Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:16 - ಕನ್ನಡ ಸತ್ಯವೇದವು J.V. (BSI)

16 ಈ ಸುದ್ದಿಯು ನಮ್ಮ ವಿರೋಧಿಗಳಾದ ಸುತ್ತಣ ಎಲ್ಲಾ ಜನಾಂಗಗಳವರಿಗೆ ಮುಟ್ಟಿದಾಗ ಅವರು ಭಯವುಳ್ಳವರಾಗಿ ಸೊಕ್ಕನ್ನು ಬಿಟ್ಟು ಬಹಳ ಮನಗುಂದಿದವರಾದರು. ಈ ಕಾರ್ಯವು ನಮ್ಮ ದೇವರಿಂದಲೇ ಪೂರೈಸಿತು ಎಂದು ಅವರಿಗೆ ಮಂದಟ್ಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಈ ಸುದ್ದಿಯು ನಮ್ಮ ವಿರೋಧಿಗಳಾದ ಸುತ್ತಣ ಎಲ್ಲಾ ಜನಾಂಗದವರಿಗೆ ತಲುಪಿದಾಗ ಅವರು ಭಯವುಳ್ಳವರಾಗಿ ಸೊಕ್ಕನ್ನು ಬಿಟ್ಟು ಬಹಳ ಮನಗುಂದಿ ತಗ್ಗಿ ಹೋದರು. ಈ ಕಾರ್ಯವು ದೇವರ ಸಹಾಯದಿಂದಲೇ ಪೂರ್ಣಗೊಂಡಿತು ಎಂಬುದು ಅವರಿಗೆ ತಿಳಿದುಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಈ ಸುದ್ದಿ ಸುತ್ತ-ಮುತ್ತಲಿನ ನಮ್ಮ ವಿರೋಧಿಗಳಾದ ಜನಾಂಗಗಳಿಗೆ ಮುಟ್ಟಿತು. ಅವರು ಭಯಭೀತರಾದರು. ಸೊಕ್ಕು ಮುರಿದವರಾಗಿ ಹಾಗೇ ಕುಗ್ಗಿಹೋದರು. ಈ ಕಾರ್ಯ ನಮ್ಮ ದೇವರಿಂದಲೇ ಪೂರ್ಣಗೊಂಡಿತು ಎಂದು ಅವರಿಗೆ ಮನದಟ್ಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಮ್ಮ ವೈರಿಗಳೆಲ್ಲಾ ಕೆಲಸ ಸಂಪೂರ್ಣವಾದದ್ದನ್ನು ಕೇಳಿದರು. ನಮ್ಮ ಸುತ್ತಮುತ್ತಲಿನ ಪ್ರಾಂತ್ಯಗಳವರಿಗೂ ದೇಶಗಳವರಿಗೂ ಈ ಸುದ್ದಿಮುಟ್ಟಿತು. ಆಗ ಅವರ ಧೈರ್ಯವು ಕುಗ್ಗಿತು. ಯಾಕೆಂದರೆ ಈ ಮಹಾಕಾರ್ಯವನ್ನು ನಮ್ಮ ದೇವರ ಸಹಾಯದಿಂದಲೇ ನಾವು ಮಾಡಿದ್ದೇವೆಂದು ಅವರಿಗೆ ಅರ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಈ ಸುದ್ದಿ ಸುತ್ತಮುತ್ತಲಿನ ನಮ್ಮ ವಿರೋಧಿಗಳಾದ ಜನಾಂಗಗಳಿಗೆ ಮುಟ್ಟಿತು. ಅವರು ಭಯಭೀತರಾದರು. ಸೊಕ್ಕು ಮುರಿದವರಾಗಿ ಹಾಗೇ ಕುಗ್ಗಿಹೋದರು. ಈ ಕಾರ್ಯ ನಮ್ಮ ದೇವರಿಂದಲೇ ಪೂರ್ಣಗೊಂಡಿತು ಎಂದು ಅವರಿಗೆ ಮನದಟ್ಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:16
16 ತಿಳಿವುಗಳ ಹೋಲಿಕೆ  

ಯೊರ್ದನಿನ ಪಶ್ಚಿಮದಲ್ಲಿದ್ದ ಎಲ್ಲಾ ಅಮೋರಿಯರ ಅರಸರೂ ಸಮುದ್ರದ ಬಳಿಯಲ್ಲಿದ್ದ ಸರ್ವ ಕಾನಾನ್ ರಾಜರೂ ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನನ್ನು ಬತ್ತಿಸಿ ಅವರನ್ನು ದಾಟಿಸಿದನೆಂದು ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿವಿುತ್ತವಾಗಿ ಅವರಿಗೆ ಧೈರ್ಯವಿಲ್ಲವಾಯಿತು.


ಆಗ ನಮ್ಮ ಬಾಯಿ ಬಲು ನಗೆಯಿಂದಲೂ ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು - ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆಂದು ತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.


ಸನ್ಬಲ್ಲಟನೂ ಟೋಬೀಯನೂ ಅರಬಿಯರೂ ಅಮ್ಮೋನಿಯರೂ ಅಷ್ಡೋದಿನವರೂ ಯೆರೂಸಲೇವಿುನ ಗೋಡೆಯ ಜೀರ್ಣೋದ್ಧಾರಕಾರ್ಯವು ಮುಂದರಿದು ಅದರ ಸಂದುಗಳು ತಿರಿಗಿ ಕೂಡುತ್ತಾ ಬರುವದನ್ನು ಕೇಳಿ ಬಹುಕೋಪವುಳ್ಳವರಾಗಿ -


ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿಯು ಸನ್ಬಲ್ಲಟನಿಗೆ ಮುಟ್ಟಿದಾಗ ಅವನು ಬಲು ಹೊಟ್ಟೆಕಿಚ್ಚೂ ಸಿಟ್ಟೂ ಉಳ್ಳವನಾಗಿ


ಇಸ್ರಾಯೇಲ್ಯರ ಹಿತಚಿಂತಕನೊಬ್ಬನು ಬಂದನೆಂಬ ವರ್ತಮಾನವು ಹೋರೋನಿನ ಸನ್ಬಲ್ಲಟನಿಗೂ ಅಮ್ಮೋನ್‍ದೇಶದವನಾದ ಟೋಬೀಯ ಎಂಬ ದಾಸನಿಗೂ ಮುಟ್ಟಿದಾಗ ಅವರು ಬಹಳವಾಗಿ ಹೊಟ್ಟೆಕಿಚ್ಚುಪಟ್ಟರು.


ಹೀಗಿರುವದರಿಂದ ನಾನು ನಿಮಗೆ ಹೇಳುವದೇನಂದರೆ ನೀವು ಆ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಯಾಕಂದರೆ ಈ ಯೋಚನೆಯು ಅಥವಾ ಈ ಕೆಲಸವು ಮನುಷ್ಯರಿಂದಾಗಿದ್ದರೆ ತಾನೇ ಕೆಡುವದು;


ಯಾಕೋಬ್ಯರಲ್ಲಿ ಶಕುನನೋಡುವದು ಇಲ್ಲ; ಇಸ್ರಾಯೇಲ್ಯರಲ್ಲಿ ಕಣಿಕೇಳುವದು ಇಲ್ಲ. ದೇವರು ತಾನು ಮಾಡುವ ಕೆಲಸವನ್ನು ತತ್ಕಾಲದಲ್ಲೇ ಯಾಕೋಬ್ಯರಿಗೆ ತಿಳಿಸುತ್ತಾನೆ; ಸಮಯೋಚಿತವಾಗಿ ಅದನ್ನು ಇಸ್ರಾಯೇಲ್ಯರಿಗೆ ತೋರಿಸುತ್ತಾನೆ.


ಆತನು ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಬಹು ಕಷ್ಟದಿಂದ ಹೊಡಕೊಂಡು ಹೋದರು. ಆಗ ಐಗುಪ್ತ್ಯರು - ನಾವು ಇಸ್ರಾಯೇಲ್ಯರ ಮುಂದೆ ನಿಲ್ಲಲಾರೆವು, ಓಡಿಹೋಗೋಣ; ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ ಎಂದು ಹೇಳಿಕೊಂಡರು.


ಅದೇ ಸಮಯದಲ್ಲಿ ಯೆಹೂದ್ಯ ಶ್ರೀಮಂತರಿಗೂ ಟೋಬೀಯನಿಗೂ ಬಹಳ ಪತ್ರವ್ಯವಹಾರ ನಡೆಯುತ್ತಿತ್ತು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ ಮಹಿಮೆಯೂ ಆನಂದದ ಬಿರುದೂ ಆಗುವದು.


ಆಕೆಯು ಮಾಳಿಗೆಹತ್ತಿ ಅವರ ಬಳಿಗೆ ಬಂದು ಹೇಳಿದ್ದೇನಂದರೆ - ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿರುವದನ್ನು ಬಲ್ಲೆನು. ನಿಮ್ಮ ನಿವಿುತ್ತ ನಮಗೆ ಮಹಾಭೀತಿಯುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.


ನಮ್ಮ ಎದೆಯೊಡೆದು ಹೋಯಿತು; ನಿಮ್ಮನ್ನು ಎದುರಿಸುವ ಧೈರ್ಯವು ಒಬ್ಬನಲ್ಲಿಯೂ ಇಲ್ಲ. ನಿಮ್ಮ ದೇವರಾದ ಯೆಹೋವನೊಬ್ಬನೇ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ದೇವರು.


ಆಗ ಅವರು ಇದು ನಿನ್ನ ಕೈಕೆಲಸವೆಂದೂ ಯೆಹೋವನಾದ ನೀನೇ ಮಾಡಿದ್ದೆಂದೂ ತಿಳಿದುಕೊಳ್ಳುವರು.


ಚೀಯೋನನ್ನು ದ್ವೇಷಿಸುವವರೆಲ್ಲರು ಅವಮಾನದಿಂದ ಹಿಂದಿರುಗಲಿ.


ಯೆಹೋವನು ಯೆರೂಸಲೇಮನ್ನು ಕಟ್ಟಿಸುತ್ತಿದ್ದಾನೆ; ಚದರಿಹೋಗಿದ್ದ ಇಸ್ರಾಯೇಲ್ಯರನ್ನು ಕೂಡಿಸುತ್ತಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು