Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:15 - ಕನ್ನಡ ಸತ್ಯವೇದವು J.V. (BSI)

15 ಬುಗ್ಗೆಬಾಗಲನ್ನು ಜೀರ್ಣೋದ್ಧಾರ ಮಾಡಿದವನು ವಿುಚ್ಪದ ನಾಡೊಡೆಯನೂ ಕೊಲ್ಹೋಜೆಯ ಮಗನೂ ಆದ ಶಲ್ಲೂನ್; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ ಕದ ತಿರುಗಣಿ ಅಗುಳಿಗಳನ್ನು ಹಚ್ಚಿ ದಾವೀದನಗರದಿಂದಿಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಕೊಳದ ಗೋಡೆಯನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಬುಗ್ಗೆ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಮಿಚ್ಪದ ಒಡೆಯನೂ, ಕೊಲ್ಹೋಜೆಯ ಮಗನೂ ಆದ ಶಲ್ಲೂನ್. ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿ ದಾವೀದ ನಗರದಿಂದ ಇಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಕೊಳದ ಗೋಡೆಯನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಬುಗ್ಗೆಬಾಗಿಲನ್ನು ದುರಸ್ತಿಪಡಿಸಿದವನು ಮಿಚ್ಪದ ನಾಡೊಡೆಯನೂ ಕೊಲ್ಹೋಜೆಯ ಮಗನೂ ಆದ ಶಲ್ಲೂನ್; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ, ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿ ದಾವೀದನಗರದಿಂದಿಳಿದು ಬರುವ ಸೋಪಾನಗಳ ಈಚೆ, ಅರಸನ ತೋಟದ ಬಳಿಯಲ್ಲಿರುವ ಶಿಲೋವ ಕೊಳದ ಗೋಡೆಯನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಮಿಚ್ಪ ಜಿಲ್ಲಾಧಿಕಾರಿಯಾದ ಶಲ್ಲೂನನು ಬುಗ್ಗೆಬಾಗಿಲನ್ನು ರಿಪೇರಿಮಾಡಿದನು. ಶಲ್ಲೂನನು ಕೊಲ್ಹೋಜಿಯನ ಮಗ. ಬಾಗಿಲಿಗೆ ಕದ, ತಿರುಗಣಿ, ಅಗುಳಿಗಳನ್ನಿಟ್ಟು ಭದ್ರಪಡಿಸಿದನು. ನಂತರ ಗೋಡೆಯನ್ನು ರಾಜನ ತೋಟದ ಸಮೀಪದಲ್ಲಿದ್ದ ಸಿಲೋವಕೊಳದ ತನಕ ಮುಂದುವರಿಸಿ ದಾವೀದನಗರಕ್ಕೆ ಪ್ರವೇಶಿಸುವ ಮೆಟ್ಟಿಲುಗಳ ತನಕ ಗೋಡೆಯನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಬುಗ್ಗೆಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಮಿಚ್ಪದ ನಾಡೊಡೆಯನೂ, ಕೊಲ್ಹೋಜೆಯ ಮಗನೂ ಆದ ಶಲ್ಲೂನ್, ಇವನು ಅದರ ಗೋಡೆಯನ್ನು ಕಟ್ಟಿ, ಅದಕ್ಕೆ ಮಾಳಿಗೆಯನ್ನು ಹಾಕಿ, ಕದ ತಿರುಗಣಿ ಅಗುಳಿಗಳನ್ನು ಹಚ್ಚಿ, ದಾವೀದನ ನಗರದಿಂದಿಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಶಿಲೋವ ಕೊಳದ ಗೋಡೆಯನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:15
19 ತಿಳಿವುಗಳ ಹೋಲಿಕೆ  

ನೀನು ಸಿಲೋವ ಕೊಳಕ್ಕೆ ಹೋಗಿ ತೊಳಕೋ ಅಂದನು. (ಸಿಲೋವ ಎಂಬ ಮಾತಿಗೆ ಕಳುಹಿಸಲ್ಪಟ್ಟವನು ಎಂದರ್ಥ.) ಅವನು ಹೋಗಿ ತೊಳಕೊಂಡು ಕಣ್ಣು ಹೊಂದಿದವನಾಗಿ ಬಂದನು.


ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ಉಪೇಕ್ಷಿಸಿ ರೆಚೀನನನ್ನೂ ರೆಮಲ್ಯನ ಮಗನನ್ನೂ ನಂಬಿ ಮೆರೆದದ್ದರಿಂದ


ಇವರು ಬುಗ್ಗೆ ಬಾಗಲನ್ನು ಹಾದು ನೆಟ್ಟಗೆ ದಾವೀದನಗರದ ಸೋಪಾನಗಳ ಮಾರ್ಗವಾಗಿ ಗೋಡೆಯನ್ನನುಸರಿಸಿ ಅರಮನೆಯ ಮೇಲಣ ದಿನ್ನೆಯನ್ನು ಹತ್ತಿ ಪೂರ್ವದಿಕ್ಕಿನಲ್ಲಿರುವ ನೀರು ಬಾಗಲಿನವರೆಗೆ ಹೋದರು.


ಇಲ್ಲವೆ ಸಿಲೊವಾವಿುನಲ್ಲಿ ಬುರುಜುಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇವಿುನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಅಪರಾಧಿಗಳೆಂದು ಭಾವಿಸುತ್ತೀರೋ?


ಅಲ್ಲಿಂದ ಬುಗ್ಗೆಬಾಗಲನ್ನು ಹಾದು ಅರಸನ ಕೊಳಕ್ಕೆ ಹೋದೆನು.


ಆಗ ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ವಿುಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಮಧ್ಯೆ ಅವನ ಸಂಗಡ ವಾಸಿಸಿದನು.


ತಿಪ್ಪೆಬಾಗಲನ್ನು ಜೀರ್ಣೋದ್ಧಾರಮಾಡಿದವನು ಬೇತ್‍ಹಕ್ಕೆರೆವಿುನ ನಾಡೊಡೆಯನೂ ರೇಕಾಬನ ಮಗನೂ ಆದ ಮಲ್ಕೀಯನು; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿದನು.


ಇವನ ಸಮೀಪದಲ್ಲಿ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಯೆರೂಸಲೇವಿುನ ಅರೆನಾಡೊಡೆಯನೂ ಹಲ್ಲೊಹೇಷನ ಮಗನೂ ಆದ ಶಲ್ಲೂಮನೂ ಅವನ ಕುಮಾರಿಯರೂ.


ಇದರ ಆಚೆಗೆ ಯೆರೂಸಲೇವಿುನ ಅರೆನಾಡೊಡೆಯನೂ ಹೂರನ ಮಗನೂ ಆದ ರೆಫಾಯ.


ಅಲ್ಲಿಂದ ಹೊಳೆಯಾಚೆಯ ದೇಶಾಧಿಪತಿಯ ನ್ಯಾಯಸ್ಥಾನದವರೆಗೆ ಗಿಬ್ಯೋನಿನವನಾದ ಮೆಲೆಟ್ಯ, ಮೇರೋನೋತಿನವನಾದ ಯಾದೋನ್ ಇವರೂ ಗಿಬ್ಯೋನ್ ಮತ್ತು ವಿುಚ್ಪ ಊರುಗಳವರೂ ಜೀರ್ಣೋದ್ಧಾರಮಾಡಿದರು.


ಮೇಲಣ ಗೀಹೋನ್ ಎಂಬ ಬುಗ್ಗೆಗೆ ಕಟ್ಟೆಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಸಾರ್ಥಕನಾದನು.


ಒಂಭತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಬಳಿಯಲ್ಲಿರುವ ಬಾಗಲಿನಿಂದ ಓಡಿಹೋದರು; ಅದು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋಗುತ್ತಿರುವಾಗ


(ಇಸ್ರಾಯೇಲ್ಯರು ಕೂಡಿಕೊಂಡು ವಿುಚ್ಪೆಗೆ ಬಂದಿದ್ದಾರೆಂಬ ವರ್ತಮಾನವು ಬೆನ್ಯಾಮೀನ್ಯರಿಗೆ ಮುಟ್ಟಿತು.) ಇಸ್ರಾಯೇಲ್ಯರು - ಈ ದುಷ್ಟತನವು ಹೇಗೆ ನಡೆಯಿತೆಂದು ತಿಳಿಸಿರಿ ಎಂದು ಕೇಳಲು


ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲ್ಯರೆಲ್ಲರೂ ಏಕಮನಸ್ಸಿನಿಂದ ಹೊರಟು ವಿುಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ನೆರೆದರು.


ಆಗ ನಾನು ಅವರಿಗೆ - ನಮ್ಮ ದುರವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೋ; ಯೆರೂಸಲೇಮ್ ಪಟ್ಟಣವು ಹಾಳುಬಿದ್ದದೆ, ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ; ಬನ್ನಿರಿ, ಯೆರೂಸಲೇವಿುನ ಗೋಡೆಯನ್ನು ಕಟ್ಟೋಣ. ಹೀಗೆ ಮಾಡಿದರೆ ನಮ್ಮ ಮೇಲಣ ನಿಂದೆಯು ಹೋಗುವದು ಎಂದು ಹೇಳಿದೆನು.


ಇವನ ಸಮೀಪದಲ್ಲಿ ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಗೋಡೆಯ ಮೂಲೆಯಲ್ಲಿರುವ ಆಯುಧಶಾಲೆಗೆ ಹೋಗುವ ಮೆಟ್ಲುಗಳ ಎದುರಿಗಿರುವ ಭಾಗವನ್ನು ವಿುಚ್ಪದ ಅಧಿಕಾರಿಯೂ ಯೇಷೂವನ ಮಗನೂ ಆದ ಏಜೆರನು ಜೀರ್ಣೋದ್ಧಾರ ಮಾಡಿದನು.


ಬೆಳೆಯುವ ಗಿಡಗಳ ತೋಪುಗಳಿಗೆ ನೀರು ಹಾಯಿಸುವದಕ್ಕೆ ಕುಂಟೆಗಳನ್ನು ತೆಗೆಯಿಸಿಕೊಂಡೆನು.


ದಾವೀದನು ಆ ಕೋಟೆಗೆ ದಾವೀದನಗರವೆಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಾ ಅದರ ಸುತ್ತಲೂ ವಿುಲ್ಲೋವಿನಿಂದ ಪ್ರಾರಂಭಿಸಿ ಒಳಗಣ ಪೌಳಿಗೋಡೆಯನ್ನು ಕಟ್ಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು