Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:20 - ಕನ್ನಡ ಸತ್ಯವೇದವು J.V. (BSI)

20 ಅವರಿಗೆ ಉಪದೇಶಿಸಲು ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ. ಅವರ ಬಾಯಿಂದ ಮನ್ನವನ್ನು ಹಿಂದೆಗೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರನ್ನು ಉಪದೇಶಿಸಲು ನೀನು ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಅವರ ಬಾಯಿಂದ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದಾಗ ಅವರಿಗೆ ನೀರನ್ನು ಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವರಿಗಿತ್ತಿರಿ ಉಪದೇಶಿಸಲು ಸತ್ಯಾತ್ಮವನು ಅವರ ಬಾಯಿಂದ ಹಿಂದೆಗೆಯಲಿಲ್ಲ ಮನ್ನವನು ಬಾಯಾರಿದ್ದಾಗ ಕುಡಿಯಲಿತ್ತಿರಿ ಅವರಿಗೆ ನೀರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅವರು ಬುದ್ಧಿವಂತರಾಗುವಂತೆ ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಮನ್ನವನ್ನು ಅವರಿಗೆ ಆಹಾರವಾಗಿ ಕೊಟ್ಟೆ. ಅವರು ಬಾಯಾರಿದಾಗ ನೀರು ಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇದಲ್ಲದೆ ನೀವು ಅವರಿಗೆ ಬೋಧಿಸುವ ನಿಮ್ಮ ಒಳ್ಳೆಯ ಆತ್ಮವನ್ನು ಕೊಟ್ಟಿರಿ. ಅವರ ಬಾಯಿಂದ ನಿಮ್ಮ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದ ಅವರಿಗೆ ನೀರನ್ನು ಕೊಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:20
24 ತಿಳಿವುಗಳ ಹೋಲಿಕೆ  

ನಿನ್ನ ಚಿತ್ತದಂತೆ ನಡಕೊಳ್ಳುವದನ್ನು ನನಗೆ ಕಲಿಸು; ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಮಟ್ಟನೆಲದಲ್ಲಿ ನಡಿಸಲಿ.


ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮೀಯ ವರಗಳಲ್ಲಿ ಕೆಲವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಭಾರವನ್ನು ವಹಿಸಬೇಕಾಗಿರುವದಿಲ್ಲ; ನಿನ್ನ ಜೊತೆಯಲ್ಲಿ ಇವರೂ ವಹಿಸುವರು.


ಅದಕ್ಕೆ ಯೇಸು - ದೇವರು ಕೊಡುವ ವರವೇನೆಂಬದೂ ಕುಡಿಯುವದಕ್ಕೆ ನೀರುಕೊಡು ಎಂದು ನಿನಗೆ ಹೇಳಿದವನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಅವನನ್ನು ಬೇಡಿಕೊಳ್ಳುತ್ತಿದ್ದಿ, ಅವನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಅಂದನು.


ಯಾಕಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ; ಮನುಷ್ಯರು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತಾಡಿದರು.


ಆತನು ಅವರನ್ನು ಮರುಭೂವಿುಯಲ್ಲಿ ನಡಿಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು.


ಬೆಳಕಿನವರಂತೆ ನಡೆದುಕೊಳ್ಳಿರಿ. ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.


ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ; ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ಒರತೆಯಾಗಿದ್ದು ನಿತ್ಯಜೀವವನ್ನು ಉಂಟುಮಾಡುವದು ಎಂದು ಹೇಳಿದನು.


ಆತನು ಬಂಡೆಯನ್ನು ಸೀಳಲು ನೀರು ಚಿವ್ಮಿು ಬಂದು ಅರಣ್ಯದಲ್ಲಿ ನದಿಯಾಗಿ ಹರಿಯಿತು.


ಆ ದೇಶದ ಹುಟ್ಟುವಳಿಯನ್ನು ಊಟಮಾಡಿದ ಮರುದಿವಸವೇ ಮನ್ನವು ನಿಂತುಹೋಯಿತು. ಅದು ಅವರಿಗೆ ತಿರಿಗಿ ಸಿಕ್ಕಲೇ ಇಲ್ಲ. ಇಸ್ರಾಯೇಲ್ಯರು ಆ ವರುಷದಲ್ಲೆಲ್ಲಾ ಕಾನಾನ್ ದೇಶದ ಉತ್ಪನ್ನವನ್ನು ಅನುಭವಿಸುತ್ತಿದ್ದರು.


ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನ್ನೆದುರಾಗಿ ನಿಲ್ಲುವೆನು. ನೀನು ಆ ಬಂಡೆಯನ್ನು ಹೊಡೆದಾಗ ಅದರಿಂದ ನೀರು ಹೊರಡುವದು, ಜನರು ಕುಡಿಯುವರು ಎಂದು ಮೋಶೆಗೆ ಅಪ್ಪಣೆ ಕೊಡಲಾಗಿ ಮೋಶೆ ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.


ಇಸ್ರಾಯೇಲ್ಯರು ಅದನ್ನು ಕಂಡು ಇಂಥದೆಂದು ತಿಳಿಯದೆ ಒಬ್ಬರಿಗೊಬ್ಬರು ಇದೇನಿರಬಹುದು ಎಂದು ಹೇಳಿಕೊಂಡರು. ಮೋಶೆ ಅವರಿಗೆ - ಇದು ಯೆಹೋವನು ನಿಮಗೋಸ್ಕರ ಕೊಟ್ಟ ಆಹಾರವು; ಯೆಹೋವನು ಇದರ ವಿಷಯದಲ್ಲಿ ಆಜ್ಞಾಪಿಸಿದ್ದೇನಂದರೆ -


ನೀನು ಅನೇಕವರ್ಷಗಳ ತನಕ ಅವರ ವಿಷಯದಲ್ಲಿ ತಾಳಿಕೊಂಡು ಪ್ರವಾದಿಗಳ ಮುಖಾಂತರ ಮಾತಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟಿ.


ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಬಲೀಯವಾಗಿ ವಿಜ್ಞಾಪಿಸಿಕೊಳ್ಳಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ನಿವಿುತ್ತವಾಗಿಯೂ ಪವಿತ್ರಾತ್ಮನಿಂದಾಗುವ ಪ್ರೀತಿಯ ನಿವಿುತ್ತವಾಗಿಯೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಅವರಿಗೆ ಹಸಿವೆ ಬಾಯಾರಿಕೆಗಳು ಆಗವು. ಝಳವೂ ಬಿಸಿಲೂ ಬಡಿಯವು; ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರುಕ್ಕುವ ಒರತೆಗಳ ಬಳಿಯಲ್ಲಿ ನಡಿಸುವನು.


ಇಸ್ರಾಯೇಲ್ಯರು ಜನವಾಸವಿರುವ ಪ್ರದೇಶಕ್ಕೆ ಬರುವ ತನಕ ಅಂದರೆ ಕಾನಾನ್ ದೇಶದ ಮೇರೆಯನ್ನು ಸೇರುವ ತನಕ ನಾಲ್ವತ್ತು ವರುಷ ಮನ್ನವನ್ನೇ ಊಟಮಾಡುತ್ತಿದ್ದರು.


ಅವರೆಲ್ಲರೂ ದೈವಿಕವಾದ ಒಂದೇ ಆಹಾರವನ್ನು ತಿಂದರು;


ನೀವು ಐಗುಪ್ತದಿಂದ ಪಾರಾಗಿ ಬಂದಾಗ ನಾನು ನಿಮಗೆ ಪ್ರಮಾಣವಾಗಿ ಕೊಟ್ಟ ಮಾತನ್ನು [ನೆರವೇರಿಸುವೆನು]; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ,


ಆಗ ಯೆಹೋವನು ಮೋಶೆಗೆ - ಇಗೋ ನಾನು ಆಕಾಶದಿಂದ ನಿಮಗೋಸ್ಕರ ಆಹಾರವನ್ನು ಸುರಿಸುವೆನು. ಈ ಜನರು ಪ್ರತಿದಿನವೂ ಹೊರಗೆ ಹೋಗಿ ಆಯಾ ದಿನಕ್ಕೆ ಬೇಕಾದಷ್ಟು ಮಾತ್ರ ಕೂಡಿಸಿಕೊಳ್ಳಬೇಕು. ಇದರಿಂದ ಇವರು ನನ್ನ ಬೋಧನೆಯನ್ನು ಅನುಸರಿಸಿ ನಡೆಯುವವರೋ ಅಲ್ಲವೋ ಎಂದು ಪರೀಕ್ಷಿಸಿ ತಿಳಿಯುತ್ತೇನೆ.


ಅಲ್ಲಿ ಜನರು ನೀರಿಲ್ಲದೆ ಬಾಯಾರಿಕೆಯ ಸಂಕಟದಿಂದ ಮೋಶೆಯ ಮೇಲೆ ಗುಣುಗುಟ್ಟುತ್ತಾ - ನೀನು ನಮ್ಮನ್ನೂ ನಮ್ಮ ಮಕ್ಕಳನ್ನೂ ದನಗಳನ್ನೂ ಐಗುಪ್ತ ದೇಶದಿಂದ ಕರತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು