Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:31 - ಕನ್ನಡ ಸತ್ಯವೇದವು J.V. (BSI)

31 ನೇವಿುತ ಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪು ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನಿಯಮಿತ ಕಾಲಗಳನ್ನು, ಸಲ್ಲತಕ್ಕ ಕಟ್ಟಿಗೆ ದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ನೇಮಿತಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿ ಕ್ರಮಗಳನ್ನು ಏರ್ಪಡಿಸಿದೆ; ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಜನರು ಕಟ್ಟಿಗೆಯನ್ನೂ ಪ್ರಥಮಫಲಗಳನ್ನೂ ಸರಿಯಾದ ಸಮಯದಲ್ಲಿ ತರುವಂತೆ ನಾನು ಆಜ್ಞಾಪಿಸಿದೆನು. ನನ್ನ ದೇವರೇ, ಈ ಒಳ್ಳೆಯ ಕಾರ್ಯಗಳನ್ನೆಲ್ಲಾ ಮಾಡಿದ ನನ್ನನ್ನು ಮರೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನೇಮಿತ ಕಾಲದಲ್ಲಿ ಸಲ್ಲತಕ್ಕ ಅರ್ಪಣೆಯ ಕಟ್ಟಿಗೆಗಳನ್ನೂ, ಪ್ರಥಮ ಫಲದ ವಿಷಯವಾಗಿ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ಇದನ್ನು ಸಹ ನನ್ನ ಮೇಲಿನ ನಿಮ್ಮ ದಯೆಯೊಂದಿಗೆ ನನ್ನನ್ನು ನೆನಪುಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:31
10 ತಿಳಿವುಗಳ ಹೋಲಿಕೆ  

ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು [ನಿನ್ನ ಪುಸ್ತಕದಿಂದ] ಅಳಿಸಿಬಿಡಬೇಡ.


ಆಮೇಲೆ ನಾನು ಲೇವಿಯರಿಗೆ - ಸಬ್ಬತ್‍ದಿನವನ್ನು ಪರಿಶುದ್ಧದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಬಂದು ಬಾಗಲುಗಳನ್ನು ಕಾಯಬೇಕು ಎಂದು ಆಜ್ಞಾಪಿಸಿದೆನು. ನನ್ನ ದೇವರೇ ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು ನಿನ್ನ ಮಹಾಕೃಪೆಗನುಸಾರವಾಗಿ ನನ್ನನ್ನು ಕನಿಕರಿಸು.


ಯೆಹೋವನೇ, ನನ್ನನ್ನು ನೆನಪುಮಾಡಿಕೊಂಡು ನಿನ್ನ ಪ್ರಜೆಗೆ ತೋರಿಸುವ ದಯೆಯನ್ನು ನನಗೂ ತೋರಿಸು. ನನ್ನನ್ನು ರಕ್ಷಿಸಲಿಕ್ಕೆ ಬಾ,


ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ದ್ರೋಹಗಳನ್ನೂ ಮನಸ್ಸಿನಲ್ಲಿಡದೆ ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಸು.


ಧರ್ಮಶಾಸ್ತ್ರವಿಧಿಗನುಸಾರವಾಗಿ ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮೇಲೆ ಬೆಂಕಿಯುರಿಸುವದಕ್ಕಾಗಿ ವರುಷ ವರುಷ ನೇವಿುತವಾದ ಕಾಲಗಳಲ್ಲಿ ನಮ್ಮ ದೇವಾಲಯಕ್ಕೆ ಕಟ್ಟಿಗೆ ದೊರಕುವ ಹಾಗೆ ಆಯಾಗೋತ್ರಾನುಸಾರ ಕಾಷ್ಠದಾನ ಮಾಡತಕ್ಕವರು ಇಂಥವರು ಎಂಬದನ್ನು ಯಾಜಕರೂ ಲೇವಿಯರೂ ಸಾಧಾರಣ ಜನರೂ ಆಗಿರುವ ನಮ್ಮಲ್ಲಿ ಚೀಟುಹಾಕಿ ಗೊತ್ತುಮಾಡುತ್ತೇವೆ;


ಯೇಸುವೇ, ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಸಿಕೋ ಅಂದನು.


ನನ್ನ ದೇವರೇ, ನಾನು ಆ ಜನರಿಗೋಸ್ಕರ ಮಾಡಿದ್ದೆಲ್ಲವನ್ನೂ ನನ್ನ ಹಿತಕ್ಕಾಗಿ ನೆನಪು ಮಾಡಿಕೋ.


ನಮ್ಮ ಭೂವಿುಯ ಮತ್ತು ಎಲ್ಲಾ ಹಣ್ಣಿನ ಮರಗಳ ಪ್ರಥಮ ಫಲಗಳನ್ನು ಪ್ರತಿವರುಷವೂ ಯೆಹೋವನ ಆಲಯಕ್ಕೆ ತಂದುಕೊಡುವೆವು;


ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿದ ಭಾಗದ ದಶಮಾಂಶವನ್ನು ದೇವಾಲಯದ ಬಂಡಾರದ ಕೊಠಡಿಗಳಲ್ಲಿಡಬೇಕು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು