Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 10:34 - ಕನ್ನಡ ಸತ್ಯವೇದವು J.V. (BSI)

34 ಧರ್ಮಶಾಸ್ತ್ರವಿಧಿಗನುಸಾರವಾಗಿ ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮೇಲೆ ಬೆಂಕಿಯುರಿಸುವದಕ್ಕಾಗಿ ವರುಷ ವರುಷ ನೇವಿುತವಾದ ಕಾಲಗಳಲ್ಲಿ ನಮ್ಮ ದೇವಾಲಯಕ್ಕೆ ಕಟ್ಟಿಗೆ ದೊರಕುವ ಹಾಗೆ ಆಯಾಗೋತ್ರಾನುಸಾರ ಕಾಷ್ಠದಾನ ಮಾಡತಕ್ಕವರು ಇಂಥವರು ಎಂಬದನ್ನು ಯಾಜಕರೂ ಲೇವಿಯರೂ ಸಾಧಾರಣ ಜನರೂ ಆಗಿರುವ ನಮ್ಮಲ್ಲಿ ಚೀಟುಹಾಕಿ ಗೊತ್ತುಮಾಡುತ್ತೇವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮೇಲೆ ಬೆಂಕಿ ಉರಿಸುವುದಕ್ಕಾಗಿ, ಪ್ರತಿ ವರ್ಷವೂ ನಿಯಮಿತ ಕಾಲಗಳಲ್ಲಿ ನಮ್ಮ ದೇವಾಲಯಕ್ಕೆ ಕಟ್ಟಿಗೆ ದೊರಕುವ ಹಾಗೆ, ಆಯಾ ಗೋತ್ರಾನುಸಾರ ಕಟ್ಟಿಗೆ ದಾನ ಮಾಡತಕ್ಕವರು ಇಂಥವರೇ ಎಂಬುದನ್ನು ಯಾಜಕರೂ, ಲೇವಿಯರೂ, ಸಾಧಾರಣ ಜನರೂ ಆಗಿರುವ ನಮ್ಮಲ್ಲಿ ಚೀಟು ಹಾಕಿ ಗೊತ್ತುಮಾಡಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಧರ್ಮಶಾಸ್ತ್ರವಿಧಿಗನುಸಾರ, ನಮ್ಮ ದೇವರಾದ ಸರ್ವೇಶ್ವರನ ಬಲಿಪೀಠದ ಮೇಲೆ ಬೆಂಕಿಯುರಿಸುವುದಕ್ಕಾಗಿ ವರ್ಷವರ್ಷವೂ ನೇಮಿತವಾದ ಕಾಲಗಳಲ್ಲಿ, ನಮ್ಮ ದೇವಾಲಯಕ್ಕೆ ಸೌದೆ ದೊರಕುವ ಹಾಗೆ ಆಯಾ ಗೋತ್ರಾನುಸಾರ ಕಟ್ಟಿಗೆ ದಾನಮಾಡತಕ್ಕವರು ಇಂತಿಂಥವರು ಎಂಬುದನ್ನು ಯಾಜಕರೂ ಲೇವಿಯರೂ ಜನಸಾಮಾನ್ಯರೂ ಸೇರಿ, ನಮ್ಮಲ್ಲೇ ಚೀಟುಹಾಕಿ ಗೊತ್ತುಮಾಡುತ್ತೇವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 “ನಾವು ಅಂದರೆ ಯಾಜಕರು, ಲೇವಿಯರು ಮತ್ತು ಇತರ ಜನರು ಒಟ್ಟಾಗಿ ಸೇರಿ ದೇವಾಲಯದಲ್ಲಿ ಯಜ್ಞ ಹೋಮಗಳನ್ನರ್ಪಿಸುವುದಕ್ಕೆ ಬೇಕಾದ ಕಟ್ಟಿಗೆಯನ್ನು ಪ್ರತಿಯೊಂದು ಕುಟುಂಬವು ವರ್ಷಕ್ಕೊಮ್ಮೆ ತಮಗೆ ನಿಗದಿತವಾದ ಸಮಯದಲ್ಲಿ ತಂದು ಒದಗಿಸುವುದಕ್ಕೆ ಚೀಟು ಹಾಕಿದೆವು. ಧರ್ಮಶಾಸ್ತ್ರದಲ್ಲಿ ಬರೆದಂತೆಯೇ ನಾವು ಮಾಡಬೇಕಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಮೋಶೆಯ ನಿಯಮದಲ್ಲಿ ಬರೆದ ಹಾಗೆ ನಮ್ಮ ದೇವರಾಗಿರುವ ಯೆಹೋವ ದೇವರ ಬಲಿಪೀಠದ ಮೇಲೆ ಅರ್ಪಿಸುವುದಕ್ಕೆ ನೇಮಿತವಾದ ಕಾಲಗಳಲ್ಲಿ, ವರ್ಷ ವರ್ಷಕ್ಕೆ ನಮ್ಮ ಪಿತೃಗಳ ಗೋತ್ರಗಳ ಪ್ರಕಾರ ನಮ್ಮ ದೇವಾಲಯದೊಳಗೆ ತೆಗೆದುಕೊಂಡು ಬರಬೇಕಾದ ಸೌದೆಯ ಅರ್ಪಣೆಗೋಸ್ಕರ ಯಾಜಕರಿಗೂ, ಲೇವಿಯರಿಗೂ, ಜನರಿಗೂ ಚೀಟಿಗಳನ್ನು ಹಾಕಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 10:34
16 ತಿಳಿವುಗಳ ಹೋಲಿಕೆ  

ನೇವಿುತ ಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪು ಮಾಡಿಕೋ.


[ಆತನಿಗರ್ಪಿಸತಕ್ಕ] ಹೋಮಕ್ಕೆ ಲೆಬನೋನಿನ ಪಶುಗಳು ಸಾಲವು, ಅಲ್ಲಿನ ವನವು ಸವಿುತ್ತಿಗೆ ಸಾಲದು.


ಚೀಟುಹಾಕುವದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವದು.


ಇಸ್ರಾಯೇಲ್ಯರ ಪ್ರಭುಗಳು ಮಾತ್ರ ಯೆರೂಸಲೇವಿುನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತತ್ತು ಮಂದಿಯಲ್ಲಿ ಒಂಭತ್ತು ಮಂದಿ ತಮ್ಮ ತಮ್ಮ ಊರುಗಳಲ್ಲಿದ್ದುಕೊಂಡು ಒಬ್ಬನು ಪವಿತ್ರನಗರವಾಗಿರುವ ಯೆರೂಸಲೇವಿುನಲ್ಲಿ ವಾಸಿಸುವದಕ್ಕಾಗಿ ಅಲ್ಲಿಗೆ ಬರುವಂತೆ ಚೀಟುಹಾಕಿ ಗೊತ್ತು ಮಾಡಿದರು.


ಮೊದಲನೆಯ ಚೀಟು ಯೆಹೋಯಾರೀಬನಿಗೆ ಬಿದ್ದಿತು;


ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯಾಧಿಪತಿಗಳೂ ದೈವಿಕಕಾರ್ಯಗಳ ಅಧ್ಯಕ್ಷರೂ ಇರುವದರಿಂದ ಉಭಯ ಸಂತಾನಗಳವರು ಸಮಾನಸ್ಥಾನದವರು.


ಸಮೂಹಕ್ಕೋಸ್ಕರವೂ ಯೆಹೋವನು ಆದುಕೊಳ್ಳುವ ಸ್ಥಳದಲ್ಲಿ ಆತನ ಯಜ್ಞವೇದಿಗೋಸ್ಕರವೂ ಕಟ್ಟಿಗೆ ಒಡೆಯುವವರನ್ನಾಗಿಯೂ ನೀರು ತರುವವರನ್ನಾಗಿಯೂ ನೇವಿುಸಿದನು. ಅವರು ಇಂದಿನವರೆಗೂ ಅದೇ ಕೆಲಸ ಮಾಡುತ್ತಾರೆ.


ಆಮೇಲೆ ಅವರಿಗೋಸ್ಕರ ಚೀಟುಹಾಕಿದರು. ಚೀಟು ಮತ್ತೀಯನಿಗೆ ಬಂದದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರ ಸಂಗಡ ಸೇರಿ ಎಣಿಸಲ್ಪಟ್ಟನು.


ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು.


ಅವುಗಳನ್ನು ಆರಾರರ ಮೇರೆಗೆ ಎರಡು ರಾಶಿಗಳಾಗಿ ಚೊಕ್ಕ ಬಂಗಾರದ ಮೇಜಿನ ಮೇಲೆ ಯೆಹೋವನ ಸನ್ನಿಧಿಯಲ್ಲಿ ಇಡಬೇಕು.


ನನಗೆ ಸಮರ್ಪಿಸಬೇಕಾದ ಯಜ್ಞಗಳನ್ನು ಅಂದರೆ ನನಗೆ ಸುಗಂಧಹೋಮ ಮಾಡುವದಕ್ಕಾಗಿ ಇಸ್ರಾಯೇಲ್ಯರು ನನಗೋಸ್ಕರ ತರುವ ಆಹಾರವನ್ನು ತಕ್ಕ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.


ಇದಲ್ಲದೆ ಅವನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೂರಾಮನಿಗೆ - ನನ್ನ ತಂದೆಯಾದ ದಾವೀದನು ತನ್ನ ವಾಸಕ್ಕೋಸ್ಕರ ಅರಮನೆಯನ್ನು ಕಟ್ಟಿಸಿಕೊಳ್ಳುವದಕ್ಕಾಗಿ ನೀನು ಅವನಿಗೆ ದೇವದಾರುಮರಗಳನ್ನು ಕಳುಹಿಸಿದಿಯಲ್ಲಾ.


ಅಂದಿನಿಂದ ನಿತ್ಯಸರ್ವಾಂಗಹೋಮವೂ ಅಮಾವಾಸ್ಯೆ, ಯೆಹೋವನ ಎಲ್ಲಾ ಉತ್ಸವದಿನ ಇವುಗಳಲ್ಲಿ ನೇಮಕವಾದ ಸರ್ವಾಂಗಹೋಮಗಳೂ ಜನರು ಸ್ವೇಚ್ಫೆಯಿಂದ ತಂದುಕೊಟ್ಟ ಯಜ್ಞಗಳೂ ಯೆಹೋವನಿಗೆ ಸಮರ್ಪಣೆಯಾಗುತ್ತಾ ಬಂದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು