Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 10:32 - ಕನ್ನಡ ಸತ್ಯವೇದವು J.V. (BSI)

32 ವರುಷಕ್ಕೆ ಒಂದು ಶೆಕೆಲಿನ ಮೂರನೆಯ ಭಾಗವನ್ನು ದೇವಾಲಯ ಸೇವೆಗಾಗಿ ಕೊಡಬೇಕೆಂಬ ಕರ್ತವ್ಯವನ್ನು ವಹಿಸಿಕೊಳ್ಳುತ್ತೇವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ವರ್ಷಕ್ಕೆ ಒಂದು ಶೆಕೆಲಿನ ಮೂರನೆಯ ಒಂದು ಭಾಗವನ್ನು ದೇವಾಲಯದ ಸೇವೆಗಾಗಿ ಕೊಡಬೇಕೆಂಬ ನಿಯಮವನ್ನು ಪಾಲಿಸಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ವರ್ಷಕ್ಕೆ ಐದು ಗ್ರಾಂ ಬೆಳ್ಳಿಯನ್ನು ದೇವಾಲಯ ಸೇವೆಗಾಗಿ ಕೊಡಬೇಕೆಂಬ ಕರ್ತವ್ಯವನ್ನು ವಹಿಸಿಕೊಳ್ಳುತ್ತೇವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ದೇವಾಲಯವನ್ನು ನಡಿಸುವ ಖರ್ಚಿನ ಜವಾಬ್ದಾರಿಕೆಯನ್ನು ನಾವು ಹೊರುತ್ತೇವೆ. ನಾವು ಒಂದು ಬೆಳ್ಳಿನಾಣ್ಯವನ್ನು ಪ್ರತಿವರ್ಷ ನಮ್ಮ ದೇವರಿಗೆ ಕಾಣಿಕೆ ಕೊಡುತ್ತೇವೆ. ಇದು ದೇವಾಲಯದ ಕೆಲಸಕಾರ್ಯಗಳಿಗೆ ಉಪಯೋಗಿಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ವರ್ಷಕ್ಕೆ 4 ಗ್ರಾಂ ಬೆಳ್ಳಿಯನ್ನು ನಮ್ಮ ದೇವರ ಆಲಯದ ಸೇವೆಗಾಗಿ ಕೊಡಬೇಕೆಂಬ ನಿಯಮವನ್ನು ಪಾಲಿಸಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 10:32
12 ತಿಳಿವುಗಳ ಹೋಲಿಕೆ  

ಮತ್ತು ನಾನು ಕಂಬವಾಗಿ ನಿಲ್ಲಿಸಿರುವ ಈ ಕಲ್ಲು ದೇವರ ಮನೆಯಾಗುವದು. ಇದಲ್ಲದೆ ನಿನ್ನಿಂದ ನನಗೆ ಬರುವ ಎಲ್ಲಾ ಆಸ್ತಿಯಲ್ಲಿ ಹತ್ತರಲ್ಲೊಂದು ಪಾಲನ್ನು ನಿನಗೆ ಸಮರ್ಪಿಸುವೆನೆಂಬದಾಗಿ ಮಾತುಕೊಡುತ್ತೇನೆ ಎಂದು ಹರಕೆಮಾಡಿಕೊಂಡನು.


ಒಬ್ಬನು ಕೊಡುವದಕ್ಕೆ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನಲ್ಲಿ ಇರುವದಕ್ಕೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವದು; ಅವನಿಗೆ ಇಲ್ಲದ್ದನ್ನು ದೇವರು ಕೇಳಿಕೊಳ್ಳುವದಿಲ್ಲ.


ನಿನ್ನ ಆದಾಯದಿಂದಲೂ ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು.


ನಿಮ್ಮ ದೇಶದ ಬಡವರು ಅದರಲ್ಲಿ ಬೆಳೆಯುವದನ್ನು ತಿನ್ನಲಿ; ವಿುಕ್ಕದ್ದನ್ನು ಕಾಡುಮೃಗಗಳು ಮೇಯಲಿ. ನಿಮ್ಮ ದ್ರಾಕ್ಷೇತೋಟಗಳ ವಿಷಯದಲ್ಲಿಯೂ ಎಣ್ಣೇ ಮರಗಳ ತೋಪುಗಳ ವಿಷಯದಲ್ಲಿಯೂ ಅದೇ ರೀತಿಯಲ್ಲಿ ಮಾಡಬೇಕು.


ಅರಸನಾದ ದಾವೀದನೂ ಗೋತ್ರಪ್ರಧಾನರೂ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಸೇನಾನಾಯಕರೂ ಯೆಹೋವನ ಆಲಯದ ವೃದ್ಧಿಗೋಸ್ಕರ ತಮಗೆ ಯುದ್ಧದಲ್ಲಿ ಸಿಕ್ಕಿದ ಕೊಳ್ಳೆಯ ಒಂದು ಭಾಗವನ್ನು ಯೆಹೋವನಿಗೆಂದು ಮುಡುಪಾಗಿ ಇಟ್ಟರು.


ನಾನೂ ನನ್ನ ಸಹೋದರರೂ ಸೇವಕರೂ ಸಹ ಅವರಿಗೆ ಹಣವನ್ನೂ ಧಾನ್ಯವನ್ನೂ ಬಡ್ಡಿಗೆ ಕೊಟ್ಟಿದ್ದೇವೆ. ಬಡ್ಡಿ ತೆಗೆದುಕೊಳ್ಳುವ ಪದ್ಧತಿಯನ್ನು ಬಿಟ್ಟುಬಿಡೋಣ.


ನಿನ್ನ ಸೇವಕನಾದ ಮೋಶೆಯ ಮುಖಾಂತರ ನಿನಗೆ ಮೀಸಲಾದ ಸಬ್ಬತೆಂಬ ವಿಶ್ರಾಂತಿ ದಿನವನ್ನು ಅವರಿಗೆ ಪ್ರಕಟಿಸಿ ಆಜ್ಞಾವಿಧಿಧರ್ಮಗಳನ್ನು ಕಲಿಸಿದಿ.


ಆ ಕಾಲದಲ್ಲಿ ಜನರು ಸಬ್ಬತ್‍ದಿವಸ ಯೆಹೂದ ದೇಶದಲ್ಲಿ ತೊಟ್ಟಿಯೊಳಗೆ ದ್ರಾಕ್ಷೆತುಳಿಯುವದನ್ನೂ ಕಣದ ಕಾಳನ್ನು ಕೂಡಿಸಿ ಆ ಕಾಳು ದ್ರಾಕ್ಷಾರಸ ದ್ರಾಕ್ಷೆ ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇವಿುಗೆ ತರುವದನ್ನೂ ಕಂಡು ಅವರು ಆ ಆಹಾರಪದಾರ್ಥಗಳನ್ನು ಮಾರುವದಕ್ಕೆ ಬಂದಾಗ ಅವರನ್ನು ಗದರಿಸಿದೆನು.


ನಿಮ್ಮ ಪೂರ್ವಿಕರು ಹೀಗೆ ಮಾಡಿದ್ದರಿಂದ ನಮ್ಮ ದೇವರು ಈ ಎಲ್ಲಾ ಕೇಡನ್ನು ನಮ್ಮ ಮೇಲೆಯೂ ನಮ್ಮ ಪಟ್ಟಣದ ಮೇಲೆಯೂ ಬರಮಾಡಿದನಲ್ಲವೇ. ಹೀಗಿರಲಾಗಿ ನೀವೂ ಸಬ್ಬತ್ ದಿನವನ್ನು ಅಶುದ್ಧಮಾಡಿ ಇಸ್ರಾಯೇಲ್ಯರ ಮೇಲಿದ್ದ ದೇವಕೋಪವನ್ನು ಹೆಚ್ಚಿಸುತ್ತೀರೇನು ಎಂದು ಹೇಳಿ ಅವರನ್ನು ಗದರಿಸಿದೆನು.


ಕಡೆಯಲ್ಲಿ ನಾನು ಅವರನ್ನು - ನೀವು ಗೋಡೆಯ ಹೊರಗೇಕೆ ಇಳುಕೊಂಡಿದ್ದೀರಿ? ನೀವು ತಿರಿಗಿ ಹೀಗೆ ಮಾಡಿದರೆ ನಿಮ್ಮನ್ನು ಹಿಡಿಸುವೆನು ಎಂದು ಗದರಿಸಲು ಅವರು ಅಂದಿನಿಂದ ಸಬ್ಬತ್‍ದಿನದಲ್ಲಿ ತಿರಿಗಿ ಬರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು