Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:1 - ಕನ್ನಡ ಸತ್ಯವೇದವು J.V. (BSI)

1 ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಲಿನ ಮುಂದಿನ ಬೈಲಿನಲ್ಲಿ ಒಟ್ಟಾಗಿ ಕೂಡಿಬಂದು - ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲ್ಯರಿಗೆ ಕೊಟ್ಟ ಧರ್ಮಶಾಸ್ತ್ರದ ಗ್ರಂಥವನ್ನು ತೆಗೆದುಕೊಂಡು ಬರಬೇಕು ಎಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದೆ ಬಯಲಿನಲ್ಲಿ ಒಟ್ಟಾಗಿ ಸೇರಿ ಬಂದರು. ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ತಮ್ಮ ತಮ್ಮ ಪಟ್ಟಣಗಲ್ಲಿ ವಾಸಿಸುತ್ತಿದ್ದ ಇಸ್ರಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದಿನ ಬಯಲಿನಲ್ಲಿ ಒಟ್ಟಿಗೆ ಸೇರಿದರು. ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಧರ್ಮಶಾಸ್ತ್ರದ ಗ್ರಂಥವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ವರ್ಷದ ಏಳನೆಯ ತಿಂಗಳಲ್ಲಿ ಎಲ್ಲಾ ಇಸ್ರೇಲರು ಒಂದೇ ಮನಸ್ಸುಳ್ಳವರಾಗಿ ಕೂಡಿಬಂದರು. ಅವರು ಬುಗ್ಗೆ ಬಾಗಿಲಿನ ಮುಂದಿದ್ದ ಜಾಗದಲ್ಲಿ ಸೇರಿಬಂದರು. ಇಸ್ರೇಲರಿಗೆ ಮೋಶೆಯ ಮೂಲಕವಾಗಿ ಯೆಹೋವನು ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಓದಲು ಜನರು ಎಜ್ರನನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಜನರೆಲ್ಲರು ಏಕವಾಗಿ ನೀರು ಬಾಗಿಲಿಗೆ ಎದುರಾಗಿರುವ ಬೀದಿಯಲ್ಲಿ ಕೂಡಿಕೊಂಡು ಬಂದರು. ಯೆಹೋವ ದೇವರು ಇಸ್ರಾಯೇಲರಿಗೆ ಆಜ್ಞಾಪಿಸಿದ ಮೋಶೆಯ ನಿಯಮದ ಗ್ರಂಥವನ್ನು ತೆಗೆದುಕೊಂಡು ಬರಲು ಜನರು ನಿಯಮಶಾಸ್ತ್ರಿಯಾದ ಎಜ್ರನಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:1
25 ತಿಳಿವುಗಳ ಹೋಲಿಕೆ  

ಎಜ್ರನು ಇಸ್ರಾಯೇಲ್‍ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.


ಆ ಮೂಲೆ ಬುರುಜಿನ ಮತ್ತು ನೀರುಬಾಗಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಸ್ಥಾನದಾಸರ ನಿವಾಸಸ್ಥಾನವು.


ಹಿಲ್ಕೀಯನು ಲೇಖಕನಾದ ಶಾಫಾನನಿಗೆ - ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿರುತ್ತದೆ ಎಂದು ಹೇಳಿ ಅದನ್ನು ಅವನ ಕೈಯಲ್ಲಿಕೊಟ್ಟನು.


ಯಾಜಕನೂ ಶಾಸ್ತ್ರಿಯೂ ಇಸ್ರಾಯೇಲ್ಯರಿಗೆ ಕೊಡಲ್ಪಟ್ಟ ಯೆಹೋವನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ನಕಲು -


ಆದದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕರಾಜ್ಯದ ಬಾಗಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ; ನೀವಂತೂ ಒಳಕ್ಕೆ ಹೋಗುವದಿಲ್ಲ, ಒಳಕ್ಕೆ ಹೋಗಬೇಕೆಂದಿರುವವರನ್ನೂ ಹೋಗಗೊಡಿಸುವದಿಲ್ಲ.


ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಪೀಠದಲ್ಲಿ ಕೂತುಕೊಂಡಿದ್ದಾರೆ;


ಆಗ ಆತನು ಅವರಿಗೆ - ಹೀಗಿರಲಾಗಿ ಪರಲೋಕರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು ಮನೇಯಜಮಾನನಿಗೆ ಹೋಲಿಕೆಯಾಗಿದ್ದಾನೆ. ಅವನು ತನ್ನ ಬೊಕ್ಕಸದೊಳಗಿಂದ ಹೊಸ ವಸ್ತುಗಳನ್ನೂ ಹಳೇ ವಸ್ತುಗಳನ್ನೂ ಹೊರಗೆ ತರುತ್ತಿರುವನು ಎಂದು ಹೇಳಿದನು.


ನನ್ನ ಸೇವಕನಾದ ಮೋಶೆಯ ಧರ್ಮಶಾಸ್ತ್ರವನ್ನು ಅಂದರೆ ನಾನು ಹೋರೇಬ್ ಬೆಟ್ಟದಲ್ಲಿ ಎಲ್ಲಾ ಇಸ್ರಾಯೇಲ್ಯರಿಗೋಸ್ಕರ ಮೋಶೆಗೆ ನೇವಿುಸಿದ ನಿಯಮವಿಧಿಗಳನ್ನು ಜ್ಞಾಪಕಮಾಡಿಕೊಳ್ಳಿರಿ.


ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.


ಇವರು ಬುಗ್ಗೆ ಬಾಗಲನ್ನು ಹಾದು ನೆಟ್ಟಗೆ ದಾವೀದನಗರದ ಸೋಪಾನಗಳ ಮಾರ್ಗವಾಗಿ ಗೋಡೆಯನ್ನನುಸರಿಸಿ ಅರಮನೆಯ ಮೇಲಣ ದಿನ್ನೆಯನ್ನು ಹತ್ತಿ ಪೂರ್ವದಿಕ್ಕಿನಲ್ಲಿರುವ ನೀರು ಬಾಗಲಿನವರೆಗೆ ಹೋದರು.


ಈ ಆಜ್ಞಾನುಸಾರವಾಗಿ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು ತಮ್ಮ ತಮ್ಮ ಅಂಗಳಮಾಳಿಗೆಗಳಲ್ಲಿಯೂ ದೇವಾಲಯದ ಪ್ರಾಕಾರಗಳಲ್ಲಿಯೂ ನೀರು ಬಾಗಲು, ಎಫ್ರಾಯೀಮ್ ಬಾಗಲು ಇವುಗಳ ಮುಂದಣ ಬೈಲುಗಳಲ್ಲಿಯೂ ಪರ್ಣಶಾಲೆಗಳನ್ನು ಮಾಡಿಕೊಂಡರು.


ಇದನ್ನು ಕೇಳಿ ಜನರು ಏಕಮನಸ್ಸಿನಿಂದ - ನಮ್ಮಲ್ಲಿ ಯಾವನೂ ತನ್ನ ಗುಡಾರಕ್ಕೆ ಹೋಗಬಾರದು; ತನ್ನ ಮನೆಗೆ ತಿರುಗಕೂಡದು.


ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲ್ಯರೆಲ್ಲರೂ ಏಕಮನಸ್ಸಿನಿಂದ ಹೊರಟು ವಿುಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ನೆರೆದರು.


ಯೆರೂಸಲೇವಿುನವರನ್ನೂ ಬೇರೆ ಎಲ್ಲಾ ಯೆಹೂದ್ಯರನ್ನೂ ಯಾಜಕರನ್ನೂ ಲೇವಿಯರನ್ನೂ ಕರಕೊಂಡು ಯೆಹೋವನ ಆಲಯಕ್ಕೆ ಹೋದನು. ದೊಡ್ಡವರು ಮೊದಲುಗೊಂಡು ಚಿಕ್ಕವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ನಿಬಂಧನಗ್ರಂಥವನ್ನು ಸಂಪೂರ್ಣವಾಗಿ ಓದಿಸಿ


ಅವನು ಯೆಹೋವ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ ಇಸ್ರಾಯೇಲ್ಯರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಲಿಕ್ಕೂ ದೃಢಮಾಡಿಕೊಂಡಿದ್ದನು.


ಆ ಧರ್ಮಶಾಸ್ತ್ರವನ್ನು ತಂದು ಪ್ರಾತಃಕಾಲದಿಂದ ಮಧ್ಯಾಹ್ನದವರೆಗೂ ಓದಿದನು. ನೀರುಬಾಗಲಿನ ಮುಂದಣ ಬೈಲಿನಲ್ಲಿ ಕೂಡಿಬಂದಿದ್ದ ಸ್ತ್ರೀಪುರುಷರಲ್ಲಿ ಗ್ರಹಿಸಶಕ್ತರಾದವರೆಲ್ಲರೂ ಧರ್ಮಶಾಸ್ತ್ರಪಾರಾಯಣವನ್ನು ಲಾಲಿಸುತ್ತಾ ಇದ್ದರು.


ಮೋಶೆ ಆಜ್ಞಾಪಿಸಿದ ಮೇರೆಗೆ ಅವರು ದೇವದರ್ಶನದ ಗುಡಾರದ ಹತ್ತಿರಕ್ಕೆ ತಂದರು. ಸಮೂಹದವರೆಲ್ಲರೂ ಹತ್ತಿರಕ್ಕೆ ಬಂದು ಯೆಹೋವನ ಸನ್ನಿಧಿಯಲ್ಲಿ ನಿಂತಿರಲಾಗಿ ಮೋಶೆ ಅವರಿಗೆ -


ನಿಮ್ಮ ದೇವರಾದ ಯೆಹೋವನು ಆದುಕೊಂಡ ಸ್ಥಳದಲ್ಲಿ ಇಸ್ರಾಯೇಲ್ಯರೆಲ್ಲರು ಆತನ ಸನ್ನಿಧಿಗೆ ಕೂಡಿ ಬಂದಾಗ ನೀವು ಅವರೆಲ್ಲರಿಗೂ ಕೇಳಿಸುವಂತೆ ಈ ಧರ್ಮಶಾಸ್ತ್ರವನ್ನು ಅವರ ಮುಂದೆ ಓದಬೇಕು.


ಯೆರೂಸಲೇವಿುನವರನ್ನೂ ಬೇರೆ ಎಲ್ಲಾ ಯೆಹೂದ್ಯರನ್ನೂ ಯಾಜಕರು ಪ್ರವಾದಿಗಳು ಇವರನ್ನೂ ಕರಕೊಂಡು ಯೆಹೋವನ ಆಲಯಕ್ಕೆ ಹೋದನು; ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ನಿಬಂಧನಗ್ರಂಥವನ್ನು ಸಂಪೂರ್ಣವಾಗಿ ಓದಿಸಿ


ಇದಾದ ಮೇಲೆ ಪಾರಸಿಯ ರಾಜನಾದ ಅರ್ತಷಸ್ತನ ಆಳಿಕೆಯಲ್ಲಿ ಎಜ್ರನು ಬಾಬೆಲಿನಿಂದ ಬಂದನು. ಇವನು ಸೆರಾಯನ ಮಗನು; ಸೆರಾಯನು ಅಜರ್ಯನ ಮಗನು;


ಇವರಲ್ಲದೆ ಬಾಗಲುಗಳ ಬಳಿಯಲ್ಲಿದ್ದ ಉಗ್ರಾಣಗಳನ್ನು ಕಾಯತಕ್ಕ ದ್ವಾರಪಾಲಕರಾದ ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್, ಅಕ್ಕೂಬ್ ಎಂಬವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು