Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:37 - ಕನ್ನಡ ಸತ್ಯವೇದವು J.V. (BSI)

37 ನಮ್ಮ ಕಾಯಗಳ ಮೇಲೆಯೂ ಪಶುಗಳ ಮೇಲೆಯೂ ಅವರು ಅಧಿಕಾರ ನಡಿಸುತ್ತಾರೆ. ನಾವು ಮಹಾಸಂಕಟದಲ್ಲಿರುತ್ತೇವೆ ಅಯ್ಯೋ ಎಂದು ಪ್ರಾರ್ಥಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ನಮ್ಮ ಪಾಪಗಳ ನಿಮಿತ್ತವಾಗಿ ನಿನ್ನಿಂದ ನಮ್ಮ ಮೇಲೆ ನೇಮಿಸಲ್ಪಟ್ಟ ರಾಜರಿಗೆ ಈ ದೇಶದ ಹೇರಳವಾದ ಹುಟ್ಟುವಳಿಯು ಹೋಗುತ್ತಾ ಇದೆ. ದೈಹಿಕವಾಗಿ ನಮ್ಮ ಮೇಲೆ ಹಾಗೂ ನಮ್ಮ ಪಶುಗಳ ಮೇಲೆ ಅವರು ಮನಸ್ಸಿಗೆ ಬಂದಂತೆ ಅಧಿಕಾರ ನಡಿಸುತ್ತಿದ್ದಾರೆ. ನಾವು ಮಹಾಸಂಕಟದಲ್ಲಿದ್ದೇವೆ” ಎಂದು ಪ್ರಾರ್ಥಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನಮ್ಮ ಪಾಪದ ನಿಮಿತ್ತ ಅಧೀನರಾಗಿಸಿದಿರಿ ಅನ್ಯರಾಜರಿಗೆ ಈ ನಾಡಿನ ಸಿರಿಸಂಪತ್ತು ಹರಿದುಹೋಗುತ್ತಿದೆ ಆ ಅರಸರಿಗೆ ನಮ್ಮೊಡಲು, ದನಕರುಗಳು, ಈಡಾಗಿವೆ ಅವರ ದಬ್ಬಾಳಿಕೆಗೆ ಅಕಟಕಟ, ನಾವು ಸಿಕ್ಕಿಕೊಂಡಿದ್ದೇವೆ, ಮಹಾಸಂಕಟಕೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಫಸಲು ಇಲ್ಲಿ ಉತ್ತಮವಾಗಿದೆ. ನಾವು ಪಾಪಮಾಡಿದ್ದರಿಂದ ನಮ್ಮ ಸುಗ್ಗಿಯು ನಮ್ಮನ್ನಾಳುವ ರಾಜರಿಗೆ ಹೋಗಿಬಿಡುತ್ತದೆ. ಆ ರಾಜರುಗಳು ನಮ್ಮನ್ನೂ ನಮ್ಮ ದನಕರುಗಳನ್ನೂ ತಮ್ಮ ಹತೋಟಿಯೊಳಗೆ ಇಟ್ಟಿರುತ್ತಾರೆ. ನಮ್ಮನ್ನು ತಮಗೆ ಇಷ್ಟಬಂದಂತೆ ನಡಿಸುತ್ತಾರೆ. ಆದ್ದರಿಂದ ನಾವು ಬಹಳ ಸಂಕಟದಲ್ಲಿ ಸಿಕ್ಕಿಕೊಂಡಿದ್ದೇವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ನಮ್ಮ ಪಾಪಗಳ ನಿಮಿತ್ತ ನೀವು ನಮ್ಮ ಮೇಲೆ ಇಟ್ಟ ಅರಸರಿಗೆ ಅದರ ಹುಟ್ಟುವಳಿ ಬಹಳವಾಗಿ ಹೋಗುತ್ತಿದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಮೇಲೆಯೂ, ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ. ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:37
11 ತಿಳಿವುಗಳ ಹೋಲಿಕೆ  

ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು.


ಆಗ ನೀವು ಹಸಿವು ಬಾಯಾರಿಕೆಗಳುಳ್ಳವರಾಗಿ ಬಟ್ಟೆಯೂ ಏನೂ ಇಲ್ಲದೆ ಆ ಶತ್ರುಗಳಿಗೇ ಸೇವಕರಾಗಬೇಕಾಗುವದು. ಆತನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.


ಇದಲ್ಲದೆ ಆ ದೇವಾಲಯದ ಯಾಜಕ ಲೇವಿಯ ಗಾಯಕ ದ್ವಾರಪಾಲಕ ದಾಸ ಮುಂತಾದ ಸೇವಕರಲ್ಲಿ ಯಾವನಿಂದಾದರೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿ ಮಾಡುವದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬದಾಗಿ ತಿಳಿದಿರಲಿ.


ಅದಕ್ಕವರು - ನಾವು ಅಬ್ರಹಾಮನ ಸಂತಾನದವರು; ನಾವು ಯಾರಿಗೂ ಎಂದೂ ದಾಸರಾಗಿಲ್ಲ; ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಳುವದು ಹೇಗೆ? ಅಂದರು.


ನಾವು ನವ್ಮಿುಂದಾಗುವಷ್ಟು ಮಟ್ಟಿಗೆ ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲ್ಪಟ್ಟವರನ್ನು ಹಣಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನು ಮಾರಿಬಿಡುತ್ತೀರಿ; ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು ಅನ್ನಲು ಅವರು ಉತ್ತರಕೊಡದೆ ಸುಮ್ಮನಿದ್ದರು.


ಆ ದೇವಾಲಯವನ್ನು ಕಟ್ಟುವದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ ಹೊಳೆಯಾಚೆಯ ಪ್ರಾಂತಗಳ ಕಪ್ಪದಿಂದ ತಡಮಾಡದೆ ಎಲ್ಲಾ ವೆಚ್ಚವನ್ನು ಕೊಡಬೇಕೆಂಬದಾಗಿಯೂ


ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವದು ಕೊನೆಗಾಣುವದಾದರೆ ಅವರು ಕಪ್ಪ ತೆರಿಗೆ ಸುಂಕಗಳನ್ನು ಕೊಡಲಿಕ್ಕಿಲ್ಲ. ಮತ್ತು ಕಡೆಯಲ್ಲಿ ಅರಸರಿಗೆ ನಷ್ಟವುಂಟಾಗುವದೆಂದು ಖಾವಂದರಿಗೆ ತಿಳಿದಿರಲಿ.


ಅವರು ನಿಮ್ಮ ದನಗಳನ್ನೂ ಬೆಳೆಗಳನ್ನೂ ತಿಂದುಬಿಟ್ಟು ನಿಮಗೆ ಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ದನಕುರಿಗಳ ಸಂತಾನವನ್ನಾಗಲಿ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.


ನೀವು ದ್ರಾಕ್ಷಾವ್ಯವಸಾಯವನ್ನು ಎಷ್ಟು ಮಾಡಿದರೂ ಅದರ ಹಣ್ಣುಗಳನ್ನು ಹುಳಗಳೇ ತಿಂದುಹಾಕುವದರಿಂದ ನೀವು ಕೂಡಿಸಿಕೊಳ್ಳುವದಿಲ್ಲ, ಅವುಗಳ ರಸವನ್ನು ರುಚಿನೋಡುವದಿಲ್ಲ.


ನಾನು ನಿಮ್ಮ ಮೇಲೆ ಉಗ್ರಕೋಪವನ್ನು ಮಾಡುವದರಿಂದ ನೀವು ನಿಮ್ಮ ಶತ್ರುಗಳ ಎದುರಿನಿಂದ ಸೋತು ಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಹಿಂದಟ್ಟದೆ ಇರುವಾಗಲೂ ನೀವು ಹೆದರಿ ಓಡುವಿರಿ.


ನಮ್ಮನ್ನು ಹಿಂದಟ್ಟುವವರು ನಮ್ಮ ಹೆಗ್ಗತ್ತನ್ನು ಹಿಡಿದಿದ್ದಾರೆ, ಬಳಲಿಹೋಗಿದ್ದೇವೆ, ಯಾವ ವಿಶ್ರಾಂತಿಯೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು