Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:27 - ಕನ್ನಡ ಸತ್ಯವೇದವು J.V. (BSI)

27 ಮನಸ್ಸೆಯವರು ಬೇತ್‍ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳನ್ನೂ ಅವುಗಳ ಗ್ರಾಮಗಳನ್ನೂ ಸ್ವಾಧೀನಮಾಡಿಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮನಸ್ಸೆಯವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ವಾಸವಾಗಿದ್ದವರನ್ನು ಹೊರಡಿಸಿಬಿಡಲಿಲ್ಲ. ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ದೃಢಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಮನಸ್ಸೆಕುಲದವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳನ್ನೂ ಅವುಗಳ ಗ್ರಾಮಗಳನ್ನೂ ಸ್ವಾಧೀನಮಾಡಿಕೊಳ್ಳಲಿಲ್ಲ, ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ನಿರ್ಧರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬೇತ್‌ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ನಗರಗಳಲ್ಲಿ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಪಟ್ಟಣಗಳಲ್ಲಿ ಕಾನಾನ್ಯರು ವಾಸವಾಗಿದ್ದರು. ಕಾನಾನ್ಯರನ್ನು ಈ ನಗರಗಳಿಂದ ಹೊರದೂಡುವುದು ಮನಸ್ಸೆ ಕುಲದವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಕಾನಾನ್ಯರು ನೆಲೆನಿಂತರು. ಅವರು ತಮ್ಮ ಮನೆಗಳನ್ನು ಬಿಡಲು ಸಮ್ಮತಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಮನಸ್ಸೆಯ ಗೋತ್ರದವರು ಬೇತ್ ಷೆಯಾನರನ್ನೂ, ಅವರ ಊರುಗಳವರನ್ನೂ; ತಾನಕದವರನ್ನೂ, ಅವರ ಊರುಗಳವರನ್ನೂ; ದೋರಿನವರನ್ನೂ, ಅವರ ಊರುಗಳವರನ್ನೂ; ಇಬ್ಲೆಯಾಮಿನವರನ್ನೂ, ಅವರ ಊರುಗಳವರನ್ನೂ, ಮೆಗಿದ್ದೋನಿನವರನ್ನೂ, ಅವರ ಊರುಗಳವರನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಆ ದೇಶದಲ್ಲಿ ವಾಸಿಸಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:27
16 ತಿಳಿವುಗಳ ಹೋಲಿಕೆ  

ಯೆಹೋವನು ನೇವಿುಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ತನ್ನ ಕತ್ತಿಯನ್ನು ರಕ್ತಸುರಿಸದಂತೆ ತಡೆಯುವವನಿಗೆ ಶಾಪತಗಲಲಿ.


ಸೌಲನೂ ಇಸ್ರಾಯೇಲ್ಯರೂ ಅಗಾಗನನ್ನೂ ಮೇಲ್ತರದ ಕುರಿ ದನಗಳನ್ನೂ ಕುರಿಮರಿಗಳನ್ನೂ ಕೊಬ್ಬಿದ ಪಶುಗಳನ್ನೂ ಶ್ರೇಷ್ಠವಾದ ಎಲ್ಲಾ ಪದಾರ್ಥಗಳನ್ನೂ ನಾಶಮಾಡ ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ನಾಶಮಾಡಿಬಿಟ್ಟರು.


ಅರಸರು ಬಂದು ಯುದ್ಧಮಾಡಿದರು; ಕಾನಾನ್ಯರಾಜರು ಮೆಗಿದ್ದೋ ಪ್ರವಾಹಗಳ ಬಳಿಯಲ್ಲಿರುವ ತಾನಾಕದಲ್ಲಿ ಕೂಡಿಬಂದು ಕಾದಿದರು. ಅವರಿಗೆ ದ್ರವ್ಯವೇನೂ ಸಿಕ್ಕಲಿಲ್ಲ.


ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು - ಕಾನಾನ್ಯರೊಡನೆ ಯುದ್ಧಮಾಡುವದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ಯೆಹೋವನನ್ನು ಕೇಳಲು


ಮನಸ್ಸೆ ಕುಲದ ಅರ್ಧಜನರ ಸ್ವಾಸ್ತ್ಯದಿಂದ ತಾನಾಕ್, ಗತ್‍ರಿಮ್ಮೋನ್ ಎಂಬ ಎರಡು ಗೋಮಾಳ ಸಹಿತವಾದ ಪಟ್ಟಣಗಳೂ ಚೀಟಿನಿಂದ ದೊರಕಿದವು.


ನಿಮ್ಮ ಎದುರಿನಿಂದ ಹೊರಡಿಸುವವನಾಗಿ ಅವರನ್ನು ನಿಮ್ಮಿಂದ ಪರಾಜಯಪಡಿಸುವಾಗ ನೀವು ಅವರನ್ನು ನಿಶ್ಶೇಷವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು.


ನೀವು ಅವರೊಡನೆಯಾಗಲಿ ಅವರ ದೇವತೆಗಳೊಡನೆಯಾಗಲಿ ಯಾವ ವಿಧವಾದ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು.


ಅವನು ಹಿತ್ತಿಯರ ದೇಶಕ್ಕೆ ಹೋಗಿ ಒಂದು ಪಟ್ಟಣವನ್ನು ಕಟ್ಟಿಕೊಂಡು ಅದಕ್ಕೆ ಲೂಜೆಂದು ಹೆಸರಿಟ್ಟನು; ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ.


ಇಸ್ರಾಯೇಲ್ಯರು ಬಲಗೊಂಡ ಮೇಲೆ ಅವರನ್ನು ದಾಸತ್ವಕ್ಕೆ ಹಚ್ಚಿದರೇ ಹೊರತು ಅಲ್ಲಿಂದ ಅಟ್ಟಿಬಿಡಲಿಲ್ಲ.


ಯೆಹೂದ್ಯರ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತ್‍ಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ - ಅವನನ್ನೂ ರಥದಲ್ಲಿಯೇ ಹೊಡಿಯಿರಿ ಎಂದು ಕೂಗಲು ಅವನ ಜನರು ಇಬ್ಲೆಯಾವಿುನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.


ಯೆರೂಸಲೇವಿುನಲ್ಲಿದ್ದ ಯೆಬೂಸಿಯರನ್ನು ಹೊರಡಿಸುವದು ಬೆನ್ಯಾಮೀನ್ಯರಿಂದ ಆಗದೆ ಹೋಯಿತು. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇವಿುನಲ್ಲಿಯೇ ವಾಸವಾಗಿದ್ದಾರೆ.


ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಗುಡಿಯಲ್ಲಿಟ್ಟರು; ಅವನ ಶವವನ್ನು ಬೇತ್ಷೆಯಾನಿನ ಕೋಟೆ ಗೋಡೆಗೆ ನೇತುಹಾಕಿದರು.


ಪೆರಿಜ್ಜೀಯ, ಹಿವ್ವೀಯ, ಯೆಬೂಸಿಯ ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನು ತನ್ನ ಕೆಲಸಕ್ಕಾಗಿ ಬಿಟ್ಟಿಹಿಡಿದನು. ಇಂದಿನವರೆಗೂ ಅವರು ಬಿಟ್ಟೀ ಕೆಲಸದವರಾಗಿರುತ್ತಾರೆ.


ಅವನ ಕಾಲದಲ್ಲಿ ಐಗುಪ್ತದ ಅರಸನಾದ ಫರೋಹ ನೆಕೋ ಎಂಬವನು ಅಶ್ಶೂರದ ಅರಸನಿಗೆ ವಿರೋಧವಾಗಿ ಯುದ್ಧಮಾಡುವದಕ್ಕೋಸ್ಕರ ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು ಕೂಡಲೆ ಅವನಿಂದ ಹತನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು