Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:43 - ಕನ್ನಡ ಸತ್ಯವೇದವು J.V. (BSI)

43 ದೇವರು ತಮಗೆ ವಿಶೇಷಾನಂದವನ್ನುಂಟುಮಾಡಿದ್ದರಿಂದ ಜನರು ಆ ದಿನದಲ್ಲಿ ಅನೇಕ ಯಜ್ಞಗಳನ್ನು ಸಮರ್ಪಿಸಿ ತಮ್ಮ ಹೆಂಡತಿ ಮಕ್ಕಳೊಡನೆ ಮಹೋತ್ಸವ ಮಾಡಿದರು. ಯೆರೂಸಲೇವಿುನ ಉತ್ಸವದ ಹರ್ಷಧ್ವನಿಯು ಬಹುದೂರದವರೆಗೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ದೇವರು ತಮಗೆ ವಿಶೇಷ ಆನಂದವನ್ನು ಉಂಟುಮಾಡಿದ್ದರಿಂದ, ಜನರು ಆ ದಿನದಲ್ಲಿ ಅನೇಕ ಯಜ್ಞಗಳನ್ನು ಸಮರ್ಪಿಸಿ ತಮ್ಮ ಹೆಂಡತಿ ಮಕ್ಕಳೊಡನೆ ಮಹೋತ್ಸವಮಾಡಿದರು. ಯೆರೂಸಲೇಮಿನ ಉತ್ಸವದ ಹರ್ಷಧ್ವನಿಯು ಬಹಳ ದೂರದವರೆಗೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ದೇವರು ತಮಗೆ ವಿಶೇಷಾನಂದವನ್ನುಂಟು ಮಾಡಿದ್ದರಿಂದ ಜನರು ಆ ದಿನ ಅನೇಕ ಬಲಿದಾನಗಳನ್ನು ಸಮರ್ಪಿಸಿ ತಮ್ಮ ಮಡದಿಮಕ್ಕಳೊಡನೆ ಮಹೋತ್ಸವ ಮಾಡಿದರು. ಜೆರುಸಲೇಮಿನ ಉತ್ಸವದ ಹರ್ಷಧ್ವನಿ ಬಹುದೂರದವರೆಗೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಆ ವಿಶೇಷ ದಿನದಲ್ಲಿ ಯಾಜಕರು ಹೆಚ್ಚಿನ ಸಂಖ್ಯೆಯಲ್ಲಿ ಯಜ್ಞವನ್ನರ್ಪಿಸಿದರು. ಜನರೆಲ್ಲಾ ಸಂತೋಷಪಟ್ಟರು. ದೇವರು ಅವರಿಗೆಲ್ಲಾ ಅತ್ಯಾನಂದವನ್ನು ಉಂಟುಮಾಡಿದನು; ಹೆಂಗಸರೂ ಮಕ್ಕಳೂ ಉತ್ಸಾಹದಿಂದ ಆನಂದಿಸಿದರು; ಜೆರುಸಲೇಮಿನಿಂದ ಹೊರಟ ಅವರ ಹರ್ಷಧ್ವನಿಯು ಬಹುದೂರದವರೆಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ, ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಅವರು ತಮ್ಮ ಮಡದಿಮಕ್ಕಳೂಡನೆ ಮಹೋತ್ಸವ ಮಾಡಿದರು. ಆದ್ದರಿಂದ ಯೆರೂಸಲೇಮಿನ ಸಂತೋಷ ಧ್ವನಿಯು ಬಹು ದೂರಕ್ಕೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:43
29 ತಿಳಿವುಗಳ ಹೋಲಿಕೆ  

ಜನರು ಮಹಾಧ್ವನಿಯಿಂದ ಆರ್ಭಟಿಸುತ್ತಿದ್ದದರಿಂದ ಹರ್ಷಧ್ವನಿ ಯಾವದೋ ಅಳುವವರ ಧ್ವನಿ ಯಾವದೋ ಗೊತ್ತಾಗಲಿಲ್ಲ. ಗದ್ದಲವು ಬಹುದೂರದವರೆಗೂ ಕೇಳಿಸಿತು.


ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದೀ; ನಿನ್ನ ಕೆಲಸಗಳ ದೆಸೆಯಿಂದ ಉತ್ಸಾಹಧ್ವನಿ ಮಾಡುತ್ತೇನೆ.


ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು; ಯುವಕರೂ ವೃದ್ಧರೂ ಜೊತೆಯಾಗಿ ಹರ್ಷಿಸುವರು; ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನುಂಟುಮಾಡಿ ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು.


ನಿಮ್ಮಲ್ಲಿ ಬಾಧೆಪಡುವವನು ಇದ್ದಾನೋ? ಅವನು ದೇವರನ್ನು ಪ್ರಾರ್ಥಿಸಲಿ. ನಿಮ್ಮಲ್ಲಿ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆ ಹಾಡಲಿ.


ಆದರೆ ಪವಿತ್ರಾತ್ಮಭರಿತರಾಗಿದ್ದು ಕೀರ್ತನೆಗಳಿಂದಲೂ ಆತ್ಮಸಂಬಂಧವಾದ ಪದಗಳಿಂದಲೂ ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಗಾನಮಾಡುತ್ತಾ ಕೀರ್ತನೆ ಹಾಡುತ್ತಾ


ಹಾಗೆಯೇ ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರಿಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವದು, ಮತ್ತು ನಿಮ್ಮ ಆನಂದವನ್ನು ಯಾರೂ ನಿವ್ಮಿುಂದ ತೆಗೆಯುವದಿಲ್ಲ.


ಆದರೆ ಮಹಾಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನೂ ದಾವೀದನ ಕುಮಾರನಿಗೆ ಜಯ ಜಯವೆಂದು ದೇವಾಲಯದಲ್ಲಿ ಕೂಗುತ್ತಿರುವ ಹುಡುಗರನ್ನೂ ನೋಡಿ ಸಿಟ್ಟುಗೊಂಡು


ಆತನ ಹಿಂದೆಯೂ ಮುಂದೆಯೂ ಗುಂಪಾಗಿ ಹೋಗುತ್ತಿದ್ದ ಜನರು - ದಾವೀದನ ಕುಮಾರನಿಗೆ ಜಯ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ! ಮೇಲಣ ಲೋಕಗಳಲ್ಲಿ ಜಯ! ಎಂದು ಆರ್ಭಟಿಸಿದರು.


ಉಲ್ಲಾಸ ಕೋಲಾಹಲ, ವಧೂವರರ ಸ್ವರ, ಇವುಗಳು ಕೇಳ ಬರುವವು. ಸೇನಾಧೀಶ್ವರನಾದ ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಯೆಹೋವನು, ಒಳ್ಳೆಯವನು, ಆತನ ಕೃಪೆಯು ಶಾಶ್ವತ ಎಂದು ಕೀರ್ತಿಸುತ್ತಾ ಕೃತಜ್ಞತಾಬಲಿಯನ್ನು ಯೆಹೋವನ ಆಲಯಕ್ಕೆ ತರುವವರ ಗಾನವೂ ಕಿವಿಗೆ ಬೀಳುವದು. ನಾನು ದೇಶವನ್ನು ದುರವಸ್ಥೆಯಿಂದ ತಪ್ಪಿಸಿ ಪೂರ್ವಸ್ಥಿತಿಗೆ ತರುವೆನು.


ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.


ಯೆಹೋವನು ನನಗೆ ಬಲವೂ ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.


ಹೀಗಿರುವದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ ನನ್ನ ತಲೆ ಎತ್ತಲ್ಪಟ್ಟಿರುವದು; ನಾನು ಯೆಹೋವನ ಗುಡಾರದಲ್ಲಿ ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು.


ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ ಮನುಷ್ಯನಿಗಾಗಲಿ ಮಾಡುವದೆಲ್ಲಾ ಹೀಗೆಯೇ.


ಆಮೇಲೆ ಯೆಹೂದ್ಯರೂ ಯೆರೂಸಲೇವಿುನವರೂ ಅವರ ಮುಂಗಡೆಯಲ್ಲಿ ಯೆಹೋಷಾಫಾಟನೂ ಯೆಹೋವನು ತಮಗೆ ಶತ್ರುಗಳ ಮೇಲೆ ಜಯವನ್ನು ಅನುಗ್ರಹಿಸಿದ್ದಾನೆಂದು ಜಯಘೋಷ ಮಾಡುತ್ತಾ ಯೆರೂಸಲೇವಿುಗೆ ಹಿಂದಿರುಗಿದರು.


ಎಲ್ಲಾ ಯೆಹೂದ್ಯರೂ ಅವರ ಹೆಂಡತಿಮಕ್ಕಳೂ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದರು.


ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನದಲ್ಲಿ ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ ಸೊಲೊಮೋನರಿಗೂ ಆತನ ಪ್ರಜೆಗಳಾದ ಇಸ್ರಾಯೇಲ್ಯರಿಗೂ ಉಂಟಾದ ಉಪಕಾರಗಳನ್ನು ನೆನಸಿಕೊಂಡು ಆನಂದಭರಿತರಾಗಿ ಹರ್ಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೋದರು.


ಯೆಹೋವನ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇಲ್ಯರೆಲ್ಲರೂ ಭೂವಿುಯು ಪ್ರತಿಧ್ವನಿಕೊಡುವಷ್ಟು ಆರ್ಭಟಿಸಿದರು.


ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯೂ ಹಬ್ಬಗಳಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸುವಾಗ ಆ ತುತೂರಿಗಳನ್ನು ಊದಿಸಬೇಕು. ಆ ಧ್ವನಿ ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವದು; ನಾನು ನಿಮ್ಮ ದೇವರಾದ ಯೆಹೋವನು.


ಮಾಸೇಯ, ಶೆಮಾಯ, ಎಲ್ಲಾಜಾರ್, ಉಜ್ಜೀ, ಯೆಹೋಹಾನಾನ್, ಮಲ್ಕೀಯ, ಏಲಾಮ್, ಎಜೆರ್ ಎಂಬವರೂ ದೇವಾಲಯದ ಬಳಿಯಲ್ಲಿ ನಿಂತಿರಲು ಗಾಯಕರು ಹಾಡತೊಡಗಿದರು. ಇಜ್ರಹ್ಯನು ಇವರ ನಾಯಕನು.


ಪರಾತ್ಪರನೇ, ನಿನ್ನಲ್ಲಿ ನಾನು ಸಂತೋಷಿಸಿ ಉತ್ಸಾಹಪಡುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.


ಯೆರೂಸಲೇವಿುನ ಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು ಕೀರ್ತನಗಾಯನಗಳಿಂದಲೂ ತಾಳ ಸ್ವರಮಂಡಲ ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವದಕ್ಕಾಗಿ ಯೆರೂಸಲೇವಿುಗೆ ಕರೆಯಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು