Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:13 - ಕನ್ನಡ ಸತ್ಯವೇದವು J.V. (BSI)

13 ಆಮೇಲೆ ಉಗ್ರಾಣಗಳನ್ನು ನೋಡುವದಕ್ಕೋಸ್ಕರ ಯಾಜಕನಾದ ಶೆಲೆಮ್ಯ, ಲೇಖಕನಾದ ಚಾದೋಕ್, ಲೇವಿಕುಲದವನಾದ ಪೆದಾಯ ಇವರನ್ನೂ ಇವರ ಸಹಾಯಕ್ಕಾಗಿ ಜಕ್ಕೂರನ ಮಗನೂ ಮತ್ತನ್ಯನ ಮೊಮ್ಮಗನೂ ಆದ ಹಾನಾನನನ್ನೂ ನೇವಿುಸಿದೆನು; ಇವರೆಲ್ಲರೂ ನಂಬಿಗಸ್ತರೆಂದು ಹೆಸರುಗೊಂಡವರು. ತಮ್ಮ ಸಹೋದರರಿಗೆ ಸಿಕ್ಕತಕ್ಕದ್ದನ್ನು ಹಂಚಿಕೊಡುವದು ಇವರ ಕರ್ತವ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಂತರ ಉಗ್ರಾಣಗಳ ಮೇಲ್ವಿಚಾರಣೆಗಾಗಿ ನೋಡುವುದಕ್ಕೋಸ್ಕರ ಯಾಜಕನಾದ ಶೆಲೆಮ್ಯ, ಲೇಖಕನಾದ ಚಾದೋಕ್, ಲೇವಿಯ ಕುಲದವನಾದ ಪೆದಾಯ ಇವರನ್ನೂ, ಇವರ ಸಹಾಯಕ್ಕಾಗಿ ಜಕ್ಕೂರನ ಮಗನೂ, ಮತ್ತನ್ಯನ ಮೊಮ್ಮಗನೂ ಆದ ಹಾನಾನನನ್ನೂ ನೇಮಿಸಿದೆನು. ಇವರೆಲ್ಲರೂ ನಂಬಿಗಸ್ತರೆಂದು ಹೆಸರುಗೊಂಡವರಾಗಿದ್ದರು. ತಮ್ಮ ಸಹೋದರರಿಗೆ ಸಿಕ್ಕತಕ್ಕದ್ದನ್ನು ಹಂಚಿಕೊಡುವುದು ಇವರ ಕರ್ತವ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಮೇಲೆ ಉಗ್ರಾಣಗಳನ್ನು ನೋಡಿಕೊಳ್ಳುವುದಕ್ಕೆ ಯಾಜಕನಾದ ಶೆಲೆಮ್ಯ, ಲೇಖಕನಾದ ಚಾದೋಕ್, ಲೇವಿಕುಲದವನಾದ ಪೆದಾಯ ಇವರನ್ನೂ ಇವರ ಸಹಾಯಕ್ಕಾಗಿ ಜಕ್ಕೂರನ ಮಗನೂ ಮತ್ತನ್ಯನ ಮೊಮ್ಮಗನೂ ಆದ ಹಾನಾನನನ್ನೂ ನೇಮಿಸಿದೆ. ಇವರೆಲ್ಲರೂ ನಂಬಿಕಸ್ತರೆಂದು ಹೆಸರುಗೊಂಡವರು. ತಮ್ಮ ಸಹೋದರರಿಗೆ ತಕ್ಕದ್ದನ್ನು ಹಂಚಿಕೊಡುವುದು ಇವರ ಕರ್ತವ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯಾಜಕನಾದ ಶೆಲೆಮ್ಯನನ್ನೂ ಬೋಧಕನಾದ ಚಾದೋಕನನ್ನೂ ಪೆದಾಯ ಎಂಬ ಲೇವಿಯನನ್ನೂ ಉಗ್ರಾಣಗಳಿಗೆ ಮುಖ್ಯಸ್ತರನ್ನಾಗಿ ಮಾಡಿದೆನು. ಮತ್ತನ್ಯನ ಮೊಮ್ಮಗನೂ ಜಕ್ಕೂರನ ಮಗನೂ ಆಗಿರುವ ಹಾನಾನನನ್ನು ಅವರಿಗೆ ಸಹಾಯಕನನ್ನಾಗಿ ನೇಮಿಸಿದೆನು. ಇವರು ನಂಬಿಗಸ್ತರಾಗಿದ್ದರು. ತಮ್ಮ ಜನರಿಗೆ ಬೇಕಾದ ದವಸವನ್ನು, ಆಹಾರಸಾಮಾಗ್ರಿಗಳನ್ನು ಒದಗಿಸುವ ಕಾರ್ಯಕ್ಕೆ ಅವರು ಜವಾಬ್ದಾರರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ನಾನು ಯಾಜಕನಾದ ಶೆಲೆಮ್ಯನನ್ನೂ, ಲೇಖಕನಾದ ಚಾದೋಕನನ್ನೂ, ಲೇವಿಯರಲ್ಲಿರುವ ಪೆದಾಯನನ್ನೂ ಅವರಿಗೆ ಸಹಾಯವಾಗಿ ಮತ್ತನ್ಯನ ಮಗನಾದ ಜಕ್ಕೂರನ ಮಗ ಹಾನಾನನನ್ನೂ ಬೊಕ್ಕಸಗಳ ಮೇಲೆ ನೇಮಿಸಿದೆನು. ಅವರು ನಂಬಿಗಸ್ತರೆಂದು ಹೆಸರುಗೊಂಡವರು. ತಮ್ಮ ಸಹೋದರರಿಗೆ ಹಂಚಿ ಕೊಡುವುದು ಅವರ ಕೆಲಸವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:13
20 ತಿಳಿವುಗಳ ಹೋಲಿಕೆ  

ಆಮೇಲೆ ನನ್ನ ತಮ್ಮನಾದ ಹನಾನಿಗೂ ಬಲು ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ ದುರ್ಗಾಧಿಕಾರಿಯೂ ಆದ ಹನನ್ಯನಿಗೂ ಯೆರೂಸಲೇವಿುನ ಮೇಲ್ವಿಚಾರಣೆಯನ್ನು ಒಪ್ಪಿಸಿ


ಅವರು ನಂಬಿಗಸ್ತರಾಗಿರುವದರಿಂದ ಅವರ ವಶಕ್ಕೆ ಕೊಡಲ್ಪಡುವ ಹಣದ ಲೆಕ್ಕವನ್ನು ಕೇಳಬಾರದು ಎಂದು ಆಜ್ಞಾಪಿಸಿ ಅವನನ್ನು ಯೆಹೋವನ ಆಲಯಕ್ಕೆ ಕಳುಹಿಸಿದನು.


ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಲ್ಲವೇ.


ಆದದರಿಂದ ಸಹೋದರರೇ, ಸಂಭಾವಿತರೂ ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಆಗಿರುವ ಏಳುಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ; ಅವರನ್ನು ಈ ಕೆಲಸದ ಮೇಲೆ ನೇವಿುಸುವೆವು.


ಆ ದಿವಸಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್‍ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ - ದಿನದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವದಿಲ್ಲವೆಂದು ಗುಣುಗುಟ್ಟಿದರು.


ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾದದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂವಿುಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗೋಸ್ಕರ ಪ್ರತ್ಯೇಕಿಸತಕ್ಕ ವಸ್ತು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇವಿುಸಿದರು.


ಕೆಲಸಗಾರರಿಗೆ ಸಂಬಳ ಕೊಡುವ ಮೊಕ್ತೇಸರರು ನಂಬಿಗಸ್ತರಾಗಿದ್ದದರಿಂದ ಅವರ ವಶಕ್ಕೆ ಕೊಡಲ್ಪಟ್ಟ ಹಣದ ಲೆಕ್ಕವನ್ನು ಯಾರೂ ಕೇಳಲಿಲ್ಲ.


ಇದಲ್ಲದೆ ಅವರು ಮೊದಲು ಪರೀಕ್ಷಿಸಲ್ಪಡಬೇಕು; ತರುವಾಯ ಅವರ ಮೇಲೆ ಯಾರೂ ತಪ್ಪುಹೊರಿಸದಿದ್ದರೆ ಸಭಾಸೇವಕರ ಉದ್ಯೋಗವನ್ನು ನಡಿಸಲಿ.


ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು. ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಮೊದಲು ದೂಷಕನೂ ಹಿಂಸಕನೂ ಬಲಾತ್ಕಾರಿಯೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ ತನ್ನ ಸೇವೆಗೆ ನೇವಿುಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ. ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು;


ಬಂದ ಕ್ರಯವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು; ಅದನ್ನು ಪ್ರತಿಯೊಬ್ಬನಿಗೆ ಅವನವನ ಅವಶ್ಯದಂತೆ ಹಂಚಿಕೊಡುತ್ತಿದ್ದರು.


ಸ್ವಾವಿು ಹೇಳಿದ್ದೇನಂದರೆ - ಹೊತ್ತುಹೊತ್ತಿಗೆ ಅಶನಕ್ಕೆ ಬೇಕಾದದ್ದನ್ನು ಅಳೆದು ಕೊಡುವದಕ್ಕಾಗಿ ಯಜಮಾನನು ತನ್ನ ಮನೆಯವರ ಮೇಲೆ ನೇವಿುಸಿದ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೆವಾರ್ತೆಯವನು ಯಾರು?


ಆಸಾಫ್ ಸಂತಾನದ ಜಕ್ಕೂರನಿಗೆ ಹುಟ್ಟಿದ ಮೀಕಾಯನ ವಂಶದವನೂ ಮತ್ತನ್ಯನ ಮರಿಮಗನೂ ಶೆಮಾಯನ ಮೊಮ್ಮಗನೂ ಯೋನಾತಾನನ ಮಗನೂ ಆದ ಜೆಕರ್ಯನೂ


ದೇವಾಲಯ ಸೇವಾ ಸಂಬಂಧದಲ್ಲಿ ಗಾಯಕರಾದ ಆಸಾಫ್ಯರಿಗೆ ಸೇರಿದ ಬಾನೀಯ ಮಗನೂ ಹಷಬ್ಯನ ಮೊಮ್ಮಗನೂ ಮತ್ತನ್ಯನ ಮರಿಮಗನೂ ಮೀಕನ ವಂಶದವನೂ ಆದ ಉಜ್ಜೀಯು ಯೆರೂಸಲೇವಿುನಲ್ಲಿದ್ದ ಲೇವಿಯರ ನಾಯಕನು.


ರೆಹೋಬ್, ಹಷಬ್ಯ, ಜಕ್ಕೂರ್, ಶೇರೇಬ್ಯ, ಶೆಬನ್ಯ,


ಧರ್ಮೋಪದೇಶಕನಾದ ಎಜ್ರನು ಪಾರಾಯಣಕ್ಕಾಗಿ ಮಾಡಲ್ಪಟ್ಟ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬವರೂ ಎಡಗಡೆಯಲ್ಲಿ ಪೆದಾಯ, ಮೀಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬವರೂ ನಿಂತರು.


ಇವನ ಆಚೆ ಶೆಲೆಮ್ಯನ ಮಗನಾದ ಹನನ್ಯ; ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರಮಾಡಿದವನು ಚಾಲಾಫನ ಆರನೆಯ ಮಗನಾದ ಹಾನೂನ್; ಇವನ ಆಚೆ ಅಂದರೆ ತನ್ನ ಸ್ವಂತ ಕೊಠಡಿಯ ಮುಂದೆ ಬೆರೆಕ್ಯನ ಮಗನಾದ ಮೆಷುಲ್ಲಾಮ್.


ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿದ ಭಾಗದ ದಶಮಾಂಶವನ್ನು ದೇವಾಲಯದ ಬಂಡಾರದ ಕೊಠಡಿಗಳಲ್ಲಿಡಬೇಕು,


ಅಪರಾಧ ಪ್ರಾಯಶ್ಚಿತ್ತಕ್ಕಾಗಿಯೂ ದೋಷಪರಿಹಾರಕ್ಕಾಗಿಯೂ ತರಲ್ಪಟ್ಟ ಹಣವು ಯಾಜಕರ ಭಾಗವಾಗಿತ್ತು; ಅದು ಯೆಹೋವನ ಆಲಯಕ್ಕೆ ಸೇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು