Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:1 - ಕನ್ನಡ ಸತ್ಯವೇದವು J.V. (BSI)

1 ತರುವಾಯ ಸಾಧಾರಣಜನರೂ ಅವರ ಹೆಂಡತಿಯರೂ ತಮ್ಮ ಬಂಧುಗಳಾದ ಯೆಹೂದ್ಯರಿಗೆ ವಿರುದ್ಧವಾಗಿ ಬಹಳ ಗುಣುಗುಟ್ಟತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಜನರೂ ಅವರ ಹೆಂಡತಿಯರೂ ತಮ್ಮ ಬಂಧುಗಳಾದ ಯೆಹೂದ್ಯರಿಗೆ ವಿರುದ್ಧವಾಗಿ ಬಹಳ ಗೋಳಾಡ ತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕೆಲವು ದಿನಗಳ ನಂತರ ಜನಸಾಮಾನ್ಯರು ಹಾಗು ಅವರ ಹೆಂಡತಿಯರು ತಮ್ಮ ಬಂಧುಗಳಾದ ಯೆಹೂದ್ಯರಿಗೆ ವಿರುದ್ಧ ಕಟುವಾಗಿ ಗುಣುಗುಟ್ಟತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೂದ್ಯರಲ್ಲಿ ಎಷ್ಟೋ ಬಡಜನರು ತಮ್ಮ ಬಂಧುಗಳ ವಿಷಯದಲ್ಲಿ ದೂರು ಹೇಳಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ತರುವಾಯ ಜನರೂ, ಅವರ ಹೆಂಡತಿಯರೂ ತಮ್ಮ ಸಹೋದರರಾದ ಯೆಹೂದ್ಯರ ವಿರುದ್ಧ ಬಹಳ ಗೋಳಾಡ ತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:1
15 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನ ದ್ರಾಕ್ಷೆಯ ತೋಟವು ಇಸ್ರಾಯೇಲ್ಯರ ಮನೆತನ, ಯೆಹೂದದ ಜನವೋ ಆತನ ಇಷ್ಟದ ಗಿಡವೇ; ಆತನು ನ್ಯಾಯವನ್ನು ನಿರೀಕ್ಷಿಸಿದಾಗ ಆಹಾ, ಸಿಕ್ಕಿದ್ದು ನರಹತ್ಯವೇ; ಧರ್ಮವನ್ನು ಎದುರುನೋಡಿದಾಗ ಆಹಾ, ದೊರಕಿದ್ದು ಅರಚಾಟವೇ.


ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಅಗೋ, ಆ ಕೂಲಿ ನಿಮ್ಮ ಮೇಲೆ ಕೂಗಿಕೊಳ್ಳುತ್ತದೆ; ಮತ್ತು ಕೊಯಿದವರ ಕೂಗು ಸಕಲಸೇನಾಧಿಪತಿಯಾಗಿರುವ ಕರ್ತನ ಕಿವಿಗಳಲ್ಲಿ ಬಿದ್ದಿದೆ.


ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಎದುರಾಗಿ ಬಂದು - ಜನರೇ, ನೀವು ಸಹೋದರರಲ್ಲವೇ? ನೀವೇಕೆ ಒಬ್ಬರಿಗೊಬ್ಬರು ಅನ್ಯಾಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನಪಡಿಸಬೇಕೆಂದಿದ್ದನು.


ದೇವರಾದುಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡುವಲ್ಲಿ ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯ ತೀರಿಸುವನೆಂದು ನಿಮಗೆ ಹೇಳುತ್ತೇನೆ.


ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ಮಾಡಿದ್ದರು, ಆತನು ದಿಕ್ಕಿಲ್ಲದವರ ಮೊರೆಯನ್ನು ಆಲೈಸಿದ್ದನು.


ಆಗ ಯೆಹೋವನು - ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ. ಬಿಟ್ಟೀಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು; ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.


ನಾನೂ ನನ್ನ ಸಹೋದರರೂ ಸೇವಕರೂ ಮೈಗಾವಲಿನವರೂ ಸ್ನಾನಸಮಯದಲ್ಲಿ ಹೊರತು ಬೇರೆ ಸಮಯದಲ್ಲಿ ನಮ್ಮ ವಸ್ತ್ರಗಳನ್ನು ತೆಗೆದುಹಾಕಲಿಲ್ಲ.


ಆಮೇಲೆ ಯೆಹೋವನು ಯೆರೆಮೀಯನಿಗೆ ಒಂದು ಮಾತನ್ನು ದಯಪಾಲಿಸಿದನು. ಇಷ್ಟರೊಳಗೆ ಅರಸನಾದ ಚಿದ್ಕೀಯನು ಯೆರೂಸಲೇವಿುನವರೆಲ್ಲರೊಂದಿಗೆ ಸೇರಿ -


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲಿನ ಪ್ರಭುಗಳೇ, ಇನ್ನು ಸಾಕು, ಸಾಕು; ಕೊಳ್ಳೆಯನ್ನೂ ಬಲಾತ್ಕಾರವನ್ನೂ ತ್ಯಜಿಸಿ ನೀತಿನ್ಯಾಯಗಳನ್ನು ನಡಿಸಿರಿ; ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿರಿ; ಇದು ಕರ್ತನಾದ ಯೆಹೋವನ ನುಡಿ,


ಇನ್ನೊಂದನ್ನು ನಡಿಸುತ್ತೀರಿ - ಯೆಹೋವನ ಯಜ್ಞವೇದಿಯನ್ನು ಕಣ್ಣೀರಿನಿಂದಲೂ ಅಳುವಿಕೆಯಿಂದಲೂ ನರಳಾಟದಿಂದಲೂ ತುಂಬಿಸಿ ಮುಚ್ಚುತ್ತೀರಿ; ಆದಕಾರಣ ಆತನು ನಿಮ್ಮ ನೈವೇದ್ಯವನ್ನು ಇನ್ನು ಲಕ್ಷಿಸನು, ನಿಮ್ಮ ಕೈಯಿಂದ ಅದನ್ನು ಪ್ರಸನ್ನನಾಗಿ ಸ್ವೀಕರಿಸನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು