Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 10:38 - ಕನ್ನಡ ಸತ್ಯವೇದವು J.V. (BSI)

38 ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿದ ಭಾಗದ ದಶಮಾಂಶವನ್ನು ದೇವಾಲಯದ ಬಂಡಾರದ ಕೊಠಡಿಗಳಲ್ಲಿಡಬೇಕು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿರುವ ಭಾಗದ ದಶಮಾಂಶವನ್ನು ದೇವಾಲಯದ ಭಂಡಾರದ ಕೊಠಡಿಗಳಲ್ಲಿ ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿದ ಭಾಗದ ದಶಮಾಂಶವನ್ನು ದೇವಾಲಯದ ಬಂಡಾರದಕೊಠಡಿಗಳಲ್ಲಿಡಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ನಮ್ಮಿಂದ ಆ ಕಾಣಿಕೆಗಳನ್ನು ಅವರು ಸ್ವೀಕರಿಸುವಾಗ ಆರೋನನ ವಂಶದವರಾದ ಯಾಜಕನೊಬ್ಬನು ಅವರ ಜೊತೆಯಲ್ಲಿ ಇರಬೇಕು. ಲೇವಿಯರು ಆ ಕಾಣಿಕೆಗಳನ್ನು ದೇವಾಲಯಕ್ಕೆ ತಂದು ಅದರ ಉಗ್ರಾಣಗಳಲ್ಲಿ ಶೇಖರಿಸಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತನೆಯ ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಟ್ಟಡಿಗಳ ಬಳಿಯಿರುವ ಬೊಕ್ಕಸದ ಮನೆಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 10:38
11 ತಿಳಿವುಗಳ ಹೋಲಿಕೆ  

ಲೇವಿಯರಾದ ಮೇಲ್ಕಂಡ ನಾಲ್ಕು ಮಂದಿ ದ್ವಾರಪಾಲಕ ಮುಖ್ಯಸ್ಥರು ಜವಾಬುದಾರರಾಗಿದ್ದು ದೇವಾಲಯದ ಕೋಣೆಗಳನ್ನೂ ಭಂಡಾರಗಳನ್ನೂ ನೋಡಿಕೊಳ್ಳುವವರಾಗಿದ್ದರು.


ಹೊಲದ ಬೆಳೆಯಾಗಲಿ ತೋಟದ ಹಣ್ಣುಗಳಾಗಲಿ ಭೂವಿುಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಪಾಲು ಯೆಹೋವನದಾಗಿರಬೇಕು; ಅದು ಯೆಹೋವನಿಗೆ ಮೀಸಲಾದದ್ದು.


ನೀವು ಭೂವಿುಯಿಂದಾದ ಬೆಳೆಯನ್ನು ಅನುಭೋಗಿಸುವಾಗ ಸ್ವಲ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು.


ನೀವೂ ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು.


ಲೇವಿಯರು ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡುವದಕ್ಕಾಗಿ ಇಸ್ರಾಯೇಲ್ಯರಿಂದ [ಸಕಲಪದಾರ್ಥಗಳ] ಹತ್ತನೆಯ ಪಾಲನ್ನು ಗೊತ್ತುಮಾಡಿಕೊಟ್ಟಿದ್ದೇನೆ.


ಇಸ್ರಾಯೇಲ್ಯರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಪಾಲನ್ನೇ ಲೇವಿಯರಿಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದೇನಲ್ಲಾ. ಇವರಿಗೆ ಇಸ್ರಾಯೇಲ್ಯರೊಂದಿಗೆ ಪಾಲು ದೊರೆಯುವದಿಲ್ಲವೆಂದು ನಾನು ಹೇಳಿದ ಮಾತಿಗೆ ಇದೇ ಕಾರಣ.


ಪ್ರತಿವರುಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮಭಾಗವನ್ನು ಪ್ರತ್ಯೇಕಿಸಬೇಕು.


ನೇವಿುತ ಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪು ಮಾಡಿಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು