Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:5 - ಕನ್ನಡ ಸತ್ಯವೇದವು J.V. (BSI)

5 ತೆಕೋವದ ಶ್ರೀಮಂತರಾದರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ತೆಕೋವದವರಲ್ಲಿ ಶ್ರೀಮಂತರಾದರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ತೆಕೋವದ ಶ್ರೀಮಂತರಾದರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ತೆಕೋವದವರು ಅಲ್ಲಿಂದಾಚೆಗೆ ಗೋಡೆ ಕಟ್ಟಿದರು. ಆದರೆ ಅವರ ನಾಯಕರು ತಮ್ಮ ರಾಜ್ಯಪಾಲನಾದ ನೆಹೆಮೀಯನಿಗಾಗಿ ಕೆಲಸಮಾಡಲು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅಲ್ಲಿಂದ ಮುಂದಕ್ಕೆ ತೆಕೋವದವರು ಗೋಡೆಯನ್ನು ದುರಸ್ತಿ ಮಾಡಿಸಿದರು. ಆದರೆ ತೆಕೋವದವರಲ್ಲಿ ಶ್ರೇಷ್ಠರಾದವರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:5
17 ತಿಳಿವುಗಳ ಹೋಲಿಕೆ  

ಆ ದೊಡ್ಡ ಮೂಲೆಬುರುಜಿನ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ಜೀರ್ಣೋದ್ಧಾರಮಾಡಿದರು.


ತೆಕೋವದಿಂದ ಒಬ್ಬ ಬುದ್ದಿವಂತೆಯಾದ ಸ್ತ್ರೀಯನ್ನು ಕರೇಕಳುಹಿಸಿ ಆಕೆಗೆ - ನೀನು ಪ್ರಿಯರನ್ನು ಕಳಕೊಂಡು ಬಹುದಿವಸಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು


ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ. ನಿಮ್ಮೊಳಗೆ ಲೌಕಿಕ ದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಅಧಿಕಾರಿಗಳೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.


ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೊರಲಾರದ ನೊಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?


ನಾನು ಸಾತ್ವಿಕನೂ ದೀನಮನಸ್ಸುಳ್ಳವನೂ ಆಗಿರುವದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಲ್ಲಿ ಕಲಿತುಕೊಳ್ಳಿರಿ;


ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮುಂಚೆ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕಂಡುಬಂದ ದೈವೋಕ್ತಿಗಳು.


ಇದಲ್ಲದೆ ನಾನು ಆ ಎಲ್ಲಾ ಮಾತುಗಳನ್ನು ಅನುಸರಿಸಿ ಯೆಹೂದದ ಅರಸನಾದ ಚಿದ್ಕೀಯನಿಗೂ ಹೀಗೆ ನುಡಿದೆನು - ಬಾಬೆಲಿನ ಅರಸನ ನೊಗಕ್ಕೆ ಹೆಗಲುಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಿರಿ, ಆಗ ಬದುಕುವಿರಿ.


ಯಾವ ಜನಾಂಗ, ಯಾವ ರಾಜ್ಯ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲಿಕ್ಕೂ ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಡಲಿಕ್ಕೂ ಒಪ್ಪದೋ ಆ ಜನಾಂಗವನ್ನು ನಾನು ಖಡ್ಗ ಕ್ಷಾಮವ್ಯಾಧಿಗಳಿಂದ ದಂಡಿಸುತ್ತಾ ಬಂದು ಕಡೆಯಲ್ಲಿ ಅವನ ಕೈಯಿಂದಲೇ ನಿರ್ಮೂಲ ಮಾಡಿಸುವೆನು. ಇದು ಯೆಹೋವನ ನುಡಿ.


ಇದೇ ಯೆಹೋವನ ನುಡಿ - ನೀನು ಕಣ್ಣಿನೊಗಗಳನ್ನು ಮಾಡಿ ನಿನ್ನ ಹೆಗಲಿಗೆ ಹಾಕಿಕೊಂಡು


ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ; ಯುದ್ಧವೀರರ ಜೊತೆಯಲ್ಲಿ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; ಅವರನ್ನು ಶಪಿಸೇ ಶಪಿಸಿರಿ.


ಅಲ್ಲಿಂದ ಮುಂದಕ್ಕೆ ಗೋಡೆಯನ್ನು ಜೀರ್ಣೋದ್ಧಾರಮಾಡಿಸಿದವನು ಊರೀಯನ ಮಗನೂ ಹಕ್ಕೋಚನ ಮೊಮ್ಮಗನೂ ಆಗಿರುವ ಮೆರೇಮೋತ್; ಆಮೇಲೆ ಬೆರೆಕ್ಯನ ಮಗನೂ ಮೆಷೇಜಬೇಲನ ಮೊಮ್ಮಗನೂ ಆಗಿರುವ ಮೆಷುಲ್ಲಾಮ್; ಆಚೆಗೆ ಬಾನನ ಮಗನಾದ ಚಾದೋಕ್; ಮುಂದಕ್ಕೆ ತೆಕೋವದವರು.


ಹಳೆಯದು ಎಂಬ ಬಾಗಲನ್ನು ಜೀರ್ಣೋದ್ಧಾರ ಮಾಡಿದವರು ಪಾಸೇಹನ ಮಗನಾದ ಯೋಯಾದನೂ ಬೆಸೋದ್ಯನ ಮಗನಾದ ಮೆಷುಲ್ಲಾಮನೂ. ಇವರು ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿದರು.


ಅವು ಯಾವವಂದರೆ - ಬೇತ್ಲೆಹೆಮ್, ಏತಾಮ್, ತೆಕೋವ,


ಬೆನ್ಯಾಮೀನ್ ಕುಲದವರೇ, ಯೆರೂಸಲೇವಿುನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್‍ಹಕ್ಕೆರೆವಿುನಲ್ಲಿ ಧ್ವಜವನ್ನೆತ್ತಿರಿ; ಏಕಂದರೆ ಅತಿನಾಶಕವಾದ ವಿಪತ್ತು ಬಡಗಲಿಂದ ತಲೆದೋರುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು