Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:10 - ಕನ್ನಡ ಸತ್ಯವೇದವು J.V. (BSI)

10 ಇತ್ತ ಯೆಹೂದ್ಯರು - ಹೊರೆಹೊರುವವರ ಬಲವು ಕುಂದಿ ಹೋಯಿತು, ಧೂಳಿನರಾಶಿಯು ವಿಪರೀತವಾಗಿದೆ; ಈ ಗೋಡೆಯನ್ನು ಕಟ್ಟುವದು ನಮ್ಮಿಂದಾಗದು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇತ್ತ ಯೆಹೂದ್ಯರು, “ಹೊರೆ ಹೊರುವವರ ಬಲವು ಕುಂದಿಹೋಯಿತು, ಧೂಳಿನ ರಾಶಿಯು ವಿಪರೀತವಾಗಿದೆ; ಈ ಗೋಡೆಯನ್ನು ಕಟ್ಟುವುದು ನಮ್ಮಿಂದ ಆಗುವುದಿಲ್ಲ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇತ್ತ ಯೆಹೂದ್ಯರೇ, “ಹೊರೆಹೊರುವವರ ಬಲ ಕುಂದಿಹೋಯಿತು. ಧೂಳಿನ ರಾಶಿ ವಿಪರೀತ ಆಗಿದೆ; ಈ ಗೋಡೆಯನ್ನು ಕಟ್ಟುವುದು ನಮ್ಮಿಂದಾಗದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಸಮಯದಲ್ಲಿ ಯೆಹೂದದ ಜನರು, “ಕೆಲಸಗಾರರು ಆಯಾಸಗೊಳ್ಳುತ್ತಿದ್ದಾರೆ; ದಾರಿಯಲ್ಲೆಲ್ಲಾ ತುಂಬಾ ಧೂಳು ಮತ್ತು ಕಸ ಇರುವುದರಿಂದ ನಾವು ಗೋಡೆಕಟ್ಟಡ ಕೆಲಸವನ್ನು ಮುಂದುವರಿಸಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಯೆಹೂದದವರು, “ಹೊರೆ ಹೊರುವವರ ಬಲವು ಕುಂದಿಹೋಯಿತು; ಕಲ್ಲುಮಣ್ಣಿನ ರಾಶಿ ಬಹಳವಾಗಿದೆ; ಈ ಗೋಡೆಯನ್ನು ಪುನಃ ಕಟ್ಟುವುದು ನಮ್ಮಿಂದಾಗದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:10
10 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಯೆಹೋವನ ಆಲಯವನ್ನು ಕಟ್ಟುವದಕ್ಕೆ ಸಮಯವು ಇನ್ನೂ ಬಂದಿಲ್ಲ ಎಂದು ಈ ಜನರು ಅಂದುಕೊಳ್ಳುತ್ತಾರಲ್ಲಾ.


ನರಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆಹಾಕಿ ತನ್ನ ಸೈನಿಕರಿಂದ ಬಹುಶ್ರಮದ ಸೇವೆಯನ್ನು ಮಾಡಿಸಿದ್ದಾನೆ; ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲು ಕಾಯಿಕಟ್ಟಿದೆ; ಆದರೂ ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ ಅವನ ಸೈನಿಕರಿಗಾಗಲಿ ತೂರಿನಿಂದ ಸಂಬಳವೇನೂ ಸಿಕ್ಕಲಿಲ್ಲ.


ಅವರಲ್ಲಿ ಹೊರೆಹೊರುವದಕ್ಕಾಗಿ ಎಪ್ಪತ್ತು ಸಾವಿರ ಮಂದಿಯನ್ನೂ ಕಲ್ಲುಗಣಿಗಳಲ್ಲಿ ಕೆಲಸಮಾಡುವದಕ್ಕಾಗಿ ಎಂಭತ್ತು ಸಾವಿರ ಮಂದಿಯನ್ನೂ ಕೆಲಸದವರ ಮೇಲ್ವಿಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿಯನ್ನೂ ನೇವಿುಸಿದನು.


ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರಾಯೇಲ್ಯರಿಗೆ ಅಧೈರ್ಯವನ್ನು ಹುಟ್ಟಿಸಿದದರಿಂದ ಇಸ್ರಾಯೇಲ್ಯರು ತಮಗೆ ಯೆಹೋವನು ವಾಗ್ದಾನಮಾಡಿದ ದೇಶಕ್ಕೆ ಹೋಗಲೇ ಇಲ್ಲ.


ಆದರೆ ಅವನ ಜೊತೆಯಲ್ಲಿ ಹೋದವರು - ಆ ಜನರು ನಮಗಿಂತ ಬಲಿಷ್ಠರು; ಅವರ ಮೇಲೆ ಹೋಗುವದಕ್ಕೆ ನಮಗೆ ಶಕ್ತಿಸಾಲದು ಅಂದರು.


ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನಡಿಸುತ್ತಿದ್ದರು; ಎಲ್ಲಾ ಲೇಖಕರೂ ಅಧಿಕಾರಿಗಳೂ ದ್ವಾರಪಾಲಕರೂ ಲೇವಿಯರೇ.


ತನ್ನ ಸಹೋದರರ ಮುಂದೆಯೂ ಸಮಾರ್ಯದ ದಂಡಿನವರ ಮುಂದೆಯೂ - ನಿತ್ರಾಣಿಗಳಾದ ಈ ಯೆಹೂದ್ಯರು ಮಾಡುವದೇನು? ಇವರು ತಮ್ಮನ್ನು ಬಲಪಡಿಸಿಕೊಳ್ಳಬೇಕೆಂದಿರುವರೋ? ಯಜ್ಞವನ್ನರ್ಪಿಸುವರೋ? ಈ ಹೊತ್ತೇ ಈ ಕೆಲಸವನ್ನು ತೀರಿಸುವರೇನು? ಸುಟ್ಟು ಹೋದ ಪಟ್ಟಣದ ಧೂಳಿನ ರಾಶಿಯೊಳಗೆ ಹುಗಿದುಹೋದ ಕಲ್ಲುಗಳನ್ನು ಬದುಕಿಸುವರೇನೋ ಎಂದು ಹೇಳಿ ಯೆಹೂದ್ಯರನ್ನು ಗೇಲಿಮಾಡಿದನು.


ನಾವಾದರೋ ನಮ್ಮ ದೇವರಿಗೆ ಮೊರೆಯಿಟ್ಟು ಅವರಿಗೆ ವಿರುದ್ಧವಾಗಿ ಅವರು ಬರುವ ದಾರಿಯಲ್ಲಿ ಹಗಲಿರುಳು ಕಾವಲಿಟ್ಟೆವು.


ಅತ್ತ ನಮ್ಮ ವಿರೋಧಿಗಳು - ಅವರಿಗೆ ತಿಳಿಯದೆಯೂ ಗೋಚರವಾಗದೆಯೂ ಫಕ್ಕನೆ ಅವರೊಳಗೆ ನುಗ್ಗಿ ಅವರನ್ನು ಕೊಂದು ಕೆಲಸವನ್ನು ನಿಲ್ಲಿಸಿಬಿಡೋಣ ಅಂದುಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು