Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:10 - ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ಲೇವಿಯರಿಗೆ ಸಲ್ಲತಕ್ಕ ಭಾಗಗಳು ಅವರಿಗೆ ಸಿಕ್ಕಲಿಲ್ಲವೆಂದೂ ಆರಾಧನೆ ನಡಿಸತಕ್ಕ ಲೇವಿಯರೂ ಗಾಯಕರೂ ತಮ್ಮ ತಮ್ಮ ಭೂಸ್ವಾಸ್ತ್ಯಗಳಿಗೆ ಹೋಗಿಬಿಟ್ಟರೆಂದೂ ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ, ಲೇವಿಯರಿಗೆ ಸಲ್ಲತಕ್ಕ ಭಾಗಗಳು ಅವರಿಗೆ ಸಿಕ್ಕಲಿಲ್ಲವೆಂದೂ, ಆರಾಧನೆ ನಡೆಸತಕ್ಕ ಲೇವಿಯರೂ, ಗಾಯಕರೂ ತಮ್ಮ ತಮ್ಮ ಭೂಸ್ವಾಸ್ಥ್ಯಗಳಿಗೆ ಹಿಂತಿರುಗಿ ಹೋಗಿಬಿಟ್ಟರೆಂದೂ ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದಲ್ಲದೆ, ಲೇವಿಯರಿಗೆ ಸಲ್ಲತಕ್ಕ ಪಾಲುಗಳು ಅವರಿಗೆ ಸಿಕ್ಕಲಿಲ್ಲವೆಂದೂ ಆರಾಧನೆ ನಡೆಸತಕ್ಕ ಲೇವಿಯರೂ ಗಾಯಕರೂ ತಮ್ಮ ತಮ್ಮ ಆಸ್ತಿಯಿದ್ದಲ್ಲಿಗೆ ಹೋಗಿಬಿಟ್ಟರೆಂದೂ ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಲೇವಿಯರಿಗೆ ಸಲ್ಲತಕ್ಕ ಪಾಲನ್ನು ಜನರು ಕೊಡಲಿಲ್ಲವೆಂಬ ಕಾರಣದಿಂದಾಗಿ ಲೇವಿಯರೂ ಗಾಯಕರೂ ಹೊಲದಲ್ಲಿ ಕೆಲಸ ಮಾಡಲು ತಮ್ಮ ಊರುಗಳಿಗೆ ಹೊರಟುಹೋದರೆಂಬ ವಿಷಯ ನನಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಲೇವಿಯರ ಪಾಲನ್ನು ಅವರಿಗೆ ಕೊಡಲಿಲ್ಲವೆಂದು ನನಗೆ ತಿಳಿಯಿತು. ಸೇವೆಯನ್ನು ಮಾಡುವ ಲೇವಿಯರೂ, ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:10
11 ತಿಳಿವುಗಳ ಹೋಲಿಕೆ  

ನಾವು ದೇವರಿಗಾಗಿ ಪ್ರತ್ಯೇಕಿಸಿಡತಕ್ಕ ಪ್ರಥಮಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ ಮೊದಲಾದವುಗಳನ್ನು ಯಾಜಕರಿಗೋಸ್ಕರ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುವೆವು; ನಮ್ಮ ಭೂವಿುಯ ಹುಟ್ಟುವಳಿಯ ದಶಮಾಂಶವು ಲೇವಿಯರದಾಗಬೇಕು; ಲೇವಿಯರು ತಾವೇ ಬಂದು ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಕೂಡಿಸಬೇಕು;


ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ನಿನ್ನಿಂದ ಏನು ಕದ್ದುಕೊಂಡಿದ್ದೇವೆ ಎಂದು ಕೇಳುತ್ತೀರೋ? ದಶಮಾಂಶ, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.


ಜೆರುಬ್ಬಾಬೆಲ್, ನೆಹೆಮೀಯ ಇವರ ಕಾಲಗಳಲ್ಲಿ ಎಲ್ಲಾ ಇಸ್ರಾಯೇಲ್ಯರು ಗಾಯಕರಿಗೂ ದ್ವಾರಪಾಲಕರಿಗೂ ದಿನದಿನಕ್ಕೆ ಸಿಕ್ಕತಕ್ಕ ಭಾಗಗಳನ್ನು ಕೊಡುತ್ತಿದ್ದರು. ಇವರು ಅವುಗಳಲ್ಲಿ ದಶಮಾಂಶವನ್ನು ಲೇವಿಯರಿಗೂ ಲೇವಿಯರು ತಮ್ಮದರಲ್ಲಿ ದಶಮಾಂಶವನ್ನು ಆರೋನನ ಮಕ್ಕಳಿಗೂ ಕೊಡುತ್ತಿದ್ದರು.


ನೀವು ನಿಮ್ಮ ದೇಶದಲ್ಲಿ ಇರುವ ತನಕ ಲೇವಿಯರನ್ನು ಕೈಬಿಡಬಾರದು; ಜ್ಞಾಪಕವಿರಲಿ.


ಇಸ್ರಾಯೇಲ್ಯರು ತಾವು ಹೊಂದುವ ಸ್ವಾಸ್ತ್ಯದಲ್ಲಿ ಕೆಲವು ಊರುಗಳನ್ನೂ ಆ ಊರುಗಳ ಸುತ್ತಲಿನ ಭೂವಿುಯನ್ನೂ ಲೇವಿಯರಿಗೆ ನಿವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು.


ಇಸ್ರಾಯೇಲ್ಯರೂ ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದೇವರಿಗೋಸ್ಕರ ಪ್ರತ್ಯೇಕಿಸತಕ್ಕ ಭಾಗಗಳನ್ನು ತಂದು ಸೇವೆನಡಿಸುತ್ತಿರುವ ಯಾಜಕರು, ದ್ವಾರಪಾಲಕರು, ಗಾಯಕರು ಇವರೂ ಪವಿತ್ರಾಲಯದ ಪಾತ್ರೆಗಳೂ ಇರುವ ಕೊಠಡಿಗಳಲ್ಲಿ ಇಡಬೇಕು. ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವದಿಲ್ಲ ಎಂದು ಬರೆದುಕೊಟ್ಟರು.


ಯಾಜಕರು ಮತ್ತು ಲೇವಿಯರು ಯೆಹೋವ ಧರ್ಮದಲ್ಲಿ ಆಸಕ್ತರಾಗಿರುವದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು ಯೆರೂಸಲೇವಿುನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.


ನೀನು ನನಗೆ ಹೋಮಕ್ಕಾಗಿ ಕುರಿಮೇಕೆಗಳನ್ನು ತಂದು ಯಜ್ಞಗಳಿಂದ ನನ್ನನ್ನು ಘನಪಡಿಸಲಿಲ್ಲ, ನೈವೇದ್ಯಕ್ಕಾಗಿ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು