Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:15 - ಕನ್ನಡ ಸತ್ಯವೇದವು J.V. (BSI)

15 ಆಕೆಯು - ನನಗೊಂದು ದಾನಕೊಡಬೇಕು; ನನ್ನನ್ನು ಬೆಗ್ಗಾಡಿಗೆ ಕೊಟ್ಟುಬಿಟ್ಟಿಯಲ್ಲಾ, ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು ಅಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಕೆಯು, “ನನಗೊಂದು ದಾನಕೊಡಬೇಕು; ನೀನು ನನ್ನನ್ನು ದಕ್ಷಿಣ ಪ್ರಾಂತ್ಯಕ್ಕೆ ಕೊಟ್ಟುಬಿಟ್ಟಿಯಲ್ಲಾ, ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಅಂದಳು. ಆಗ ಅವನು ಆಕೆಗೆ ಮೇಲಣ ಬುಗ್ಗೆ ಮತ್ತು ಕೆಳಗಣ ಪ್ರದೇಶದ ಬುಗ್ಗೆಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಬುಗ್ಗೆಗಳಿರುವ ಭೂಮಿಯನ್ನು ದಾನವಾಗಿ ಕೊಡಿ,” ಎಂದಳು. ಕಾಲೇಬನು ಆಕೆಗೆ ಮೇಲಿನ ಹಾಗು ಕೆಳಗಿನ ಬುಗ್ಗೆಗಳನ್ನು ದಾನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅದಕ್ಕೆ ಅವಳು, “ನನಗೊಂದು ದಾನ ಕೊಡಬೇಕು. ನೀನು ನನಗೆ ನೆಗೆವಿನಲ್ಲಿ ನೀರಿಲ್ಲದ ಮರುಭೂಮಿಯನ್ನು ಕೊಟ್ಟಿರುವೆ. ದಯವಿಟ್ಟು ನನಗೆ ಸ್ವಲ್ಪ ನೀರಿನ ಬುಗ್ಗೆಗಳಿರುವ ಭೂಮಿಯನ್ನು ಕೊಡು” ಎಂದಳು. ಅವಳು ಕೇಳಿಕೊಂಡಂತೆಯೇ ಕಾಲೇಬನು ಅವಳಿಗೆ ಮೇಲಿನ ಮತ್ತು ಕೆಳಗಿನ ಬುಗ್ಗೆಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅದಕ್ಕೆ ಅವಳು ಅವನಿಗೆ, “ನನಗೆ ಒಂದು ಸಹಾಯಮಾಡಬೇಕು. ಮೊದಲು ದಕ್ಷಿಣ ಹೊಲವನ್ನು ನೀನು ನನಗೆ ಕೊಟ್ಟೆ; ನೀರಿನ ಬುಗ್ಗೆಗಳನ್ನು ಸಹ ನನಗೆ ಕೊಡು,” ಎಂದಳು. ಆಗ ಕಾಲೇಬನು ಅವಳಿಗೆ ಮೇಲಿನ ಹಾಗೂ ಕೆಳಗಿನ ನೀರಿನ ಬುಗ್ಗೆಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:15
9 ತಿಳಿವುಗಳ ಹೋಲಿಕೆ  

ಅಪಕಾರಕ್ಕೆ ಅಪಕಾರವನ್ನು ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.


ಭೂವಿುಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿವಿುತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;


ಹೀಗಿರಲಾಗಿ ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಕೊಡುತ್ತೇವೆಂದು ನೀವು ಮೊದಲು ಹೇಳಿದ ಧರ್ಮದ್ರವ್ಯವನ್ನು ಸಿದ್ಧಪಡಿಸಬೇಕೆಂಬದಾಗಿ ಇವರನ್ನು ಬೇಡಿಕೊಳ್ಳುವದು ಅವಶ್ಯವೆಂದು ನನಗೆ ತೋಚಿತು. ಹೀಗೆ ಆ ಹಣವು ಸುಲಿಗೆಯಂತೆ ಬಾರದೆ ಧರ್ಮಾರ್ಥವಾಗಿಯೇ ಸಿದ್ಧವಾಗುವದು.


ನಿನ್ನ ದಾಸಿಯು ತಂದ ಈ ಕಾಣಿಕೆಯು ಸ್ವಾವಿುಯ ಸೇವಕರಿಗೆ ಸಲ್ಲಲಿ.


ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿ, ಎರಡು ಬುದ್ದಲಿ ದ್ರಾಕ್ಷಾರಸ, ಸಿದ್ಧಮಾಡಿದ ಐದು ಕುರಿಗಳ ಮಾಂಸ, ಐವತ್ತು ಸೇರು ಹುರಿಗಾಳು, ಒಣಗಿದ ನೂರು ದ್ರಾಕ್ಷೇಗೊಂಚಲುಗಳು, ಅಂಜೂರ ಹಣ್ಣುಗಳ ಇನ್ನೂರು ಉಂಡೆಗಳು ಇವುಗಳನ್ನು ಕತ್ತೆಗಳ ಮೇಲೆ ಹೇರಿಸಿ ತನ್ನ ಸೇವಕರಿಗೆ -


ದೇವರು ನನಗೆ ಕೃಪೆಯನ್ನು ಮಾಡಿದ್ದರಿಂದ ನನಗೆ ಸಮೃದ್ಧಿಯುಂಟು; ಆದಕಾರಣ ನಾನು ಸಮರ್ಪಿಸುವ ಕಾಣಿಕೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು ಎಂದು ಹೇಳಿ ಏಸಾವನನ್ನು ಬಲವಂತಮಾಡಿದ್ದರಿಂದ ಅವನು ಆ ಕಾಣಿಕೆಯನ್ನು ತೆಗೆದುಕೊಂಡನು.


ನನಗೊಂದು ದಾನ ಕೊಡಬೇಕು; ನನ್ನನ್ನು ಬೆಗ್ಗಾಡಿಗೆ ಕೊಟ್ಟುಬಿಟ್ಟಿಯಲ್ಲಾ; ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು ಅಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು.


ಆಕೆಯು ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಭೂವಿುಯನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯಿಂದ ಇಳಿದಳು. ಕಾಲೇಬನು ನಿನಗೇನು ಬೇಕೆಂದು ಆಕೆಯನ್ನು ಕೇಳಲು


ಕೇನ್ಯನೂ ಮೋಶೆಯ ಮಾವನೂ ಆದ [ಹೋಬಾಬನ] ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು