Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 1:2 - ಕನ್ನಡ ಸತ್ಯವೇದವು J.V. (BSI)

2 ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯನೂ ಬೇರೆ ಕೆಲವು ಜನರೂ ಯೆಹೂದದಿಂದ ನನ್ನ ಬಳಿಗೆ ಬಂದರು. ಸೆರೆಯವರೊಳಗೆ ತಪ್ಪಿಸಿಕೊಂಡ ಯೆಹೂದ್ಯರ ಮತ್ತು ಯೆರೂಸಲೇವಿುನ ಸಮಾಚಾರವನ್ನು ನಾನು ಅವರ ಹತ್ತಿರ ವಿಚಾರಿಸುವಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಸಹೋದರಲ್ಲಿ ಒಬ್ಬನಾದ ಹನಾನೀಯನೂ, ಬೇರೆ ಕೆಲವರು ಯೆಹೂದ ಜನರೊಂದಿಗೆ, ನನ್ನ ಬಳಿಗೆ ಬಂದರು. ಸೆರೆಯಾಳುಗಳಾಗಿ ಹೋಗಿದ್ದವರಲ್ಲಿ ಕೆಲವು ಯೆಹೂದ್ಯರು ತಪ್ಪಿಸಿಕೊಂಡು ನನ್ನ ಬಳಿಗೆ ಬಂದಾಗ ಯೆರೂಸಲೇಮಿನ ಸಮಾಚಾರವನ್ನು ನಾನು ಅವರ ಹತ್ತಿರ ವಿಚಾರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯನು ಹಾಗೂ ಬೇರೆ ಕೆಲವು ಜನರು ಜುದೇಯದಿಂದ ನನ್ನ ಬಳಿಗೆ ಬಂದರು. ಸೆರೆಹೋದವರಿಂದ ತಪ್ಪಿಸಿಕೊಂಡ ಯೆಹೂದ್ಯರ ಮತ್ತು ಜೆರುಸಲೇಮಿನ ಸಮಾಚಾರವನ್ನು ನಾನು ಅವರಲ್ಲಿ ವಿಚಾರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ಶೂಷನ್‌ನಲ್ಲಿದ್ದಾಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀ ಮತ್ತು ಇನ್ನಿತರರು ಯೆಹೂದ ಪ್ರಾಂತ್ಯದಿಂದ ಬಂದಿದ್ದರು. ನಾನು ಅಲ್ಲಿರುವ ಯೆಹೂದ್ಯರ ಯೋಗಕ್ಷೇಮದ ಬಗ್ಗೆ ವಿಚಾರಿಸಿದೆನು. ಈ ಯೆಹೂದ್ಯರು ಸೆರೆವಾಸದಿಂದ ತಪ್ಪಿಸಿಕೊಂಡು ಇನ್ನೂ ಯೆಹೂದದಲ್ಲಿ ವಾಸವಾಗಿದ್ದರು. ಜೆರುಸಲೇಮ್ ನಗರದ ವಿಷಯವಾಗಿಯೂ ವಿಚಾರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯನು ಹಾಗೂ ಬೇರೆ ಕೆಲವು ಜನರು ಯೆಹೂದದಿಂದ ನನ್ನ ಬಳಿಗೆ ಬಂದರು. ಸೆರೆ ಹೋದವರಿಂದ ಉಳಿದಿರುವ ಯೆಹೂದ್ಯರ ಮತ್ತು ಯೆರೂಸಲೇಮಿನ ಸಮಾಚಾರವನ್ನು ನಾನು ಅವರಲ್ಲಿ ವಿಚಾರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 1:2
12 ತಿಳಿವುಗಳ ಹೋಲಿಕೆ  

ಆಮೇಲೆ ನನ್ನ ತಮ್ಮನಾದ ಹನಾನಿಗೂ ಬಲು ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ ದುರ್ಗಾಧಿಕಾರಿಯೂ ಆದ ಹನನ್ಯನಿಗೂ ಯೆರೂಸಲೇವಿುನ ಮೇಲ್ವಿಚಾರಣೆಯನ್ನು ಒಪ್ಪಿಸಿ


ಆಗ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದ ತಮ್ಮ ಹೃದಯವನ್ನೂ ತಮ್ಮ ಬೊಂಬೆಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು ತಾವು ಬಹಳ ಅಸಹ್ಯಕಾರ್ಯಗಳನ್ನು ನಡಿಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು.


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು ತಮ್ಮ ಅಧರ್ಮದಲ್ಲಿಯೇ ಇದ್ದು ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಮೊರೆಯಿಡುತ್ತಿರುವರು.


ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದಜನಶೇಷದವರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಉಳಿದು ಅಲ್ಲಿಂದ ತಪ್ಪಿಸಿಕೊಂಡು ಯೆಹೂದಕ್ಕೆ ಹಿಂದಿರುಗುವದಿಲ್ಲ; ಓಡಿಬರುವ ಕೊಂಚ ಜನವೇ ಹೊರತು ಯಾವನೂ ಹಿಂದಿರುಗನು.


ಹೀಗಿರುವಲ್ಲಿ ನಾವು ತಿರಿಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿ ಬಿಡುವಿಯಲ್ಲವೋ?


ಆದರೆ ಸಿದ್ದೀಮ್ ತಗ್ಗಿನಲ್ಲಿ ಕಲ್ಲರಗಿನ ಕೆಸರುಕುಣಿಗಳು ತುಂಬಾ ಇದ್ದವು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಕುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.


ಯೆರೂಸಲೇವಿುನಲ್ಲಿದ್ದ ಎಲ್ಲಾ ಪ್ರಭುಗಳನ್ನೂ ಭಟರನ್ನೂ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಯೊಯ್ದನು. ದೇಶದ ಜನರಲ್ಲಿ ಕೇವಲ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ.


ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ವ್ಯವಸಾಯಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು