜುಗಳನ್ನು ಬಲಪಡಿಸಿಕೋ; ಮಣ್ಣಿಗೆ ಇಳಿ, ಜೇಡಿಯನ್ನು ತುಳಿ, ಇಟ್ಟಿಗೆಯ ಅಚ್ಚನ್ನು ಹಿಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು